ETV Bharat / bharat

ರಸ್ತೆ ಬದಿ ಹೊಂಡಕ್ಕೆ ಬಿದ್ದ ಬಸ್​​ ; 6 ವಲಸೆ ಕಾರ್ಮಿಕರ ದಾರುಣ ಸಾವು

author img

By

Published : Sep 23, 2021, 8:56 AM IST

Updated : Sep 23, 2021, 9:02 AM IST

bus accident
ಬಸ್​ ಅಪಘಾತ

ವಲಸೆ ಕಾರ್ಮಿಕರು ಜಾರ್ಖಾಂಡ್‌ನಿಂದ ಲಖನೌಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್​ಗಂಜ್‌ನಲ್ಲಿ ಅಪಘಾತಕ್ಕೀಡಾಗಿ 6 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ರಾಯ್​ಗಂಜ್​(ಪಶ್ಚಿಮಬಂಗಾಳ): ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್​ಗಂಜ್‌ನಲ್ಲಿ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್​​ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಪರಿಣಾಮ 6 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವು ಮಂದಿ ಗಾಯಗೊಂಡಿದ್ದಾರೆ.

ಬಸ್​ ಅಪಘಾತ

6 ಮಂದಿಯ ಶವಗಳನ್ನು ಹೊಂಡಕ್ಕೆ ಬಿದ್ದ ಬಸ್​ನಿಂದ ಹೊರ ತೆಗೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸನಾ ಅಖ್ತರ್ ಖಚಿತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 34ರಲ್ಲಿ ನಿನ್ನೆ ರಾತ್ರಿ 10:45ರ ಸುಮಾರಿಗೆ ರಾಯ್​​​ಗಂಜ್‌ನ ರೂಪಹಾರ್ ಪ್ರದೇಶದ ಬಳಿ ಈ ದುರಂತ ಸಂಭವಿಸಿದೆ.

ಇದನ್ನೂ ಓದಿ: ಶೋಪಿಯಾನದಲ್ಲಿ​ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾಪಡೆ

ಪೊಲೀಸರ ಪ್ರಕಾರ, ವಲಸೆ ಕಾರ್ಮಿಕರು ಜಾರ್ಖಾಂಡ್‌ನಿಂದ ಲಖನೌಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಇನ್ನೊಂದು ವಾಹನಕ್ಕೆ (ಟ್ರಕ್​ ಎಂದು ಅಂದಾಜಿಸಲಾಗಿದೆ) ಡಿಕ್ಕಿ ಹೊಡೆದಿದೆ. ಆಗ ಸ್ಥಳೀಯ ನಿವಾಸಿಗಳು ಮೊದಲು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರು.

Last Updated :Sep 23, 2021, 9:02 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.