ಕರ್ನಾಟಕ

karnataka

ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ: ವಿಜಯೇಂದ್ರ - B Y Vijayendra

By ETV Bharat Karnataka Team

Published : Apr 12, 2024, 12:29 PM IST

Updated : Apr 12, 2024, 12:55 PM IST

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಥ್​ ನೀಡಿದ್ದಾರೆ.

vijayendra
ವಿಜಯೇಂದ್ರ

ವಿಜಯೇಂದ್ರ

ಬಳ್ಳಾರಿ: ''ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ. ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಸಮಯ ಇದೆ, ನೋಡೋಣ. ಬಳ್ಳಾರಿಯ ಬಗ್ಗೆ ಮಾತನಾಡಿ'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದರು.

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಬಿ.ವೈ. ವಿಜಯೇಂದ್ರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ''ಯಡಿಯೂರಪ್ಪ ಆದೇಶದಂತೆ ಬಳ್ಳಾರಿಗೆ ಬಂದಿದ್ದೇನೆ. ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ಬಿಜೆಪಿಯ ಗೆಲುವು ಖಚಿತ. ಶ್ರೀರಾಮುಲು ದಾಖಲೆಯ ಅಂತರದ ಜಯ ಸಾಧಿಸಲಿದ್ದಾರೆ. ಬಳ್ಳಾರಿಗೆ ಯಡಿಯೂರಪ್ಪ ಸೇರಿದಂತೆ ಇತರ ನಾಯಕರು ಪ್ರಚಾರಕ್ಕೆ ಆಗಮಿಸಲಿದ್ದಾರೆ. ರಾಜ್ಯದ 30 ಜನ ಸಚಿವರನ್ನು ಕರೆ ತಂದರೂ ಬಳ್ಳಾರಿಯಲ್ಲಿ ಬಿಜೆಪಿ ಗೆಲುವು ಶತಸಿದ್ಧ'' ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಮುಖ ಲಿಂಗಾಯತ ಮುಖಂಡರ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ''ನಾನೀಗ ಯಾವುದೇ ಲಿಂಗಾಯತ ಮುಖಂಡರ ಸಭೆ ಮಾಡಿಲ್ಲ. ಕೆಲಕಾಲ ಮಾತನಾಡಿದ್ದೇನಷ್ಟೇ. ಮುಂದಿನ ದಿನಗಳಲ್ಲಿ ಇಂಟಲೆಕ್ಚುವಲ್ಸ್​​ ಸಭೆ ಕರೆಯಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಆಗಲು ಕಾರಣಗಳು ಬಹಳಷ್ಟಿವೆ. ಅದರ ಬಗ್ಗೆ ಈ ಚರ್ಚೆ ಮಾಡಲು ಹೋಗುವುದಿಲ್ಲ. ಎಲ್ಲವನ್ನೂ ಮರೆತು, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷದವರು ಒಂದಾಗಿ ಕೆಲಸ ಮಾಡಬೇಕಿದೆ'' ಎಂದು ವಿಜಯೇಂದ್ರ ಕರೆ ನೀಡಿದರು.

ಇದನ್ನೂ ಓದಿ:'ಮೋದಿ ಫೋಟೋ ಕೈಬಿಟ್ಟು ತಂದೆ, ತಮ್ಮನ ಫೋಟೋ ಇಟ್ಟುಕೊಂಡು ರಾಘವೇಂದ್ರ ಪ್ರಚಾರ ಮಾಡಲಿ ನೋಡೋಣ' - K S Eshwarappa

ಈ ಚುನಾವಣೆಯು ವಿಜಯೇಂದ್ರ ವರ್ಸಸ್​ ಸಿದ್ದರಾಮಯ್ಯ ಅಂತಾನಾ ಎಂಬ ಮಾಧ್ಯಮದವರ ಪ್ರಶ್ನೆ ಪ್ರತಿಕ್ರಿಯಿಸಿದ ಅವರು, ''ಹಾಗೇನಿಲ್ಲ, ಹೊಸ ಚರ್ಚೆಗೆ ಅವಕಾಶ ಮಾಡಿಕೊಡುವುದು ಬೇಡ. ಎಲ್ಲ 28 ಕ್ಷೇತ್ರಗಳಲ್ಲಿಯೂ ಬಿಜೆಪಿ - ಜೆಡಿಎಸ್ ಮೈತ್ರಿ ಪಕ್ಷಗಳು​ ಗೆಲ್ಲಬೇಕು ಎಂಬುದೇ ನಮ್ಮ ಗುರಿಯಾಗಿದೆ. ಆ ಒಂದು ಆತ್ಮವಿಶ್ವಾಸದೊಂದಿಗೆ ನಾವೀಗ ಮುನ್ನುಗ್ಗುತ್ತಿದ್ದೇವೆ'' ಎಂದು ತಿಳಿಸಿದರು.

ವಿವಿ ಸಂಘದ ಸಭೆ:ಗಾಂಧಿನಗರದಲ್ಲಿನ ಬಳ್ಳಾರಿಯ ವಿವಿ ಸಂಘಕ್ಕೆ ಆಗಮಿಸಿದ ಬಿವೈ ವಿಜಯೇಂದ್ರ ಸಂಘದ ಸದ್ಯಸ್ಯರ ಜೊತೆ ಕೆಲಕಾಲ ಚರ್ಚೆ ನಡೆಸಿದರು. ಕಳೆದ ಚುನಾವಣೆಯಲ್ಲಿ ಬಿಜೆಪಿಯು ಬಳ್ಳಾರಿ ಜಿಲ್ಲೆಯಲ್ಲಿ 5 ಸ್ಥಾನಗಳನ್ನು ಕಳೆದುಕೊಂಡಿತ್ತು. ಕಳೆದ ಚುನಾವಣೆಯಲ್ಲಿ ಲಿಂಗಾಯತ ಮತಗಳನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ಸೋಲು ಕಂಡಿತ್ತು ಎನ್ನಲಾಗಿತ್ತು. ಹೀಗಾಗಿ, ಬಳ್ಳಾರಿ - ವಿಜಯನಗರ ಜಿಲ್ಲೆಗಳ ಪ್ರಮುಖ ಲಿಂಗಾಯತ ಮುಖಂಡರ ಸಭೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಕುಟುಂಬ ಸದಸ್ಯರನ್ನು ಬಿಜೆಪಿಯಿಂದ ನಿಲ್ಲಿಸಿ, ಜೆಡಿಎಸ್ ಪಕ್ಷ ಹೇಗೆ ಕಟ್ಟುತ್ತಾರೆ: ಡಿ.ಕೆ.ಶಿವಕುಮಾರ್ ಲೇವಡಿ

Last Updated :Apr 12, 2024, 12:55 PM IST

ABOUT THE AUTHOR

...view details