ಶಿರಸಿ(ಉತ್ತರ ಕನ್ನಡ): ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎಂಬ ಸುದ್ದಿಯ ನಡುವೆ ಅವರ ಪುತ್ರ ವಿವೇಕ್ ಹೆಬ್ಬಾರ್ ಹಾಗು ಬೆಂಬಲಿಗರು ಇಂದು ಕಾಂಗ್ರೆಸ್ ಸೇರಿದರು.
ಬಿಜೆಪಿ ಪರ ಪ್ರಚಾರಕ್ಕಿಳಿಯದೇ ಹೆಬ್ಬಾರ್ ಕಾಂಗ್ರೆಸ್ ನಾಯಕರ ಜತೆ ಗುರುತಿಸಿಕೊಂಡರೆ, ಇವರ ಬೆಂಬಲಿಗರು ಹಾಗೂ ಪುತ್ರ ವಿವೇಕ್ ಹೆಬ್ಬಾರ್ ಇಂದು ಬನವಾಸಿಯಲ್ಲಿ ನೂರಾರು ಕಾರ್ಯಕರ್ತರು, ಮುಖಂಡರೊಂದಿಗೆ ಅಧಿಕೃತವಾಗಿ ಕೈ ಪಕ್ಷ ಸೇರುವ ಮೂಲಕ ಬಿಜೆಪಿಗೆ ಟಕ್ಕರ್ ಕೊಟ್ಟರು.
ಬಿಜೆಪಿ ನಾಯಕರ ತಾರತಮ್ಯ ನೀತಿ, ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡದೇ ಇರುವುದಕ್ಕೆ ಕಾರ್ಯಕರ್ತರಿಗೆ ನ್ಯಾಯ ಕೊಡಿಸುವುದಕ್ಕಾಗಿ ಮನೆ ಬಿಟ್ಟು ಹಳೆಯ ಮನೆಗೆ ಬಂದಿರುವುದಾಗಿ ವಿವೇಕ್ ಹೆಬ್ಬಾರ್ ಹೇಳಿದ್ದಾರೆ. ಇನ್ನೊಂದೆಡೆ, ಶಿವರಾಮ್ ಹೆಬ್ಬಾರ್ ತಟಸ್ಥರಾಗಿದ್ದಾರೆ.