ಭೋಪಾಲ್: ಮಧ್ಯಪ್ರದೇಶದಲ್ಲಿ ವ್ಯಾಪಕವಾಗಿ ವಿದ್ಯುತ್ ಕಡಿತವಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಿಎಂ ಕಮಲ್ನಾಥ್ ವಿಭಿನ್ನವಾಗಿ ಟಾಂಗ್ ನೀಡಿದ್ದಾರೆ. ಈ ಸಮಸ್ಯೆಗೆ ಬಿಜೆಪಿಯೇ ಕಾರಣ ಎಂಬರ್ಥದಲ್ಲಿ ಸ್ಥಳೀಯ ಪತ್ರಿಕೆಗಳಿಗೆ ಜಾಹೀರಾತು ನೀಡಿದ್ದಾರೆ.
ಮಧ್ಯಪ್ರದೇಶದಲ್ಲಿ ವಿದ್ಯುತ್ ಕಡಿತವಾಗ್ತಿಲ್ಲ. ಆದ್ರೆ ಬಿಜೆಪಿ ಇಂತಹ ಜಟಿಲತೆ ಉಂಟುಮಾಡುತ್ತಾ ಅಧಿಕಾರ (ಪವರ್) ಕಟ್ ಮಾಡಲು ಮುಂದಾಗಿದೆ. ಅಧಿಕಾರದ ಸಮಸ್ಯೆಯಿಂದ ವಿದ್ಯುತ್ ಕಡಿತ ತೊಂದರೆ ಎದುರಾಗಿಲ್ಲ ಎಂದು ಸ್ಥಳೀಯ ಪತ್ರಿಕೆಗಳಿಗೆ ನೀಡಿದ ಜಾಹೀರಾತಿನಲ್ಲಿ ಕಮಲ್ನಾಥ್ ತಿಳಿಸಿದ್ದಾರೆ.
ಇದಕ್ಕೆಲ್ಲ ಕಾರಣ ಈ ಹಿಂದೆ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಬದಲು ಅಧಿಕಾರದಲ್ಲಿ ಪ್ರತಿರೋಧ ತರುತ್ತಿರುವುದೇ ಆಗುತ್ತಿತ್ತು ಎಂದು ಶಿವರಾಜ್ಸಿಂಗ್ ಚೌಹಾಣ್ರ ಬಿಜೆಪಿ ಸರ್ಕಾರವನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ಇದೀಗ ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚಾಗಿ ವಿದ್ಯುತ್ ಉತ್ಪಾದನೆಯಾಗ್ತಿದೆ ಎಂದು ಹೇಳಿದ್ದಾರೆ.