ಕರ್ನಾಟಕ

karnataka

ಸಿದ್ದರಾಮಯ್ಯ ಸುಳ್ಳುರಾಮಯ್ಯ, ಒಂದು ರೂಪಾಯಿ ಜಿಎಸ್​ಟಿ ಬಾಕಿಯಿಲ್ಲ: ಜೋಶಿ ವಾಗ್ದಾಳಿ

By ETV Bharat Karnataka Team

Published : Feb 14, 2024, 2:02 PM IST

Updated : Feb 14, 2024, 2:44 PM IST

ಸಿದ್ದರಾಮಯ್ಯ ಸುಳ್ಳುರಾಮಯ್ಯ. ಒಂದು ರೂಪಾಯಿ ಜಿಎಸ್​ಟಿ ಬಾಕಿ ಇಟ್ಟುಕೊಂಡಿಲ್ಲ ಎಂದು ಕೇಂದ್ರ ಸಚಿವ ಜೋಶಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Congress government  GST  Union Minister Pralhad Joshi  ಜಿಎಸ್​ಟಿ ಬಾಕಿ  ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಜೋಶಿ ವಾಗ್ದಾಳಿ

ಕೇಂದ್ರ ಸಚಿವ ಜೋಶಿ ಮತ್ತು ಸಂಸದ ಎಸ್.ಮುನಿಸ್ವಾಮಿ ಹೇಳಿಕೆ

ಹುಬ್ಬಳ್ಳಿ:ಸಿದ್ದರಾಮಯ್ಯ ಸುಳ್ಳು ಹೇಳೋದನ್ನೆ ಕಾಯಕ ಮಾಡಿಕೊಂಡಿದ್ದಾರೆ. ಮೊದಲು ಎನ್​ಡಿಆರ್​ಎಫ್ ಫಂಡ್​ನಲ್ಲಿ ಇಷ್ಟು ಪ್ರಮಾಣದ ಹಣ ಕೊಡುತಿರಲಿಲ್ಲ. ನಾವು ಅಡ್ವಾನ್ಸ್ ಹಣ ಕೊಡುತ್ತಿದ್ದೇಬೆ. ಯಡಿಯೂರಪ್ಪ ಅದೇ ಹಣವನ್ನು ಬರಗಾಲ ಬಂದಾಗ ಹಂಚಿಕೆ ಮಾಡಿದ್ದಾರೆ. ಸಿದ್ದರಾಮಯ್ಯ ಆರ್ಥಿಕ ದುಸ್ಥಿತಿಗೆ ತಂದು ಕೇಂದ್ರದತ್ತ ಬೊಟ್ಟು ಮಾಡ್ತಿದ್ದಾರೆ. ಆದ್ರೆ ನಾವು ಒಂದೇ ಒಂದು ರೂಪಾಯಿ ಜಿಎಸ್​ಟಿ ಹಣ ಕೊಡೋದು ಬಾಕಿ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎನ್​ಡಿಆರ್​ಎಫ್​ನಲ್ಲಿ ನಾವು 12 ಸಾವಿರ ಕೋಟಿ ಕೊಟ್ಟಿದ್ದೇವೆ. ಡೆವಲೂಷನ್ ಫಂಡ್ ಅವರ ಕಾಲದಲ್ಲಿ 60 ಸಾವಿರ ಕೋಟಿ, ನಮ್ಮ ಕಾಲದಲ್ಲಿ 2 ಲಕ್ಷ 36 ಸಾವಿರ ಕೋಟಿ ಕೊಟ್ಟಿದ್ದೇವೆ. ತೆರಿಗೆ ಹಂಚಿಕೆಯಲ್ಲಿ 10 ವರ್ಷದಲ್ಲಿ 81 ಸಾವಿರ ಕೋಟಿ, ನಮ್ಮ ಕಾಲದಲ್ಲಿ 2 ಲಕ್ಷ 85 ಸಾವಿರ ಕೋಟಿ ಕೊಟ್ಟಿದ್ದೇವೆ. ಇವರು ಯಾವುದೇ ಗ್ರ್ಯಾಂಟ್ ಕೊಟ್ಟಿಲ್ಲ ಎನ್ನುತ್ತಿದ್ದಾರೆ. ನಾವು ಬಡ್ಡಿ ರಹಿತ ಸಾಲ ಕೊಟ್ಟಿದ್ದೇವೆ‌. 2004 ರಿಂದ 2014 ರಲ್ಲಿ 1667 ಕೋಟಿ ಬಿಡುಗಡೆಯಾಗಿತ್ತು ಎಂದರು.

ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಅವರು ಸುಳ್ಳು ರಾಮಯ್ಯ‌. ನಾನು ನಿನ್ನೆಯಿಂದ ಸಿದ್ದರಾಮಯ್ಯರನ್ನ ಸುಳ್ಳು ರಾಮಯ್ಯ ಎಂದು ಕರೆಯಯುತ್ತಿದ್ದೇನೆ ಎಂದರು. ಮಹದಾಯಿ ವಿಚಾರದಲ್ಲಿ ಅರಣ್ಯ ಇಲಾಖೆ ನಿರಾಕರಣೆ ಮಾಡಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು. ಇನ್ನು ದೆಹಲಿಯಲ್ಲಿ ರೈತರ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವರು, ನಮ್ಮ ಕೃಷಿ ಸಚಿವರು ಅವರ ಜೊತೆ ಮಾತುಕತೆ ಮಾಡುತ್ತಿದ್ದಾರೆ. ರೈತರು ಹೊಸ ಬೇಡಿಕೆ ಇಟ್ಟಿದ್ದಾರೆ. ನಮ್ಮ ಸರ್ಕಾರ ಅವರ ಎಲ್ಲ ಬೇಡಿಕೆಗಳನ್ನು ಸಹಾನಭೂತಿಯಿಂದ ಪರಿಶೀಲನೆ ಮಾಡುತ್ತಿದೆ. ಕಲ್ಲು ಹೊಡೆಯೋದು ಕೆಲಸವಲ್ಲ. ರೈತರ ಬಗ್ಗೆ ನಾವು ಸಹಾನುಭೂತಿಯಿಂದ ಇದ್ದೇವೆ. ರೈತರು ಮಾತುಕತೆಗೆ ಬರಬೇಕು. ನಾವು ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿಲ್ಲ. ಅನುಮತಿ‌ ಇಲ್ಲದೇ ಬಂದವರನ್ನು ತಡೆಯೋ ಕೆಲಸ ಆಗ್ತಿದೆ ಎಂದರು.

ಈಗ ಅಂಕಿ- ಸಂಖ್ಯೆಯೇ ಮಾಯ​:ಸಿದ್ದರಾಮಯ್ಯ ಹೇಳೋದೆ ಸುಳ್ಳು. ಹಾಗಿದ್ದರೆ ಅವರು ಹತ್ತು ಸಲ ರಾಜಕೀಯ ನಿವೃತ್ತಿಯಾಗಬೇಕು. ಅನುದಾನದ ವಿಚಾರವಾಗಿ ಅವರ ಡ್ಯಾಶ್ ಬೋರ್ಡ್​ನಲ್ಲಿ ಎಲ್ಲ ಮಾಹಿತಿ ಹಾಕಿದ್ರು. ನಾವು ಅದನ್ನು ಡೌನಲೋಡ್ ಮಾಡಲು ಬಿಜೆಪಿ ನಾಯಕರಿಗೆ ಸೂಚಿಸಿದ್ದೆ. ಇದೀಗ ಅಂಕಿ ಸಂಖ್ಯೆಯೇ ಡಿಲೀಟ್ ಆಗಿದೆ ಎಂದು ಜೋಶಿ ಗಂಭೀರ ಆರೋಪ ಮಾಡಿದರು.

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ. ನಾನು ಗೆಲ್ತೀನಿ. ಜೆಡಿಎಸ್ ಬಿಜೆಪಿ ಸೀಟು ಹಂಚಿಕೆ ಯಾವುದು ಚರ್ಚೆಯಾಗಿಲ್ಲ. ಈಗ ಮಾತಾಡೋದು ಕೇವಲ ಉಹಾಪೋಹ ಅಷ್ಟೆ. ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಎಲ್ಲವೂ ಅಂತಿಮವಾಗಲಿದೆ. ಒಂದು ಹಂತದಲ್ಲಿ ಕೇಂದ್ರದಲ್ಲಿ ಚರ್ಚೆ ನಡೀತಿದೆ. ಅದೆಲ್ಲವೂ ಅಪೂರ್ಣ ಆಗಿದೆ. ಕಾರ್ಯಕಾರಿಣಿ ನಂತರವೇ ಎಲ್ಲವೂ ಅಂತಿಮವಾಗಲಿದೆ ಎಂದರು.

ಅವರೆಲ್ಲ ಒಂದು ಕಡೆ ಸೇರಿದರೆ ಸಮಸ್ಯೆ ಏನು?:ಯತ್ನಾಳ, ವಿಜಯೇಂದ್ರ ಜಾರಕಿಹೊಳಿ‌ ಜೊತೆ ಸಭೆ ವಿಚಾರವಾಗಿ ಮಾತನಾಡಿದ ಅವರು, ಅವರು ಒಂದೇ ಕಡೆ ಸೇರಿದ್ರೆ ನಿಮಗೇನು ಸಮಸ್ಯೆ ಎಂದು ಹಾಸ್ಯ ಚಟಾಕಿ ಹಾರಿಸಿದ ಜೋಶಿ, ಆ ಬಗ್ಗೆ ನಾನು ಇನ್ನೊಂದು ಸಾರಿ ಮಾತನಾಡುತ್ತೇನೆ ಎಂದರು.

ಕಾಂಗ್ರೆಸ್​ನ ಗ್ಯಾರಂಟಿಗಳಿಗೆ ವಾರಂಟಿಯೇ ಇಲ್ಲ:ಸಿದ್ದರಾಮಯ್ಯ ಅವರದ್ದು ನಿವೃತ್ತಿ ಸಮಯ, ನಿವೃತ್ತಿ ಆಗ್ಲೇಬೇಕು. ಜನಾನೇ ಅವರನ್ನು ಮನೆಗೆ ಕಳುಹಿಸಲಿ, ತೀರ್ಮಾನ ಮಾಡಿದ್ದಾರೆ. ಸಿದ್ದರಾಮಯ್ಯನವರ ಡ್ರಾಮಾ ಕಂಪನಿ ಟೀಮ್ ದೆಹಲಿಗೆ ಬಂದಿತ್ತು. ಮೋದಿಯವರು ರಾಜ್ಯಕ್ಕೆ ಅತೀ ಹೆಚ್ಚು ಅನುದಾನ ಕೊಟ್ಟಿದ್ದಾರೆ. ಕಾಂಗ್ರೆಸ್‌ನವರ ಗ್ಯಾರಂಟಿಗಳಿಗೆ ವಾರಂಟಿ ಇಲ್ಲ ಎಂದು ಕೋಲಾರ ಸಂಸದ ಎಸ್.ಮುನಿಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಅಳಿವಿನಂಚಿನಲ್ಲಿದೆ. ಹೀಗಾಗಿ ಗಿಮಿಕ್ ಮಾಡ್ತಿದ್ದಾರೆ. ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆದ್ದೇ ಗೆಲ್ತೀವಿ. ಮನೆಗೆ ನೀರು ಬರದಿದ್ದರೂ ಮೋದಿ ಮೇಲೆ ಹಾಕ್ತಾರೆ. ಒಂದೇ ಸಮುದಾಯಕ್ಕೆ ಹತ್ತು ಸಾವಿರ ಕೊಡ್ತೇನೆ ಅಂತಾರೆ. ದೇಶ ಒಡೆಯುವ ಕೆಲಸ ಮಾಡ್ತಿದ್ದಾರೆ ಎಂದರು.

ಓದಿ:ರೈತರ ದೆಹಲಿ ಚಲೋ: ಶಂಭು ಗಡಿಯಿಂದಲೇ 2ನೇ ದಿನದ ಹೋರಾಟ ಪುನಾರಂಭ, ಇಂಟರ್​​ನೆಟ್​ ಬಂದ್​

Last Updated : Feb 14, 2024, 2:44 PM IST

ABOUT THE AUTHOR

...view details