ಕರ್ನಾಟಕ

karnataka

ಲಕ್ಷ್ಮೀ ಹೆಬ್ಬಾಳ್ಕರ್ ಪಂಚಮಸಾಲಿ ಹೌದೋ, ಅಲ್ವೋ? ಕೂಡಲಸಂಗಮ ಸ್ವಾಮೀಜಿ ಹೇಳಿದ್ದೇನು? - Kudalasangama Swamiji

By ETV Bharat Karnataka Team

Published : Apr 10, 2024, 9:19 PM IST

ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಜಾತಿಯ ಮೂಲ ಕೆದಕುವುದು ಯಾಕೆ? ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಪ್ರತಿಕ್ರಿಯಿಸಿದರು.

Basava Jaya Mruthyunjaya Swamiji spoke to the media.
ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೂಡಲಸಂಗಮ ಸ್ವಾಮೀಜಿ

ಬೆಳಗಾವಿ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಂಚಮಸಾಲಿ ಅಲ್ಲ ಎಂದು ಹೇಳಿದ್ದ ಮಾಜಿ ಸಚಿವ ಮುರುಗೇಶ ನಿರಾಣಿ ಅವರಿಗೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿರುಗೇಟು ನೀಡಿದ್ದು, ನಮ್ಮವರು ಎನ್ನುವ ಕಾರಣಕ್ಕೆ ಮೀಸಲಾತಿ ಹೋರಾಟದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿಂದು ಮಾಧ್ಯಮದವರ ಜತೆ ಮಾತನಾಡಿದ ಶ್ರೀಗಳು, ಲಕ್ಷ್ಮೀ ಹೆಬ್ಬಾಳ್ಕರ್ ಮೀಸಲಾತಿ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಅವರು ನಮ್ಮವರೇ ಎಂದು ನಾವು ಒಪ್ಪಿಕೊಂಡಿದ್ದೇವೆ. ಯಾರೋ ಒಬ್ಬರು ಏನೇನೋ ಮಾತಾಡ್ತಾರೆ ಅಂತ ನಾನು ಪ್ರತಿಕ್ರಿಯೆ ಕೊಡೋದಿಲ್ಲ. ಈ ಬಗ್ಗೆ ಬೆಳಗಾವಿ ಜಿಲ್ಲಾ ಮುಖಂಡರಿಂದಲೂ ಸ್ಪಷ್ಟನೆ ನೀಡಲಾಗುವುದು. ನಮ್ಮ ಮೀಸಲಾತಿ ಹೋರಾಟದಲ್ಲಿ ಅನೇಕರು ಗುರುತಿಸಿಕೊಂಡಿದ್ದರು. ನಮ್ಮವರು ಎನ್ನುವ ಕಾರಣಕ್ಕೆ ಅವರೆಲ್ಲಾ ನಮಗೆ ಬೆಂಬಲ ಕೊಟ್ಟಿದ್ದಾರೆ‌. ವಿಷಯಾಂತರ ಮಾಡಿ ಮನಸ್ಸಿಗೆ ನೋವಾಗುವ ಹೇಳಿಕೆ ಯಾರೂ ಕೊಡಬಾರದು ಎಂದರು.

ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಬಗ್ಗೆ ನಾನು ಏನೂ ಹೇಳಲ್ಲ. ಲಕ್ಷ್ಮೀ ಹೋರಾಟಕ್ಕೆ ಧುಮುಕಿದ್ದಾರೆ ಎನ್ನುವ ಕಾರಣಕ್ಕೆ ಅವರ ಮೇಲೆ ಅಭಿಮಾನ, ಗೌರವ ಇದೆ. ಹೋರಾಟದಲ್ಲಿ ಪಾಲ್ಗೊಂಡವರ ಬಗ್ಗೆ ಎಂದಿಗೂ ಒಳ್ಳೆಯ ಅಭಿಮಾನ ಇರುತ್ತದೆ. ಟೀಕೆ, ಟಿಪ್ಪಣಿ ಮಾಡಿದವರ ವಿರುದ್ಧ ಜಿಲ್ಲಾ ಘಟಕ ಪ್ರತಿಕ್ರಿಯೆ ಕೊಡಲಿದೆ ಎಂದು ಹೇಳಿದರು.

ಲಕ್ಷ್ಮೀ ಹೆಬ್ಬಾಳ್ಕರ್ ಪಂಚಮಸಾಲಿ ಹೌದೋ ಅಲ್ಲವೋ ಎನ್ನುವ ಗೊಂದಲ ವಿಚಾರ‌ಕ್ಕೆ, ಅದು ಇಡೀ ಜಗತ್ತಿಗೆ ಗೊತ್ತಿದೆ. ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿ ಪಾಲ್ಗೊಂಡವರು ನಮ್ಮವರು. ಮತ್ತೆ ಅವರ ಜಾತಿ ಬಗ್ಗೆ ಯಾಕೆ ಕೆದಕೋದು ಎಂದು ತಿಳಿಸಿದರು.

6ನೇ ಹಂತದ ಹೋರಾಟ:ಪಂಚಮಸಾಲಿ ಸಮಾಜಕ್ಕೆ ನ್ಯಾಯ ಸಿಕ್ಕಿಲ್ಲ ಎನ್ನುವ ಕೊರಗಿದೆ. ಕಳೆದ ಎಂಟು ತಿಂಗಳಿಂದ 6ನೇ ಹಂತದ ಹೋರಾಟ ಮಾಡಿದ್ದೇವೆ. ಚುನಾವಣೆ ಬಳಿಕ ಮತ್ತೆ ಮೀಸಲಾತಿ ಹೋರಾಟದ ಬಗ್ಗೆ ಚರ್ಚೆ ನಡೆದಿದೆ. ಯಾವ ರೀತಿ ಸರ್ಕಾರದ ಮೇಲೆ ಒತ್ತಡ ತರಬೇಕು ಎನ್ನುವ ಬಗ್ಗೆ ಚರ್ಚೆ ಮಾಡುತ್ತೇವೆ‌. ಬೆಳಗಾವಿಯಲ್ಲಿ ಕೇಂದ್ರ ಕಚೇರಿ ಆರಂಭಿಸುತ್ತೇವೆ ಎಂದರು.

ಇದನ್ನೂಓದಿ:ಧಾರವಾಡದಲ್ಲಿ ಜೋಶಿ Vs ದಿಂಗಾಲೇಶ್ವರ ಶ್ರೀ: ಎರಡನೇ ಸಲ ಮಠಾಧೀಶರು ಕಣಕ್ಕೆ; ಲಿಂಗಾಯತ ಮತದಾರರ ಒಲವು ಯಾರತ್ತ? - Dharwad Constituency

ABOUT THE AUTHOR

...view details