ಕರ್ನಾಟಕ

karnataka

ರಾಯಚೂರು ಮಂತ್ರಾಲಯ ಹೆದ್ದಾರಿಯಲ್ಲಿ ಬಸ್ ಬೈಕ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

By ETV Bharat Karnataka Team

Published : Feb 22, 2024, 8:26 AM IST

ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ನಾಲ್ವರು ಮೃತಪಟ್ಟ ಘಟನೆ ಬುಧವಾರ ನಡೆದಿದೆ.

Etv Bharat
Etv Bharat

ರಾಯಚೂರು: ಎರಡು ಪತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ರಾಯಚೂರು ತಾಲೂಕಿನ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಯಚೂರು - ಮಂತ್ರಾಲಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮಿಟ್ಟಿಮಲ್ಕಾಪುರ ಗ್ರಾಮದ ಬಳಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ದುರಂತದಲ್ಲಿ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ರಾಯಚೂರು ನಗರದ ಇಂದಿರಾ ನಗರದ ನಿವಾಸಿಗಳಾದ ರಾಘವೇಂದ್ರ (28), ಪರುಶುರಾಮ್ (30) ಮತ್ತು ಅಜಾದ್ ನಗರದ ಗೋವಿಂದ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆ ವಿಷಯ ತಿಳಿದು ಸ್ಥಳಕ್ಕೆ ಯರಗೇರಾ ಪೊಲೀಸರು ಆಗಮಿಸಿದರು. ಮೃತದೇಹಗಳನ್ನ ರಾಯಚೂರು ನಗರದ ರಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಮೃತರ ಕುಟುಂಬದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ:ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ: ಶಾಶ್ವತವಾಗಿ ನಿದ್ರೆಗೆ ಜಾರಿದ 9 ಜನ, ಹಲವರ ಸ್ಥಿತಿ ಚಿಂತಾಜನಕ

ಮತ್ತೊಂದು ರಸ್ತೆ ಅಪಘಾತದಲ್ಲಿ ಅಪರಿಚಿತ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ:ಯರಗೇರಾ ಗ್ರಾಮದ ರಾಯಚೂರು ವಿಶ್ವವಿದ್ಯಾಲಯ ಸಮೀಪದಲ್ಲಿ ಬೈಕ್, ಅಪರಿತ ವಾಹನದ ಮಧ್ಯೆ ಡಿಕ್ಕಿ ಸಂಭವಿಸಿದೆ. ಗಾಣಧಾಳ ಗ್ರಾಮದ ಪ್ರಾಣೇಶ(20) ಮೃತ ಯುವಕ ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ ಆಂಜನೇಯ ಎಂಬಾತ ಗಾಯಗೊಂಡಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಎರಡು ಘಟನೆಗಳು ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪಾದಚಾರಿ ಮೇಲೆ ವಾಟರ್ ಟ್ಯಾಂಕರ್ ಪಲ್ಟಿ, ಸ್ಥಳದಲ್ಲೇ ಸಾವನ್ನಪ್ಪಿದ ಯುವಕ

ABOUT THE AUTHOR

...view details