ETV Bharat / bharat

’ಬಿಜೆಪಿ ಪ್ರಜಾಪ್ರಭುತ್ವ ಕೊಲ್ಲುತ್ತಿದೆ’:  ಸಂಸತ್​ ಆವರಣದಲ್ಲಿ ಕಾಂಗ್ರೆಸ್​ ನಾಯಕರ ಪ್ರತಿಭಟನೆ

author img

By

Published : Jul 11, 2019, 1:05 PM IST

ಕರ್ನಾಟಕ ಮತ್ತು ಗೋವಾದ ರಾಜಕೀಯ ಪ್ರಹಸನ ಹಾಗೂ ಕೇಂದ್ರದ ಆಡಳಿತರೂಢ ಬಿಜೆಪಿ ಸರ್ಕಾರದ ನಡೆ ಖಂಡಿಸಿ ಸೋನಿಯಾ ಗಾಂಧಿ ಮತ್ತು ರಾಹುಲ್​ ಗಾಂಧಿ ಸೇರಿದಂತೆ, ಸಂಸದರು, ರಾಜ್ಯಸಭೆ ಸದಸ್ಯರು, ಕಾಂಗ್ರೆಸ್​ನ ಹಿರಿಯ ನಾಯಕರು ಸಂಸತ್​ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸೋನಿಯಾ ಗಾಂಧಿ

ನವದೆಹಲಿ: ಕರ್ನಾಟಕ ಮತ್ತು ಗೋವಾದ ರಾಜಕೀಯ ಬೆಳವಣಿಗೆಗಳಿಗೆ ಕೇಂದ್ರದ ಆಡಳಿತರೂಢ ಬಿಜೆಪಿ ಸರ್ಕಾರ ಕಾರಣ ಆರೋಪಿಸಿ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ ಸೇರಿದಂತೆ ಕಾಂಗ್ರೆಸ್​ನ ಹಿರಿಯ ನಾಯಕರು, ಸಂಸದರು, ರಾಜ್ಯಸಭೆ ಸದಸ್ಯರು ಸಂಸತ್​ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಬಿಜೆಪಿ ವಿರುದ್ಧ ಕಾಂಗ್ರೆಸ್​ ನಾಯಕರಿಂದ ಪ್ರತಿಭಟನೆ.

ಆಡಳಿತಾರೂಢ ಬಿಜೆಪಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡರು, ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವವನ್ನು ಬಿಜೆಪಿ ಕೊಲ್ಲುತ್ತಿದ್ದು, ಪ್ರಜಾತಂತ್ರ ವ್ಯವಸ್ಥೆಗೆ ವಿರೋಧಿಯಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಟಿಎಂಸಿ, ಎಸ್​ಪಿ, ಎನ್​ಸಿಪಿ, ಆರ್​ಜೆಡಿ, ಸಿಪಿಐನ (ಎಂ) ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅಧಿಕಾರದ ದಾಹಕ್ಕಾಗಿ ಬಿಜೆಪಿ ನಾಯಕರು ವಾಮಮಾರ್ಗಗಳನ್ನು ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್​ ಶಾಸಕರ ರಾಜೀನಾಮೆ ಹಾಗೂ ಗೋವಾದಲ್ಲಿ ಬಿಜೆಪಿಯಲ್ಲಿ ವಿಲೀನ ಆಗುವ ಪ್ರಕ್ರಿಯೆ ಹಿನ್ನೆಲೆಯಲ್ಲಿ ಯುಪಿಎ ಚೇರ್​​ ಪರ್ಸನ್​ ಸೋನಿಯಾ ಗಾಂಧಿ ರಾಜ್ಯಸಭೆ ಹಾಗೂ ಲೋಕಸಭಾ ಕಾಂಗ್ರೆಸ್​ ಸದಸ್ಯರ ಜತೆ ಕಲಾಪ ಆರಂಭಕ್ಕೂ ಮುನ್ನವೇ ಚರ್ಚೆ ನಡೆಸಿದ್ಧರು. ಅಷ್ಟೇ ಅಲ್ಲದೆ, ಕಲಾಪದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದ್ದರು.

ಅಂತೆಯೇ ಈ ವಿಷಯ ಉಭಯ ಸದನಗಳಲ್ಲಿ ಸದ್ದು ಮಾಡಿತು. ರಾಜ್ಯಸಭೆಯಲ್ಲಿ ಕಾಂಗ್ರೆಸ್​ ನಾಯಕರು ಕರ್ನಾಟಕ ಗೋವಾ ವಿಷಯ ಪ್ರಸ್ತಾಪಿಸಿ ವಾಕ್​ ಔಟ್​ ಕೂಡಾ ನಡೆಸಿದರು. ಲೋಕಸಭೆಯಲ್ಲೂ ವಿಷಯ ಪ್ರಸ್ತಾಪ ಆಯಿತು

Intro:Body:

ಕರ್ನಾಟಕ, ಗೋವಾ ಬೆಳವಣಿಗೆ: ಸಂಸತ್​​ನಲ್ಲಿ ಪ್ರತಿಪಕ್ಷಗಳಿಂದ ನಿಲುವಳಿ ಸೂಚನೆ! 



ನವದೆಹಲಿ:  ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯವಾಗಿ ಸೋತ ಬಳಿಕ ಕಾಂಗ್ರೆಸ್​ ಶಾಸಕರ ರಾಜೀನಾಮೆ ಪರ್ವ ಮುಂದುವರಿದಿದೆ.  ಗೋವಾದಲ್ಲಿ 10 ಶಾಸಕರು ಬಿಜೆಪಿಯಲ್ಲಿ ವಿಲೀನವಾಗಿದ್ದಾರೆ.   

ಇನ್ನು ಕರ್ನಾಟಕದಲ್ಲಿ ಈಗಾಗಲೇ 16 ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರಕ್ಕೆ ಸಂಕಟ ಎದುರಾಗುವಂತೆ ಮಾಡಿದೆ. 



ಇವೆಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವ ಎಚ್ಚೆತ್ತುಕೊಂಡಿದ್ದು, ಕೇಂದ್ರದ ನೀತಿ ವಿರುದ್ಧ ಹೋರಾಟಕ್ಕೆ ಅಣಿಯಾಗಿದೆ.  ಕಾಂಗ್ರೆಸ್​ ಶಾಸಕರ ರಾಜೀನಾಮೆ ಹಾಗೂ ಗೋವಾದಲ್ಲಿ ಬಿಜೆಪಿಯಲ್ಲಿ ವಿಲೀನ ಆಗುವ ಪ್ರಕಿಯೆ ಹಿನ್ನೆಲೆಯಲ್ಲಿ ಸಂಸತ್​ನಲ್ಲಿ ಈ ವಿಷಯ ಪ್ರಸ್ತಾಪಿಸಲು ಕಾಂಗ್ರೆಸ್​ ನಿರ್ಧರಿಸಿದೆ. 



ಈ ಹಿನ್ನೆಲೆಯಲ್ಲಿ ಯುಪಿಎ ಚೇರ್​​ ಪರ್ಸನ್​ ಸೋನಿಯಾ ಗಾಂಧಿ ರಾಜ್ಯಸಭೆ ಹಾಗೂ ಲೋಕಸಭಾ ಕಾಂಗ್ರೆಸ್​ ಸದಸ್ಯರ ಜತೆ ಚರ್ಚೆ ನಡೆಸಿದರು.  ಕಲಾಪದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.  ಈ ನಡುವೆ  ಟಿಎಂಸಿ ಸಹ ಕರ್ನಾಟಕ ಹಾಗೂ ಗೋವಾ ಬೆಳವಣಿಗೆಗಳ ಬಗ್ಗೆ ಚರ್ಚಿಸುವ ಸಲುವಾಗಿ ನಿಲುವಳಿ ಸೂಚನೆ ಮಂಡನೆಗೆ ನೋಟಿಸ್​ ನೀಡಲು ನಿರ್ಧರಿಸಿದೆ. ಈಗಾಗಲೇ ಕಾಂಗ್ರೆಸ್​ ಉಭಯ ಸದನಗಳಲ್ಲಿ  ನಿಲುವಳಿ ಸೂಚನೆಗೆ  ನೋಟಿಸ್​ ನೀಡಿಯಾಗಿದೆ.  

 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.