ETV Bharat / bharat

ಹಾರ್ನ್​ ಹೊಡೆದ ಕಾರಣಕ್ಕೆ ಇಬ್ಬರಿಗೆ ಚಾಕುವಿನಿಂದ ಚುಚ್ಚಿದ ಭೂಪ!!

author img

By

Published : Sep 9, 2020, 8:47 PM IST

knife attack on Two people, knife attack on Two people in Guntur, Guntur crime news, ಇಬ್ಬರ ಮೇಲೆ ಚಾಕುವಿನಿಂದ ದಾಳಿ, ಗುಂಟೂರಿನಲ್ಲಿ ಇಬ್ಬರ ಮೇಲೆ ಚಾಕುವಿನಿಂದ ದಾಳಿ, ಗುಂಟೂರು ಅಪರಾಧ ಸುದ್ದಿ,
ಹಾರ್ನ್​ ಹೊಡೆದಿದ್ದಕ್ಕೆ ಇಬ್ಬರಿಗೆ ಚಾಕುವಿನಿಂದ ಚುಚ್ಚಿದ ಭೂಪ

ಇದನ್ನು ಗಮನಿಸಿದ ಸ್ಥಳೀಯರು ಆರೋಪಿ ಶಶಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದರು. ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರಿಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ..

ಗುಂಟೂರು : ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಅವಾಂತರ ಸೃಷ್ಟಿಸಿದ್ದಾನೆ. ಹಾರ್ನ್​ ಹೊಡೆದನೆಂಬ ಕಾರಣಕ್ಕೆ ಕೋಪಗೊಂಡ ಆ ವ್ಯಕ್ತಿ ಇಬ್ಬರಿಗೆ ಚಾಕುವಿನಿಂದ ಹಲ್ಲೆಗೊಳಿಸಿರುವ ಘಟನೆ ಚೆರುಕುಪಲ್ಲಿ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ಶಶಿ ಎಂಬ ಯುವಕ ಬೈಕ್​ನಲ್ಲಿ ಹೋಗುತ್ತಿರುವಾಗ ಹಿಂಬದಿಯಿಂದ ಬಂದ ಆಟೋ ಹಾರ್ನ್​ ಹೊಡಿದಿದೆ. ಕುಡಿದ ಮತ್ತಿನಲ್ಲಿದ್ದ ಶಶಿ ಕೋಪಗೊಂಡು ಆಟೋ ಡ್ರೈವರ್​ ಸುನೀಲ್​ (40) ಮತ್ತು ಆತನ ಪಕ್ಕದಲ್ಲಿದ್ದ ಚುಕ್ಕ ಸುಮಂತ್​ (20) ಎಂಬಿಬ್ಬರಿಗೂ ಚಾಕುವಿನಿಂದ ದಾಳಿ ಮಾಡಿದ್ದಾನೆ.

ಇದನ್ನು ಗಮನಿಸಿದ ಸ್ಥಳೀಯರು ಆರೋಪಿ ಶಶಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದರು. ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರಿಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.