ETV Bharat / bharat

ಕಾಶ್ಮೀರಿ ಪಂಡಿತ ಸಹೋದರರ ಮೇಲೆ ಉಗ್ರರ ದಾಳಿ.. ಓರ್ವ ಬಲಿ, ಮತ್ತೋರ್ವನ ಸ್ಥಿತಿ ಗಂಭೀರ

author img

By

Published : Aug 16, 2022, 1:21 PM IST

Updated : Aug 16, 2022, 3:04 PM IST

ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ವ್ಯಕ್ತಿ ಸಾವು.. ಗುಂಡಿಗೆ ಬಲಿಯಾದ ವ್ಯಕ್ತಿಯನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಗಾಯಗೊಂಡ ವ್ಯಕ್ತಿಯನ್ನು ಆತನ ಸಹೋದರ ಎಂದು ತಿಳಿದು ಬಂದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಈ ಸಹೋದರರು ಕಾಶ್ಮೀರಿ ಪಂಡಿತರು ಎಂದು ಹೇಳಲಾಗ್ತಿದೆ. ಆದರೆ ಪೊಲೀಸರು ಇದನ್ನು ಇನ್ನೂ ಖಚಿತಪಡಿಸಿಲ್ಲ.

ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಗರಿಕ ಬಲಿ, ಮತ್ತೋರ್ವ ಗಂಭೀರ
A civilian victim of a terrorist attack in Kashmir, his brother is critical

ಶೋಪಿಯಾನ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಕಾಶ್ಮೀರಿ ಪಂಡಿತ ಸಹೋದರರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಪಿಯಾನ್‌ನ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ ಮೃತ ವ್ಯಕ್ತಿ ಮತ್ತು ಗಾಯಾಳು ರಾಜ್ಯದ ಅಲ್ಪಸಂಖ್ಯಾತ(ಪಂಡಿತ) ಸಮುದಾಯಕ್ಕೆ ಸೇರಿದವರು. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಏತನ್ಮಧ್ಯೆ, ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿವೆ.

ಶೋಪಿಯಾನ್‌ನ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ನಾಗರಿಕರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಇಬ್ಬರೂ ಪಂಡಿತ ಸಮುದಾಯಕ್ಕೆ ಸೇರಿದವರು. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ. @JmuKmrPolice ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಗುಂಡಿಗೆ ಬಲಿಯಾದ ವ್ಯಕ್ತಿಯನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಗಾಯಗೊಂಡ ವ್ಯಕ್ತಿಯು ಆತನ ಸಹೋದರ ಎಂದು ತಿಳಿದು ಬಂದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಈ ಸಹೋದರರು ಕಾಶ್ಮೀರಿ ಪಂಡಿತರು ಎಂದು ಹೇಳಲಾಗಿದೆ. ಆದರೆ ಪೊಲೀಸರು ಇದನ್ನು ಇನ್ನೂ ಖಚಿತಪಡಿಸಿಲ್ಲ.

ಭಾರತೀಯ ಜನತಾ ಪಕ್ಷದ ಜಮ್ಮು ಮತ್ತು ಕಾಶ್ಮೀರ ಘಟಕದ ವಕ್ತಾರ ಅಲ್ತಾಫ್ ಠಾಕೂರ್ ಅವರು ಈ ಭಯೋತ್ಪಾದನೆಯ ಕೃತ್ಯವನ್ನು ಬಲವಾಗಿ ಖಂಡಿಸಿದ್ದಾರೆ. ಶೋಪಿಯಾನ್‌ನಲ್ಲಿ ಮುಗ್ಧರ ಮೇಲೆ ನಡೆದ ಭಯೋತ್ಪಾದನೆಯ ಕೃತ್ಯವನ್ನು ಬಲವಾಗಿ ಖಂಡಿಸುತ್ತೇನೆ. ಇದರಲ್ಲಿ ಒಬ್ಬ ಅಲ್ಪಸಂಖ್ಯಾತ ಸಮುದಾಯದ ಸದಸ್ಯ ಸುನೀಲ್ ಕುಮಾರ್ ಮೃತಪಟ್ಟಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ, ಕೊಲೆಗಾರರಿಗೆ ಶಿಕ್ಷೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನು ಓದಿ:ಕಂದಕಕ್ಕೆ ಉರುಳಿ ಬಿದ್ದ ಸೇನಾ ವಾಹನ.. ಏಳು ಮಂದಿ ಐಟಿಬಿಪಿ ಯೋಧರು ಸಾವು

Last Updated : Aug 16, 2022, 3:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.