ಕರ್ನಾಟಕ

karnataka

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಟಿಪ್ಪರ್! - Tipper driver lost control

By ETV Bharat Karnataka Team

Published : Apr 20, 2024, 8:24 AM IST

Updated : Apr 20, 2024, 2:00 PM IST

ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ನಿದ್ದೆಯ ಮಂಪರಿನಲ್ಲಿ ಚಾಲಕನೊಬ್ಬ ಟಿಪ್ಪರ್ ಅನ್ನು ಮನೆಗೆ ನುಗ್ಗಿಸಿದ್ದಾನೆ.

ಮನೆಗೆ ನುಗ್ಗಿದ ಟಿಪ್ಪರ್
ಮನೆಗೆ ನುಗ್ಗಿದ ಟಿಪ್ಪರ್

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಟಿಪ್ಪರ್

ದೊಡ್ಡಬಳ್ಳಾಪುರ: ಮಧ್ಯರಾತ್ರಿ ನಿದ್ದೆಗಣ್ಣಿನಲ್ಲಿದ್ದ ಚಾಲಕ ನಿಯಂತ್ರಣ ತಪ್ಪಿ ಟಿಪ್ಪರ್ ಅನ್ನು ರಸ್ತೆ ಬದಿಯಲ್ಲಿದ್ದ ಮನೆಗೆ ನುಗ್ಗಿಸಿದ್ದಾನೆ. ಮನೆಯ ಮುಂದೆ ನಿಲ್ಲಿಸಿದ 3 ಬೈಕ್​ಗಳು ಜಖಂ ಗೊಡಿವೆ. ಅಲ್ಲದೇ ಮನೆಯ ಕಾಂಪೌಂಡ್ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ರಾತ್ರಿ 1:30 ರ ಸಮಯದಲ್ಲಿ ಘಟನೆ ನಡೆದಿದ್ದು, ದೊಡ್ಡಬಳ್ಳಾಪುರ ಕಡೆಯಿಂದ ಮಳೆಕೋಟೆ ಕಡೆಗೆ ಹೋಗುತ್ತಿದ್ದ ಟಿಪ್ಪರ್, ರಸ್ತೆ ಬದಿಯಲ್ಲಿರುವ ಅಭಿ ಎಂಬುವರ ಮನೆಗೆ ನುಗ್ಗಿದೆ. ಟಿಪ್ಪರ್ ಮೊದಲಿಗೆ ಮನೆ ಮುಂಭಾಗದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಮನೆಗೆ ನುಗ್ಗಿದೆ. ವೇಗ ತಗ್ಗಿದ್ದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ. ಒಂದು ವೇಳೆ ಲಾರಿ ನೇರವಾಗಿ ಮನೆಗೆ ನುಗ್ಗಿದ್ದರೆ ಭಾರೀ ಅನಾಹುತವೇ ಸಂಭವಿಸುತ್ತಿತ್ತು.

ರಾಜಘಟ್ಟ ಗ್ರಾಮದಲ್ಲಿ ಕ್ರಷರ್ ಲಾರಿಗಳ ಹಾವಳಿ ಹೆಚ್ಚಾಗಿದೆ. ಚಿಕ್ಕಬಳ್ಳಾಪುರದಲ್ಲಿರುವ ಕ್ರಷರ್​ಗಳಿಂದ ಜಲ್ಲಿ ಕಲ್ಲುಗಳನ್ನ ಸಾಗಿಸುವ ಟಿಪ್ಪರ್-ಲಾರಿಗಳು ಗ್ರಾಮದ ಮೂಲಕವೇ ಸಂಚರಿಸುತ್ತವೆ. ಆದರೆ, ಅವುಗಳ ವೇಗಕ್ಕೆ ನಿಯಂತ್ರಣವೇ ಇಲ್ಲ. ರಸ್ತೆಯಲ್ಲಿ ಬ್ಯಾರಿಕೇಡ್​ಗಳನ್ನು ಹಾಕಿ ಗ್ರಾಮ ವ್ಯಾಪ್ತಿಯಲ್ಲಿ ಅವುಗಳ ವೇಗಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರಾದ ಗಣೇಶ್ ರಾಜಘಟ್ಟ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಭೀಕರ ಅಪಘಾತ: ಮಹಾರಾಷ್ಟ್ರಕ್ಕೆ ಮದುವೆಗೆಂದು ತೆರಳುತ್ತಿದ್ದ ಬಾಗಲಕೋಟೆಯ ಐವರು ದುರ್ಮರಣ - Road Accident

Last Updated : Apr 20, 2024, 2:00 PM IST

ABOUT THE AUTHOR

...view details