ETV Bharat / bharat

ನಿರ್ಭಯಾ ಪ್ರಕರಣ: ರಾಷ್ಟ್ರಪತಿಗಳಿಗೆ ಮತ್ತೆ ಕ್ಷಮಾದಾನ ಅರ್ಜಿ ಸಲ್ಲಿಸಿದ ಅಪರಾಧಿ

author img

By

Published : Feb 29, 2020, 8:56 PM IST

ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್​ ಠಾಕೂರ್​ ಈ ಹಿಂದೆ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನ ರಾಷ್ಟ್ರಪತಿ ರಾಮ್​ ನಾಥ್​ ಕೋವಿಂದ್​ ತಿರಸ್ಕರಿಸಿದ್ದು, ಆ ಅರ್ಜಿ ಅಪೂರ್ಣವಾಗಿತ್ತು ಎಂಬ ನೆಪ ಹೇಳಿ ಇದೀಗ ಮತ್ತೆ ಹೊಸದಾಗಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ.

Nirbhaya
ಅಕ್ಷಯ್​ ಠಾಕೂರ್​

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿಗಳ ಮರಣ ದಂಡನೆ ಶಿಕ್ಷೆ ಮತ್ತಷ್ಟು ವಿಳಂಬವಾಗುತ್ತಿದೆ.

ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್​ ಠಾಕೂರ್​ ಈ ಹಿಂದೆ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನ ರಾಷ್ಟ್ರಪತಿ ರಾಮ್​ ನಾಥ್​ ಕೋವಿಂದ್​ ತಿರಸ್ಕರಿಸಿದ್ದು, ಆ ಅರ್ಜಿ ಅಪೂರ್ಣವಾಗಿತ್ತು ಎಂಬ ನೆಪ ಹೇಳಿ ಇದೀಗ ಮತ್ತೆ ಹೊಸದಾಗಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ.

ಈ ಕುರಿತು ದೆಹಲಿ ಕೋರ್ಟ್​ಗೆ ಮಾಹಿತಿ ನೀಡಿರುವ ಅಪರಾಧಿ ಪರ ವಕೀಲ ಎ.ಪಿ.ಸಿಂಗ್​, ಈ ಹಿಂದೆ ಸಲ್ಲಿಸಿದ್ದ ಅರ್ಜಿಯಲ್ಲಿ ಪೂರ್ತಿ ಅಂಶಗಳು ಇರಲಿಲ್ಲ. ಹೀಗಾಗಿ ಮತ್ತೆ ಕ್ಷಮಾದಾನ ಅರ್ಜಿ ಸಲ್ಲಿಸಲಾಗಿದ್ದು, ಅರ್ಜಿಯು ರಾಷ್ಟ್ರಪತಿಗಳ ಕಾರ್ಯದರ್ಶಿಗೆ ತಲುಪಿದೆ ಎಂದು ತಿಳಿಸಿದ್ದಾರೆ.

ಇನ್ನು ಶುಕ್ರವಾರವಷ್ಟೇ ಪ್ರಕರಣದ ಇನ್ನೋರ್ವ ಅಪರಾಧಿಯಾದ ಪವನ್​ ಕುಮಾರ್​ ಗುಪ್ತಾ, ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಕ್ಯುರೇಟಿವ್​ ಅರ್ಜಿ ಸಲ್ಲಿಸಿದ್ದ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.