ETV Bharat / bharat

ಅಮರ ಜವಾನ್ ಜ್ಯೋತಿ ನಂದಿಸಲ್ಲ, ವಿಲೀನವಷ್ಟೇ: ಕೇಂದ್ರ ಸರ್ಕಾರದ ಸ್ಪಷ್ಟನೆ

author img

By

Published : Jan 21, 2022, 1:26 PM IST

ಅಮರ್ ಜವಾನ್ ಜ್ಯೋತಿ
ಅಮರ್ ಜವಾನ್ ಜ್ಯೋತಿ

ಅಮರ ಜವಾನ್ ಜ್ಯೋತಿಯನ್ನು ಆರಿಸಿ ಹಾಕುತ್ತಿದೆ ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿಗೆ ಸ್ಪಷ್ಟೀಕರಣ ನೀಡಿರುವ ಕೇಂದ್ರ ಸರ್ಕಾರ, ಜ್ಯೋತಿಯನ್ನು ಆರಿಸುತ್ತಿಲ್ಲ, ಇದನ್ನು ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯಲ್ಲಿ ಲೀನ ಮಾಡುತ್ತಿದ್ದೇವೆ. ಇನ್ನು ಮುಂದೆ ಅಮರರಾದ ಸೈನಿಕರ ಜ್ಯೋತಿ ಯುದ್ಧ ಸ್ಮಾರಕದಲ್ಲಿ ಉರಿಯಲಿದೆ ಎಂದು ಸ್ಪಷನೆ ನೀಡಿದೆ.

ನವದೆಹಲಿ : ರಾಷ್ಟ್ರೀಯ ಭಾವನೆಗೆ ಸಂಬಂಧಿಸಿದಂತೆ ಹೊಸ ವಿವಾದವೊಂದು ಹುಟ್ಟಿಕೊಂಡಿದೆ. ಆ ವಿವಾದ ರಾಜಕೀಯಗೊಳ್ಳುವ ಮೊದಲೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದರೂ, ವಿವಾದದ ತೀವ್ರತೆ ಕಡಿಮೆಯಾಗುತ್ತಿಲ್ಲ. ದೆಹಲಿಯ ಇಂಡಿಯಾ ಗೇಟ್ ಬಳಿಯಿರುವ​ ಅಮರ ಜವಾನ್ ಜ್ಯೋತಿಯನ್ನು ನಂದಿಸಲಾಗುತ್ತದೆ ಎಂಬ ಊಹಾಪೋಹಗಳಿಂದಾಗಿ ಮತ್ತು ವರದಿಗಳಿಂದಾಗಿ ಸಣ್ಣ ಮಟ್ಟದ ವಿವಾದವೊಂದು ಹುಟ್ಟಿಕೊಂಡಿದೆ. ಈ ವಿವಾದ ರಾಜಕೀಯವಾಗಿಯೂ ಕೆಲವೊಂದು ಟೀಕಾಪ್ರಹಾರಗಳಿಗೆ ಕಾರಣವಾಗಿದೆ.

'ದೇಶಪ್ರೇಮ, ತ್ಯಾಗ ಕೆಲವರಿಗೆ ಅರ್ಥವಾಗುವುದಿಲ್ಲ' : ಅಮರ ಜವಾನ್ ಜ್ಯೋತಿಯನ್ನು ನಂದಿಸುವ ವರದಿಗಳನ್ನು ಆಧರಿಸಿ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಮ್ಮ ವೀರ ಸೈನಿಕರ ಪ್ರತೀಕವಾಗಿ ಉರಿಯುತ್ತಿದ್ದ ಅಮರ ಜ್ವಾಲೆಯನ್ನು ಇಂದು ನಂದಿಸುತ್ತಿರುವುದು ಅತ್ಯಂತ ದುಃಖದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • बहुत दुख की बात है कि हमारे वीर जवानों के लिए जो अमर ज्योति जलती थी, उसे आज बुझा दिया जाएगा।

    कुछ लोग देशप्रेम व बलिदान नहीं समझ सकते- कोई बात नहीं…
    हम अपने सैनिकों के लिए अमर जवान ज्योति एक बार फिर जलाएँगे!

    — Rahul Gandhi (@RahulGandhi) January 21, 2022 " class="align-text-top noRightClick twitterSection" data=" ">

ಕೆಲವರಿಗೆ ದೇಶ ಪ್ರೇಮ ಮತ್ತು ತ್ಯಾಗವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಆದರೂ ಪರವಾಗಿಲ್ಲ, ನಾವು ನಮ್ಮ ಸೈನಿಕರಿಗಾಗಿ ಅಮರ್ ಜವಾನ್ ಜ್ಯೋತಿಯನ್ನು ಮತ್ತೆ ಬೆಳಗಿಸುತ್ತೇವೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

'ಇತಿಹಾಸವನ್ನು ನಂದಿಸಿದಂತೆ': ಅಮರ್ ಜವಾನ್ ಜ್ಯೋತಿಯನ್ನು ನಂದಿಸುವುದು ಇತಿಹಾಸವನ್ನು ಅಳಿಸುತ್ತಿರುವುದಕ್ಕೆ ಸಮನಾಗಿದೆ. ಅಮರ್ ಜವಾನ್ ಜ್ಯೋತಿ ರಾಷ್ಟ್ರೀಯ ಪ್ರಜ್ಞೆ ಮೂಡಿಸುತ್ತಿದೆ. ನೂರು ಕೋಟಿ ಜನರು ಅದನ್ನು ಪೂಜಿಸುತ್ತಾ ಬೆಳೆದಿದ್ದಾರೆ. ಇತಿಹಾಸವನ್ನು ಕೇಂದ್ರ ಸರ್ಕಾರ ಅಳಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ವಾಗ್ದಾಳಿ ನಡೆಸಿದ್ದಾರೆ.

ಜ್ಯೋತಿ ನಂದಿಸಲ್ಲ, ವಿಲೀನವಷ್ಟೇ

ಅಮರ ಜವಾನ್ ಜ್ಯೋತಿಯನ್ನು ನಂದಿಸಲಾಗುತ್ತದೆ ಎಂಬ ವರದಿಗಳಿಗೆ ಸ್ಪಷ್ಟೀಕರಣ ನೀಡಿರುವ ಕೇಂದ್ರ ಸರ್ಕಾರದ ಮೂಲಗಳು, ಅಮರ ಜವಾನ್ ಜ್ಯೋತಿಯನ್ನು ಆರಿಸುತ್ತಿಲ್ಲ. ಅದನ್ನು ರಾಷ್ಟ್ರೀಯ ಯುದ್ಧ ಸ್ಮಾರಕದ ಜ್ವಾಲೆಯಲ್ಲಿ ವಿಲೀನ ಮಾಡಲಾಗುತ್ತದೆ. ಯುದ್ಧ ಸ್ಮಾರಕದ ಬಳಿ ಇರುವ ಜ್ಯೋತಿಯಲ್ಲೇ ಅಮರ ಜವಾನ್​ ಜ್ಯೋತಿಯು ಉರಿಯಲಿದೆ ಎಂದು ಸ್ಪಷ್ಟಪಡಿಸಿವೆ.

ವಿವಾದ ಏಕೆ?

ವಿವಾದ ಏಕೆ ಎಂಬ ವಿಚಾರ ತಿಳಿದುಕೊಳ್ಳಬೇಕಾದರೆ, ಇಂಡಿಯಾ ಗೇಟ್ ಬಳಿಯಿರುವ ಅಮರ ಜವಾನ್ ಸ್ಮಾರಕದ ಇತಿಹಾಸವನ್ನು ಅರಿತುಕೊಳ್ಳಬೇಕಾಗುತ್ತದೆ. ಅಮರ ಜವಾನ್ ಸ್ಮಾರಕವನ್ನು ಬ್ರಿಟಿಷ್ ಸರ್ಕಾರವು 1914-1921ರ ನಡುವೆ ಪ್ರಾಣ ಕಳೆದುಕೊಂಡ ಬ್ರಿಟಿಷ್ ಆಡಳಿತದ ಭಾರತೀಯ ಸೇನೆಯ ಸೈನಿಕರ ನೆನಪಿಗಾಗಿ ನಿರ್ಮಿಸಿತ್ತು.

ಆದಾದ ನಂತರ 1970ರ ದಶಕದಲ್ಲಿ ಪಾಕ್ ಸೇನೆಯ ವಿರುದ್ಧ ಭಾರತ ವಿಜಯದ ನೆನಪಿಗಾಗಿ ಅಮರ ಜವಾನ್ ಸ್ಮಾರಕದಲ್ಲಿ ಅಮರ ಜವಾನ್ ಜ್ಯೋತಿಯನ್ನು ಸ್ಥಾಪನೆ ಮಾಡಲಾಯಿತು. ಮೊದಲ ಮಹಾಯುದ್ಧದಲ್ಲಿ ಮೃತಪಟ್ಟ 84 ಸಾವಿರ ಸೈನಿಕರು ಮತ್ತು ಬಾಂಗ್ಲಾ ವಿಮೋಚನೆಯ ವೇಳೆಯಲ್ಲಿ ಮೃತಪಟ್ಟ 3,843 ಸೈನಿಕರ ಸ್ಮರಣಾರ್ಥವಾಗಿ ಈ ಜ್ಯೋತಿಯನ್ನು ಬೆಳಗಿಸಲಾಗಿತ್ತು.

ಕೆಲವು ವರ್ಷಗಳ ಹಿಂದೆ, ಅಂದರೆ 2019ರಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ನಿರ್ಮಾಣ ಮಾಡಿದ್ದು, ಫೆಬ್ರವರಿ 25ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದರು. ಭಾರತಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಅಂದರೆ ಗಾಲ್ವನ್ ಕಣಿವೆಯಲ್ಲಿ ಚೀನಾ ನಡುವಿನ ಸಂಘರ್ಷದಲ್ಲಿ ಹುತಾತ್ಮರಾದ ಯೋಧರ ಹೆಸರುಗಳನ್ನು ಈ ಸ್ಮಾರಕದಲ್ಲಿ ಕೆತ್ತಿಸಲಾಗಿದೆ.

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಾಣ ಕಳೆದುಕೊಂಡ ಸೈನಿಕರ ಹೆಸರುಗಳನ್ನು ಸ್ಮಾರಕದ ಗೋಡೆಗಳ ಮೇಲೆ ಸೇರಿಸಲಾಗಿದೆ. ಈಗ ಇತ್ತೀಚೆಗೆ ನಿರ್ಮಾಣವಾದ ರಾಷ್ಟ್ರೀಯ ಯುದ್ಧ ಸ್ಮಾರಕದದಲ್ಲಿ ಅತ್ಯಂತ ಹಳೆಯ ಅಮರ ಜವಾನ್ ಜ್ಯೋತಿಯನ್ನು ವಿಲೀನಗೊಳಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಅದರ ಅವಶ್ಯಕತೆ ಇಲ್ಲ ಎಂಬುದು ಕಾಂಗ್ರೆಸ್ ಸೇರಿದಂತೆ ಕೆಲವರ ವಾದ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.