ETV Bharat / bharat

ಬಳ್ಳಾರಿಯಲ್ಲಿ ಸ್ವಾಧೀನಪಡಿಸಿಕೊಂಡಿದ್ದ 2,643 ಎಕರೆ ಭೂಮಿ ಹಿಂದಿರುಗಿಸಲು ಅರ್ಸೆಲರ್​ ಮಿತ್ತಲ್​ ನಿರ್ಧಾರ

author img

By ETV Bharat Karnataka Team

Published : Oct 8, 2023, 8:27 AM IST

ಬಳ್ಳಾರಿಯಲ್ಲಿ ಉಕ್ಕಿನ ಸ್ಥಾವರ ಸ್ಥಾಪಿಸಲು ಸ್ವಾಧೀನಪಡಿಸಿಕೊಂಡಿದ್ದ 2,643 ಎಕರೆ ಭೂಮಿಯನ್ನು ಹಿಂದಿರುಗಿಸಲು ನಿರ್ಧರಿಸಿರುವುದಾಗಿ ವಿಶ್ವದ ಅತಿದೊಡ್ಡ ಉಕ್ಕು ಉತ್ಪಾದಕ ಅರ್ಸೆಲರ್​ ಮಿತ್ತಲ್​ ಕಂಪನಿ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ.

Not desirous of keeping land for Karnataka steel plant, will return 2,643 acres, ArcelorMittal to SC
ಬಳ್ಳಾರಿಯಲ್ಲಿ ಸ್ವಾಧೀನಪಡಿಸಿಕೊಂಡಿದ್ದ 2,643 ಎಕರೆ ಭೂಮಿಯನ್ನು ಹಿಂದಿರುಗಿಸಲು ಅರ್ಸೆಲರ್​ ಮಿತ್ತಲ್​ ನಿರ್ಧಾರ

ನವದೆಹಲಿ: ಕರ್ನಾಟಕದ ಬಳ್ಳಾರಿಯಲ್ಲಿ ಉಕ್ಕಿನ ಸ್ಥಾವರ ಸ್ಥಾಪಿಸಲು ಸ್ವಾಧೀನಪಡಿಸಿಕೊಂಡಿದ್ದ 2,643 ಎಕರೆ ಭೂಮಿಯನ್ನು ಹಿಂದಿರುಗಿಸಲು ನಿರ್ಧರಿಸಿರುವುದಾಗಿ ವಿಶ್ವದ ಅತಿದೊಡ್ಡ ಉಕ್ಕು ಉತ್ಪಾದಕ ಅರ್ಸೆಲರ್​ ಮಿತ್ತಲ್​ ಕಂಪನಿಯು ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ಈಗಾಗಲೇ ಪಾವತಿಸಿರುವ 267 ಕೋಟಿ ರೂಪಾಯಿ ಮೊತ್ತವನ್ನೂ ಕೂಡ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ತಿಳಿಸಿದೆ.

ಈ ಪ್ರಕರಣವು ನ್ಯಾಯಮೂರ್ತಿಗಳಾದ ಸಂಜಯ್​ ಕಿಶನ್​ ಕೌಲ್​ ಮತ್ತು ಸುಧಾಂಶು ಧುಲಿಯಾ ಅವರ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು. ಅರ್ಸೆಲರ್​ ಮಿತ್ತಲ್​ ಕಂಪನಿಯನ್ನು ಪ್ರತಿನಿಧಿಸಿದ ವಕೀಲರು, "ಬದಲಾದ ಸನ್ನಿವೇಶದಲ್ಲಿ ಅರ್ಜಿದಾರರು ಭೂಮಿಯನ್ನು ಇಟ್ಟುಕೊಳ್ಳಲು ಬಯಸುವುದಿಲ್ಲ ಮತ್ತು 2,643 ಎಕರೆಗಳ ಸಂಪೂರ್ಣ ಭೂಮಿಯನ್ನು ಹಿಂದಿರುಗಿಸುತ್ತಾರೆ. ಈಗಾಗಲೇ ಪಾವತಿಸಿರುವ 267 ಕೋಟಿ ರೂಪಾಯಿಗಳನ್ನು ಕೂಡ ಕೆಐಎಡಿಬಿ ಮುಟ್ಟುಗೋಲು ಹಾಕಿಕೊಳ್ಳಬಹುದು" ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಅರ್ಸೆಲರ್​ ಮಿತ್ತಲ್​ ಕಂಪನಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಪೀಠ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಗೆ ನೋಟಿಸ್​ ಜಾರಿ ಮಾಡಿತು. ವಿಚಾರಣೆ ವೇಳೆ ನ್ಯಾಯಪೀಠ, ಪರಿಹಾರದ ಬಗ್ಗೆ ರೈತರನ್ನು ಪ್ರತಿನಿಧಿಸುವ ವಕೀಲರ ಕಾಳಜಿಯನ್ನು ಗಮನಿಸಿತು. "ಭೂಮಾಲೀಕರಿಗೆ ಪರಿಹಾರ ಪಾವತಿಸಿದ ನಂತರ ಅಥವಾ ಹಣವನ್ನು ಹಿಂದಿರುಗಿಸಿದ ಬಳಿಕ ಭೂಮಿಯನ್ನು ಉಳಿಸಿಕೊಳ್ಳುತ್ತದೆಯೇ?" ಎಂಬುದನ್ನು ಸ್ಪಷ್ಟಪಡಿಸುವಂತೆ ಮಂಡಳಿಗೆ ತಿಳಿಸಿತು.

ಇದನ್ನೂ ಓದಿ: ಕೇಂದ್ರ ಸರ್ಕಾರ, ಚುನಾವಣಾ ಆಯೋಗ, ಆರ್​ಬಿಐಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್.. ಯಾಕೆ ಅಂತೀರಾ?

ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಯ ಪರ ಹಾಜರಿದ್ದ ವಕೀಲರು, ಈ ವಿಚಾರವಾಗಿ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೋರಿದರು. ವಿಚಾರಣೆಯನ್ನು ಅಕ್ಟೋಬರ್​ 30ಕ್ಕೆ ಮುಂದೂಡಲಾಯಿತು.

ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ 2010ರಲ್ಲಿ ಬಳ್ಳಾರಿಯಲ್ಲಿ ಉಕ್ಕಿನ ಸ್ಥಾವರ ಸ್ಥಾಪನೆಗಾಗಿ ಸ್ವಾಧೀನಪಡಿಸಿಕೊಂಡಿರುವ ಸುಮಾರು 300 ಎಕರೆ ಭೂಮಿಗೆ ಅಲ್ಲಿನ ಹೆಚ್ಚುವರಿ ಹಿರಿಯ ಸಿವಿಲ್​ ನ್ಯಾಯಾಲಯ ನಿಗದಿಪಡಿಸಿದಷ್ಟು ಪರಿಹಾರವನ್ನೇ ಅರ್ಸೆಲರ್​ ಮಿತ್ತಲ್​ ಕಂಪನಿ ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್​ ಈ ವರ್ಷದ ಫೆಬ್ರವರಿಯಲ್ಲಿ ಆದೇಶಿಸಿತ್ತು. ಈ ಆದೇಶದ ಪ್ರಕಾರ, ಪ್ರತಿ ಎಕರೆಗೆ ಕಂಪನಿ 30 ಲಕ್ಷ ರೂಪಾಯಿಗೂ ಅಧಿಕ ಪರಿಹಾರ ಪಾವತಿಸಬೇಕಿತ್ತು.

ಬಳ್ಳಾರಿಯಲ್ಲಿ ಸ್ವಾಧೀನಪಡಿಸಿಕೊಂಡಿರುವ 4,865.64 ಎಕರೆ ಭೂಮಿಯಲ್ಲಿ ತಮ್ಮ ಜಮೀನಿಗೆ ಹೆಚ್ಚಿನ ಪರಿಹಾರಕ್ಕಾಗಿ ಅವರು ಸಲ್ಲಿಸಿದ ಮನವಿಯನ್ನು ಮರುಪರಿಶೀಲಿಸುವ ನಿರ್ಧಾರದ ವಿರುದ್ಧ ರೈತರ ಗುಂಪು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: ಬಿಹಾರ ಜಾತಿ ಗಣತಿಯ ಹೆಚ್ಚುವರಿ ಮಾಹಿತಿ ಬಿಡುಗಡೆಗೆ ತಡೆ ನೀಡಲು ಸುಪ್ರೀಂ ಕೋರ್ಟ್​ ನಕಾರ

ನವದೆಹಲಿ: ಕರ್ನಾಟಕದ ಬಳ್ಳಾರಿಯಲ್ಲಿ ಉಕ್ಕಿನ ಸ್ಥಾವರ ಸ್ಥಾಪಿಸಲು ಸ್ವಾಧೀನಪಡಿಸಿಕೊಂಡಿದ್ದ 2,643 ಎಕರೆ ಭೂಮಿಯನ್ನು ಹಿಂದಿರುಗಿಸಲು ನಿರ್ಧರಿಸಿರುವುದಾಗಿ ವಿಶ್ವದ ಅತಿದೊಡ್ಡ ಉಕ್ಕು ಉತ್ಪಾದಕ ಅರ್ಸೆಲರ್​ ಮಿತ್ತಲ್​ ಕಂಪನಿಯು ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ಈಗಾಗಲೇ ಪಾವತಿಸಿರುವ 267 ಕೋಟಿ ರೂಪಾಯಿ ಮೊತ್ತವನ್ನೂ ಕೂಡ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ತಿಳಿಸಿದೆ.

ಈ ಪ್ರಕರಣವು ನ್ಯಾಯಮೂರ್ತಿಗಳಾದ ಸಂಜಯ್​ ಕಿಶನ್​ ಕೌಲ್​ ಮತ್ತು ಸುಧಾಂಶು ಧುಲಿಯಾ ಅವರ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು. ಅರ್ಸೆಲರ್​ ಮಿತ್ತಲ್​ ಕಂಪನಿಯನ್ನು ಪ್ರತಿನಿಧಿಸಿದ ವಕೀಲರು, "ಬದಲಾದ ಸನ್ನಿವೇಶದಲ್ಲಿ ಅರ್ಜಿದಾರರು ಭೂಮಿಯನ್ನು ಇಟ್ಟುಕೊಳ್ಳಲು ಬಯಸುವುದಿಲ್ಲ ಮತ್ತು 2,643 ಎಕರೆಗಳ ಸಂಪೂರ್ಣ ಭೂಮಿಯನ್ನು ಹಿಂದಿರುಗಿಸುತ್ತಾರೆ. ಈಗಾಗಲೇ ಪಾವತಿಸಿರುವ 267 ಕೋಟಿ ರೂಪಾಯಿಗಳನ್ನು ಕೂಡ ಕೆಐಎಡಿಬಿ ಮುಟ್ಟುಗೋಲು ಹಾಕಿಕೊಳ್ಳಬಹುದು" ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಅರ್ಸೆಲರ್​ ಮಿತ್ತಲ್​ ಕಂಪನಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಪೀಠ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಗೆ ನೋಟಿಸ್​ ಜಾರಿ ಮಾಡಿತು. ವಿಚಾರಣೆ ವೇಳೆ ನ್ಯಾಯಪೀಠ, ಪರಿಹಾರದ ಬಗ್ಗೆ ರೈತರನ್ನು ಪ್ರತಿನಿಧಿಸುವ ವಕೀಲರ ಕಾಳಜಿಯನ್ನು ಗಮನಿಸಿತು. "ಭೂಮಾಲೀಕರಿಗೆ ಪರಿಹಾರ ಪಾವತಿಸಿದ ನಂತರ ಅಥವಾ ಹಣವನ್ನು ಹಿಂದಿರುಗಿಸಿದ ಬಳಿಕ ಭೂಮಿಯನ್ನು ಉಳಿಸಿಕೊಳ್ಳುತ್ತದೆಯೇ?" ಎಂಬುದನ್ನು ಸ್ಪಷ್ಟಪಡಿಸುವಂತೆ ಮಂಡಳಿಗೆ ತಿಳಿಸಿತು.

ಇದನ್ನೂ ಓದಿ: ಕೇಂದ್ರ ಸರ್ಕಾರ, ಚುನಾವಣಾ ಆಯೋಗ, ಆರ್​ಬಿಐಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್.. ಯಾಕೆ ಅಂತೀರಾ?

ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಯ ಪರ ಹಾಜರಿದ್ದ ವಕೀಲರು, ಈ ವಿಚಾರವಾಗಿ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೋರಿದರು. ವಿಚಾರಣೆಯನ್ನು ಅಕ್ಟೋಬರ್​ 30ಕ್ಕೆ ಮುಂದೂಡಲಾಯಿತು.

ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ 2010ರಲ್ಲಿ ಬಳ್ಳಾರಿಯಲ್ಲಿ ಉಕ್ಕಿನ ಸ್ಥಾವರ ಸ್ಥಾಪನೆಗಾಗಿ ಸ್ವಾಧೀನಪಡಿಸಿಕೊಂಡಿರುವ ಸುಮಾರು 300 ಎಕರೆ ಭೂಮಿಗೆ ಅಲ್ಲಿನ ಹೆಚ್ಚುವರಿ ಹಿರಿಯ ಸಿವಿಲ್​ ನ್ಯಾಯಾಲಯ ನಿಗದಿಪಡಿಸಿದಷ್ಟು ಪರಿಹಾರವನ್ನೇ ಅರ್ಸೆಲರ್​ ಮಿತ್ತಲ್​ ಕಂಪನಿ ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್​ ಈ ವರ್ಷದ ಫೆಬ್ರವರಿಯಲ್ಲಿ ಆದೇಶಿಸಿತ್ತು. ಈ ಆದೇಶದ ಪ್ರಕಾರ, ಪ್ರತಿ ಎಕರೆಗೆ ಕಂಪನಿ 30 ಲಕ್ಷ ರೂಪಾಯಿಗೂ ಅಧಿಕ ಪರಿಹಾರ ಪಾವತಿಸಬೇಕಿತ್ತು.

ಬಳ್ಳಾರಿಯಲ್ಲಿ ಸ್ವಾಧೀನಪಡಿಸಿಕೊಂಡಿರುವ 4,865.64 ಎಕರೆ ಭೂಮಿಯಲ್ಲಿ ತಮ್ಮ ಜಮೀನಿಗೆ ಹೆಚ್ಚಿನ ಪರಿಹಾರಕ್ಕಾಗಿ ಅವರು ಸಲ್ಲಿಸಿದ ಮನವಿಯನ್ನು ಮರುಪರಿಶೀಲಿಸುವ ನಿರ್ಧಾರದ ವಿರುದ್ಧ ರೈತರ ಗುಂಪು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: ಬಿಹಾರ ಜಾತಿ ಗಣತಿಯ ಹೆಚ್ಚುವರಿ ಮಾಹಿತಿ ಬಿಡುಗಡೆಗೆ ತಡೆ ನೀಡಲು ಸುಪ್ರೀಂ ಕೋರ್ಟ್​ ನಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.