ನವದೆಹಲಿ: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದ್ದು, ತುರ್ತು ನಿಗಾ ಘಟಕದಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಸಿರಾಟದ ತೊಂದರೆಯಿಂದ ಅರುಣ್ ಜೇಟ್ಲಿಯವರನ್ನು ಆಗಸ್ಟ್ 9ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೇಟ್ಲಿ ಆರೋಗ್ಯದ ಬಗ್ಗೆ ವಿಚಾರಿಸಲು ಹಲವು ರಾಜಕೀಯ ಮುಖಂಡರು ಆಸ್ಪತ್ರೆಗೆ ಬಂದು ಹೋಗಿದ್ದಾರೆ.
ಭಾನುವಾರ ಆರ್ಎಸ್ಎಸ್ ಸಂಚಾಲಕ ಮೋಹನ್ ಭಾಗ್ವತ್, ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಆರೋಗ್ಯ ಸಚಿವ ಹರ್ಷವರ್ಧನ್, ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್ ಸೇರಿದಂತೆ ಹಲವರು ಆಗಮಿಸಿದ್ದರು.
ಆಗಸ್ಟ್ 10ರ ಬಳಿಕ ಏಮ್ಸ್ ಆಸ್ಪತ್ರೆಯ ವೈದ್ಯರು ಅರುಣ್ ಜೇಟ್ಲಿ ಆರೋಗ್ಯದ ಬಗ್ಗೆ ಯಾವುದೇ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿಲ್ಲ.