ETV Bharat / assembly-elections

ಕಾಂಗ್ರೆಸ್ ಕರ್ನಾಟಕವನ್ನು ಭಾರತದಿಂದ ಪ್ರತ್ಯೇಕಿಸಲು ನೋಡುತ್ತಿದೆ: ಪ್ರಧಾನಿ ಮೋದಿ

author img

By

Published : May 7, 2023, 8:12 PM IST

Updated : May 7, 2023, 10:52 PM IST

ಪ್ರಧಾನಿ ಮೋದಿ ಅವರಿಂದು ಮೈಸೂರಿನ ನಂಜನಗೂಡಿನಲ್ಲಿ ಕೊನೆಯ ಚುನಾವಣಾ ಪ್ರಚಾರ ಭಾಷಣ ಮಾಡಿ ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು.

karnataka-assembly-election-pm-modi-speech-at-nanjangudu
ಕಾಂಗ್ರೆಸ್ ಕರ್ನಾಟಕವನ್ನು ಭಾರತದಿಂದ ಪ್ರತ್ಯೇಕಿಸಲು ನೋಡುತ್ತಿದೆ: ಪ್ರಧಾನಿ ಮೋದಿ

ಪ್ರಧಾನಿ ಮೋದಿ ಭಾಷಣ

ನಂಜನಗೂಡು (ಮೈಸೂರು): ಕಾಂಗ್ರೆಸ್​​ ಪಕ್ಷವು ಕರ್ನಾಟಕವನ್ನು ಭಾರತದಿಂದ ಪ್ರತ್ಯೇಕಿಸಲು ನೋಡುತ್ತಿದೆ. ತುಕಡೆ ತುಕಡೆ ಸಮಸ್ಯೆ ಕಾಂಗ್ರೆಸ್‌ನಲ್ಲಿ ಹೆಚ್ಚಾಗಿದೆ ಎಂದು ಪ್ರಧಾನಿ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. ನಂಜನಗೂಡಿನಲ್ಲಿ ಕೊನೆಯ ಚುನಾವಣಾ ಪ್ರಚಾರ ಭಾಷಣ ಮಾಡಿದ ಮೋದಿ, ಕಾಂಗ್ರೆಸ್ ದುರಾಡಳಿತ, ಕರ್ನಾಟಕದ ಸಾರ್ವಭೌಮತ್ವವನ್ನೇ ಪ್ರಶ್ನಿಸುವ ಹೇಳಿಕೆ ವಿರುದ್ಧ ಹರಿಹಾಯ್ದಿದ್ದಾರೆ.

ಮೈಸೂರು ರೇಷ್ಮೆ, ಮೈಸೂರು ಮಲ್ಲಿಗೆ, ನಂಜನಗೂಡು ಬಾಳೆಹಣ್ಣು ವಿಶ್ವಪ್ರಸಿದ್ಧಿಯಾಗಿದೆ. ಸ್ಥಳೀಯ ಉತ್ಪನ್ನ, ಇಲ್ಲಿನ ಸಂಸ್ಕೃತಿ, ಪ್ರವಾಸೋದ್ಯಮ ಅಭಿವೃದ್ಧಿಗೆ ಬಿಜೆಪಿ ಶ್ರಮ ಪಡುತ್ತಿದೆ. ಕರ್ನಾಟಕದ ಈ ಚುನಾವಣೆ ಪ್ರಮುಖವಾಗಿದೆ. ಕರ್ನಾಟಕವನ್ನು ನಂಬರ್ 1 ರಾಜ್ಯವನ್ನಾಗಿ ಮಾಡಲು ನಡೆಯುತ್ತಿರುವ ಚುನಾವಣೆಯಾಗಿದೆ. ಡಬಲ್ ಎಂಜಿನ್ ಸರ್ಕಾರ, ಡಬಲ್ ಸೇವಾ ಮನೋಭಾವ, ಡಬಲ್ ಶಕ್ತಿಯಿಂದ ಕೆಲಸ ಮಾಡುತ್ತಿದೆ ಎಂದು ಮೋದಿ ಹೇಳಿದ್ರು.

ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ಇದ್ದಾಗ ಕರ್ನಾಟಕ ಅಭಿವೃದ್ಧಿ ಕುಂಠಿತವಾಗಿತ್ತು. ಕರ್ನಾಟಕಕ್ಕೆ ಅತೀ ಹೆಚ್ಚಿನ ನೇರ ವಿದೇಶಿ ಬಂಡವಾಳ ಹರಿದು ಬರುತ್ತಿದೆ. ಈ ಕೆಲಸದಿಂದ ನಿಮಗೆ ಹೆಮ್ಮೆಯಾಗುತ್ತಿದೆ ಅಲ್ವಾ?. ಮೊಬೈಲ್ ಉತ್ಪಾದನೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಅತೀ ದೊಡ್ಡ ಮೊಬೈಲ್ ಕಂಪನಿಗಳು ಕರ್ನಾಟಕಕ್ಕೆ ಆಗಮಿಸುತ್ತಿದೆ. ಇದನ್ನು ಎಲ್ಲಾ ಕನ್ನಡಿಗನಿಗೆ ಹೆಮ್ಮೆಯ ವಿಷವಾಗಿದೆ. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಇದು ಹೆಮ್ಮೆ ತರುವ ವಿಷವಲ್ಲ ಎಂದು ಮೋದಿ ಗುಡುಗಿದರು.

ಗರೀಬಿ ಹಠಾವೋ ಗ್ಯಾರೆಂಟಿಯನ್ನು ಕಾಂಗ್ರೆಸ್ ದಶಕಗಳ ಹಿಂದೆ ನೀಡಿತ್ತು. ಆದರೆ ಇದು ಇತಿಹಾಸದ ಅತೀ ದೊಡ್ಡ ಸುಳ್ಳಿನ ಕಂತೆಯಾಗಿ ಉಳಿದುಕೊಂಡಿದೆ. ಕಾಂಗ್ರೆಸ್ ಸುಳ್ಳಿನ ಕಂತೆಯನ್ನೇ ಜನರ ಮುಂದಿಡುತ್ತದೆ. ಹೀಗಾಗಿ ಕಾಂಗ್ರೆಸ್‌ಗೆ ಬಡತನ ಹೋಗಲಾಡಿಸಲು ಸಾಧ್ಯವಾಗಿಲ್ಲ. ಯೋಗ, ಆಯುರ್ವೇದದಲ್ಲಿ ಭಾರತದ ತಾಕತ್ತು ಅಡಗಿದೆ. ಈ ವಿಚಾರದಲ್ಲಿ ಮೈಸೂರು ಮುಂಚೂಣಿಯಲ್ಲಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯೋಗವನ್ನು ಕಡೆಗಣಿಸಿತ್ತು. ಇಂದು ಇಡೀ ವಿಶ್ವವೇ ಇಂದು ಯೋಗ ಮಾಡುತ್ತಿದೆ. ಇದಕ್ಕೆ ಕಾರಣವೇನು? ಇದಕ್ಕೆ ಮೋದಿ ಕಾರಣವಲ್ಲ, ನೀವು ನೀಡಿದ ಒಂದು ಮತ ಕಾರಣವಾಗಿದೆ ಎಂದು ಮೋದಿ ಹೇಳಿದ್ದಾರೆ.

ಭಾರತ ಮಸಾಲೆಯಲ್ಲಿ ಅತ್ಯಂತ ಪ್ರಾಚೀನತೆ ಹೊಂದಿದೆ. ನಮ್ಮ ಮಸಾಲೆ ಬೇಡಿಕೆ ಹೆಚ್ಚಾಗಿದೆ. ಅರಶಿನ, ಶುಂಠಿ ರಫ್ತಿನಲ್ಲಿ ಶೇಕಡಾ 200ರಷ್ಟು ಹೆಚ್ಚಾಗಿದೆ. ಇದರ ನೇರ ಲಾಭ ಮೈಸೂರಿನ ರೈತರಿಗೆ ಆಗಿದೆ. ಭಾರತದ ಸಂಸ್ಕೃತಿಯಲ್ಲಿ ಕರ್ನಾಟಕ ಒಂದು ಸ್ತಂಭವಾಗಿದೆ. ನಂಜನಗೂಡು, ಶ್ರೀರಂಗಪಟ್ಟಣ, ಮೈಸೂರು ಸಂಸ್ಕೃತಿ ಪರಂಪರೆ ಹೊಂದಿದೆ ಪಟ್ಟಣಗಳು. ಆದರೆ ಕಾಂಗ್ರೆಸ್ ಇವನ್ನು ಅವಮಾನ ಮಾಡುತ್ತಲೇ ಬಂದಿದೆ. ಇದೀಗ ಭಜರಂಗಬಲಿಯನ್ನು ಅವಮಾನ ಮಾಡುತ್ತಿದೆ ಎಂದರು.

ಆಯೋಧ್ಯೆ ರಾಮಮಂದಿರ, ಕಾಶಿ ವಿಶ್ವನಾಥ ಸೇರಿದಂತೆ ಹಲವು ಮಂದಿರಗಳನ್ನು ಜೀರ್ಣೋದ್ಧಾರ ಮಾಡಿದ್ದೇವೆ. ಇದು ಕಾಂಗ್ರೆಸ್‌ಗೆ ಹಿಡಿಸಿಲ್ಲ. ಕೆಲ ದಿನಗಳ ಹಿಂದೆ ಬಂಡಿಪುರ ಹುಲಿ ಸಂರಕ್ಷಿತ ಅರಣ್ಯಕ್ಕೆ ಬಂದಿದ್ದೆ. ಕರ್ನಾಟಕ ಶಕ್ತಿಯನ್ನು ವಿಶ್ವಕ್ಕೆ ಹೇಳಲು ಬಂದಿದ್ದೆ. ಇದನ್ನು ಕಾಂಗ್ರೆಸ್ ಅವಮಾನಿಸಿತ್ತು. ಕಾಂಗ್ರೆಸ್ ಲಿಂಗಾಯಿತ ಸಮುದಾಯವನ್ನು ಅವಮಾನಿಸಿತು. ಕಾಂಗ್ರೆಸ್ ತುಷ್ಟೀಕರಣದ ರಾಜನೀತಿ ಪ್ರದರ್ಶಿಸುತ್ತಿದೆ. ಕಾಂಗ್ರೆಸ್ ಲಾಭ ನೋಡಿಕೊಂಡು ರಾಜಕಾರಣ ಮಾಡುತ್ತದೆ ಎಂದು ಮೋದಿ ಹೇಳಿದ್ದಾರೆ.

ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದ ಮೋದಿ : ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ನಂಜನಗೂಡಿಗೆ ಮೊದಲ ಬಾರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ದೇವಾಲಯದ ಅರ್ಚಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಂಜುಂಡೇಶ್ವರ ಸ್ವಾಮಿಗೆ ದೇವರಿಗೆ ಅಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

  • ಹರ ಹರ ಮಹಾದೇವ...

    ಪರಶಿವನ ಪರಮಭಕ್ತ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ.

    ಓಂ ನಮಃ ಶಿವಾಯ. #NannaVoteModige #PoornaBahumata4BJP
    1/2 pic.twitter.com/Jn1CDdSXqv

    — BJP Karnataka (@BJP4Karnataka) May 7, 2023 " class="align-text-top noRightClick twitterSection" data=" ">

ಮೋದಿ ಅವರು ನಂಜುಂಡೇಶ್ವರ ಸ್ವಾಮಿ ದೇವರ ದರ್ಶನ ಪಡೆದು ಬಳಿಕ ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ, ನಾರಾಯಣಸ್ವಾಮಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು. ಸುಮಾರು ಅರ್ಧ ಗಂಟೆಗಳ ಕಾಲ ದೇವಾಲಯದಲ್ಲಿದ್ದರು.

ಇದನ್ನು ಓದಿ: ಕರ್ನಾಟಕದಲ್ಲಿ 40 ಪರ್ಸೆಂಟ್​​​​ ಕಮಿಷನ್, ಬೆಲೆ ಏರಿಕೆಯ ಆತಂಕವಾದ ಇದೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

Last Updated :May 7, 2023, 10:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.