ETV Bharat / bharat

ಕಾಂಗ್ರೆಸ್​ ಸಿಎಂಗಳ ಸಭೆಯಲ್ಲೂ ಸುಮಲತಾ ಅಂಬರೀಷ್​ ಗೆಲುವಿನದ್ದೇ ಮಾತು

author img

By

Published : Jun 15, 2019, 1:36 PM IST

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಿತಿ ಆಯೋಗದ ಸಭೆಗೆ ಪೂರ್ವಭಾವಿಯಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದರು.

ಡಾ. ಮನಮೋಹನ್​ ಸಿಂಗ್ ಅವರೊಂದಿಗೆ ಕಾಂಗ್ರೆಸ್​ ಸರ್ಕಾರ ರಾಜ್ಯಗಳ ಸಿಎಂ ಸಭೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಸಂಸತ್ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಹಾಗೂ ಜೆಡಿಎಸ್​ನ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಡುವಿನ ಹಣಾಹಣಿ ಮುಗಿದರೂ ದೆಹಲಿ ಕಾಂಗ್ರೆಸ್ ಸಿಎಂಗಳ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪವಾಗಿದೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನೀತಿ ಆಯೋಗದ ಸಭೆಗೆ ಪೂರ್ವಭಾವಿಯಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದರು.

ಡಾ. ಮನಮೋಹನ್​ ಸಿಂಗ್ ಅವರೊಂದಿಗೆ ಕಾಂಗ್ರೆಸ್​ ಸರ್ಕಾರ ರಾಜ್ಯಗಳ ಸಿಎಂ ಸಭೆ

ಈ ವೇಳೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್​ನಾಥ್​ ಅವರ ಕರ್ನಾಟಕದ ರಾಜಕಾರಣದ ಬೆಳವಣಿಗೆ ಹೇಗಿದೆ ಎಂದು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದಾಗ, 'ಚೆನ್ನಾಗಿದೆ. ನಿಧಾನವಾಗಿ ಸಾಗುತ್ತಿದೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಗೆದ್ದಿದ್ದಾರೆ' ಎಂದರು. ಜೊತೆಗೆ ಯಡಿಯೂರಪ್ಪ ಅವರ ಬಗ್ಗೆಯ ಮಾತನಾಡಿದ್ದಾರೆ.

ಈ ಸಭೆಯಲ್ಲಿ ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಹಾಗೂ ರಾಜಸ್ಥಾನದ ಅಶೋಕ್ ಗೆಹ್ಲೊಟ್ ಉಪಸ್ಥಿತರಿದ್ದರು. ಆದರೆ, ಪಂಜಾಬ್ ಸಿಎಂ,ಕ್ಯಾಪ್ಟನ್ ಅಮರೇಂದರ್ ಸಿಂಗ್ ಅವರು ಗೈರಾಗಿದ್ದರು.

Intro:Body:Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.