ETV Bharat / bharat

ಪ್ರೇಮ ಪ್ರಕರಣ: ಯುವಕನನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಯುವತಿ ಸಂಬಂಧಿಕರು

author img

By

Published : Nov 19, 2021, 12:31 PM IST

Updated : Nov 19, 2021, 12:56 PM IST

A 20 year old man allegedly beaten to death over love affair in Vadodara district
ಪ್ರೇಮ ಪ್ರಕರಣ

ತಮ್ಮ ಮನೆಯ ಯುವತಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಮರಕ್ಕೆ ಕಟ್ಟಿ ನಾಲ್ಕು ಮಂದಿ ಸೇರಿ ಕ್ರೂರವಾಗಿ ದೊಣ್ಣೆಯಿಂದ ಹೊಡೆದು ಕೊಂದಿರುವ ಘಟನೆ ಗುಜರಾತ್​ನ ವಡೋದಾ ಜಿಲ್ಲೆಯಲ್ಲಿ ಜರುಗಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಡೋದರಾ: ಪ್ರೀತಿಯ ವಿಚಾರವಾಗಿ ಯುವತಿಯ ಸಂಬಂಧಿಕರು ಯುವಕನೊಬ್ಬನನ್ನು ಮರಕ್ಕೆ ಕಟ್ಟಿ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಪದ್ರಾ ತಹಸಿಲ್​ನ ಚೋಕರಿ ಗ್ರಾಮದಲ್ಲಿ ನಡೆದಿದ್ದು, ಹಲ್ಲೆಯ ವಿಡಿಯೋ ಈಗ ವೈರಲ್​ ಆಗಿದೆ.

20 ವರ್ಷದ ಜಯೇಶ್​ ರಾವಲ್​ ಎಂಬ ಯುವಕ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ ವಿಚಾರ ತಿಳಿದು ಯುವತಿಯ ಮನೆಯವರು ಆತನನ್ನು ಅಪಹರಿಸಿ ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ್ದಾರೆ. ನಾಲ್ಕೈದು ಮಂದಿ ಸೇರಿ ಯುವಕನಿಗೆ ದೊಣ್ಣೆಯಿಂದ ಹೊಡೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನು ಓದಿ-Repeal of 3 farm laws: ಅನ್ಯಾಯದ ವಿರುದ್ಧದ ವಿಜಯ ಎಂದ ರಾಗಾ ; ಸಂಸತ್ತಿನಲ್ಲಿ ಕೃಷಿ ಕಾನೂನುಗಳು ರದ್ದಾಗೋ ವರೆಗೂ ಪ್ರತಿಭಟನೆ - ಟಿಕಾಯತ್​

ಹಲ್ಲೆ ವೇಳೆ, ಜಯೇಶ್​ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ. ಈ ವಿಚಾರವನ್ನು ತಿಳಿದ ಯುವಕನ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಡೋದರಾ ಎಸ್ಪಿ ಸ್ಥಳಕ್ಕೆ ಧಾವಿಸಿ ಯುವಕನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಯುವತಿಯ ತಂದೆ ಸೇರಿ ನಾಲ್ಕು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಅಪಹರಣ ಮತ್ತು ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Last Updated :Nov 19, 2021, 12:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.