ETV Bharat / assembly-elections

ರಾಜ್ಯದ 25 ಕ್ಷೇತ್ರಗಳಲ್ಲಿ AIMIM ಅಭ್ಯರ್ಥಿಗಳು ಕಣಕ್ಕೆ: ಜೆಡಿಎಸ್​ ಜೊತೆ ಮೈತ್ರಿಗೆ ಪ್ಲಾನ್​

author img

By

Published : Apr 4, 2023, 8:20 PM IST

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ ಜೊತೆ ಎಐಎಂಐಎಂ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಒಸ್ಮಾನ್ ಘನಿ ತಿಳಿಸಿದ್ದಾರೆ.

Owaisi-led AIMIM to field 25 candidates in Karnataka polls, keen on alliance with JD(S)
ರಾಜ್ಯದ 25 ಕ್ಷೇತ್ರಗಳಲ್ಲಿ AIMIM ಅಭ್ಯರ್ಥಿಗಳು ಕಣಕ್ಕೆ: ಜೆಡಿಎಸ್​ ಜೊತೆ ಮೈತ್ರಿಗೆ ಪ್ಲಾನ್​

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೈದರಾಬಾದ್​ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಸುಮಾರು 25 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಿದ್ದು, ಜೆಡಿಎಸ್​ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಎಐಎಂಐಎಂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಒಸ್ಮಾನ್ ಘನಿ ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಸಮಾಜವನ್ನು ತುಳಿಯಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ: ಹೆಚ್ ಡಿ ರೇವಣ್ಣ

''ಮಾಜಿ ಪ್ರಧಾನಿ ಹೆಚ್.​ಡಿ.ದೇವೇಗೌಡ ನೇತೃತ್ವದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಪಕ್ಷವು ಮಾತುಕತೆ ನಡೆಸುತ್ತಿದೆ. ಆದರೆ, ಈ ಪ್ರಸ್ತಾಪಕ್ಕೆ ಆ ಪಕ್ಷ ಇನ್ನೂ ಪ್ರತಿಕ್ರಿಯಿಸಿಲ್ಲ. ರಾಜ್ಯದಲ್ಲಿ ಸುಮಾರು 25 ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ'' ಎಂದು ಒಸ್ಮಾನ್ ಘನಿ ತಿಳಿಸಿದ್ದಾರೆ.

ಇದಕ್ಕೆ ಪುಷ್ಟಿ ನೀಡುವ ಮಾತುಗಳನ್ನು ಪಕ್ಷದ ಮುಖ್ಯಸ್ಥ ಓವೈಸಿ ಸಹ ಆಡಿದ್ದಾರೆ. ''ಈಗಾಗಲೇ ನಾವು ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದೇವೆ. ಮೈತ್ರಿಗೆ ನಾವು ಮುಕ್ತವಾಗಿದ್ದೇವೆ. ಅಲ್ಲದೇ, ನಾವು ಖಂಡಿತವಾಗಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ'' ಎಂದು ಅವರು ಹೇಳಿದರು.

ಮುಸ್ಲಿಮರ ಮೀಸಲಾತಿ ರದ್ದು ಕಾನೂನುಬಾಹಿರ - ಓವೈಸಿ: ಮುಂದುವರೆದು, ''ಕಾಂಗ್ರೆಸ್ ಮೈತ್ರಿ ಜೊತೆ ಮಾಡಿಕೊಳ್ಳಲು ಬಯಸುವುದಿಲ್ಲ. ಏಕೆಂದರೆ, ಕಾಂಗ್ರೆಸ್​ನವರು ನನ್ನ ವಿರುದ್ಧ ಆಧಾರರಹಿತ ಮತ್ತು ಕಡು ಆರೋಪಗಳನ್ನು ಮಾಡುತ್ತಾರೆ. ಆದ್ದರಿಂದ ನಾವು ಕಾದು ನೋಡುತ್ತೇವೆ'' ಎಂದು ಓವೈಸಿ ಹೇಳಿದರು. ಇದೇ ವೇಳೆ, ''ಒಬಿಸಿ ವರ್ಗದೊಳಗೆ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಬಸವರಾಜ ಬೊಮ್ಮಾಯಿ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಖಂಡಿಸಿದ ಓವೈಸಿ, ಇದು ಸಂಪೂರ್ಣ ಕಾನೂನುಬಾಹಿರವಾಗಿದೆ'' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ, ''ಮುಸ್ಲಿಮರ ಮೀಸಲಾತಿ ರದ್ದು ಖಂಡಿಸಿ ಏಕೆ ಪ್ರತಿಭಟನೆಗಳು ನಡೆಯಲಿಲ್ಲ. ಸೆಕ್ಯುಲರ್ ಎಂದು ಕರೆಯಲ್ಪಡುವ ನಾಯಕರು ಮತ್ತು ಪಕ್ಷಗಳಿಂದ ಬಲವಾದ ಹೇಳಿಕೆಗಳು ಏಕೆ ಹೊರಹೊಮ್ಮಲಿಲ್ಲ?. ಜೊತೆಗೆ ಎಐಎಂಐಎಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಮುಸ್ಲಿಂ ಮತಗಳ ವಿಭಜನೆಗೆ ಕಾರಣವಾಗುತ್ತದೆ ಎಂದು ಕೆಲವು ಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿವೆ. ಆದರೆ, ಇದೇ ಪ್ರಶ್ನೆಯನ್ನು ಇತರ ಸಮುದಾಯಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗೆ ಏಕೆ ಕೇಳಲ್ಲ'' ಎಂದು ಕಿಡಿಕಾರಿದರು.

ಇದನ್ನೂ ಓದಿ: ಹಾಸನವೂ ಸೇರಿ ನಾಳೆ/ನಾಡಿದ್ದು 2ನೇ ಪಟ್ಟಿ ಬಿಡುಗಡೆ: ಹೆಚ್‌ಡಿಕೆ

2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎಐಎಂಐಎಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ. ಆಗ ಅಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಮಾತ್ರ ಪಡೆಯಿತು ಎಂದು ನೆನಪಿಸಿದ ಅವರು, "ಇದು ಮುಸ್ಲಿಂ ಮತಗಳ ವಿಭಜನೆಯಿಂದಾಗಿ ಅಥವಾ ಬಿಜೆಪಿಗೆ ಬಹುಸಂಖ್ಯಾತರ ಮತಗಳ ಕ್ರೋಢೀಕರಣದ ಕಾರಣವೋ ಎಂದು ಓವೈಸಿ ಪ್ರಶ್ನಿಸಿದ್ದಾರೆ. ಇಷ್ಟೇ ಅಲ್ಲ, 2019ರಲ್ಲಿ ಕಾಂಗ್ರೆಸ್‌ನ ಪಕ್ಷಾಂತರಿಗಳ ಸಹಾಯದಿಂದಲೇ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಸಾಧ್ಯವಾಗಿದೆ'' ಎಂದು ಕುಟುಕಿದರು.

2018ರ ಕರ್ನಾಟಕ ಚುನಾವಣೆಯಲ್ಲಿ ಎಐಎಂಐಎಂ ಪಕ್ಷವು ಜೆಡಿಎಸ್​ಅನ್ನು ಬೆಂಬಲಿಸಿತ್ತು. ಆದರೆ, ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ. ಒಟ್ಟು 224 ಸದಸ್ಯ ಬಲದ ವಿಧಾನಸಭೆಗೆ ಮೇ 10ರಂದು ಚುನಾವಣೆ ನಿಗದಿಯಾಗಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಕುಮಾರಸ್ವಾಮಿ ಯಾರೊಂದಿಗೂ ಮೈತ್ರಿ ಬಯಸುತ್ತಿಲ್ಲ: ಚುನಾವಣೋತ್ತರ ಮೈತ್ರಿ ಬಗ್ಗೆ ದೇವೇಗೌಡರ ಮಾತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.