ಪುರಿ/ಒಡಿಶಾ:ಜಗನ್ನಾಥ ದೇವಾಲಯದ ಒಳಗೆ ಪ್ರವೇಶಿಸಲು ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿದ್ದು, ಕೊರೊನಾ ನೆಗೆಟಿವ್ ವರದಿ ತಂದಿಲ್ಲದ ಕಾರಣ ,ಗವರ್ನರ್ ಗಣೇಶಿ ಲಾಲ್ ದೇವಸ್ಥಾನದ ಹೊರಗಿನ ಪ್ರವೇಶದ್ವಾರವಾದ ಲಯನ್ಸ್ ಗೇಟ್ ಬಳಿಯೇ ದೇವರ ಭಗವಾನ್ ಜಗನ್ನಾಥನ ದರ್ಶನ ಪಡೆಯುವಂತಾಯ್ತು.
ದೇವರ ದರ್ಶನಕ್ಕೆ ಆಗಮಿಸುವ ಎಲ್ಲಾ ಭಕ್ತರು ಕೋವಿಡ್ ಪರೀಕ್ಷೆಯ ಆರ್ಟಿ-ಪಿಸಿಆರ್ ಅಥವಾ ರ್ಯಾಪಿಡ್ ಆಂಟಿಜನ್ ಟೆಸ್ಟ್ ವರದಿಯನ್ನು ಜೊತೆಗೆ ತೆಗೆದುಕೊಂಡು ಬರುವಂತೆ ಸೂಚಿಸಲಾಗಿದೆ. ದೇವಾಲಯಕ್ಕೆ ಪ್ರವೇಶಿಸುವ ಸಮಯಕ್ಕಿಂತ 96 ಗಂಟೆಗಳಿಗಿಂತ ಮುಂಚಿತವಾಗಿ ಕೋವಿಡ್ ಪರೀಕ್ಷೆ ಮಾಡಿಸುವುದು ಕಡ್ಡಾಯವಾಗಿದೆ.
ಇನ್ನು ಈ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಗಣೇಶಿ ಲಾಲ್ ರಾಜ್ಯಪಾಲ ದೇವಾಲಯದ ಪ್ರವೇಶದ್ವಾರದಲ್ಲಿ ದೇವಾಲಯದ ಆಡಳಿತ ಮಂಡಳಿ ನಿಮ್ಮನ್ನು ನಿಲ್ಲಿಸಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ನಾನಾಗೇ ಗೇಟ್ನಿಂದ ಹಿಂದೆ ಸರಿದೆ ಎಂದು ಹೇಳಿದರು. ಈ ಕುರಿತು ಪ್ರತಿಕ್ರಿಯಿಸಿದ ದೇವಾಲಯದ ಮುಖ್ಯ ಆಡಳಿತಾಧಿಕಾರಿ ಕ್ರಿಶನ್ ಕುಮಾರ್, ರಾಜ್ಯಪಾಲರು ದೇವಸ್ಥಾನದೊಳಗೆ ಪ್ರವೇಶಿಸಲು ಕೋವಿಡ್ ನೆಗೆಟಿವ್ ವರದಿಯ ಅವಶ್ಯಕತೆಯ ಬಗ್ಗೆ ಸರ್ಕಾರದ ನಿರ್ಧಾರವನ್ನು ಗೌರವಿಸಿ, ದೇವಾಲಯದ ಹೊರಗೆ ಪ್ರಾರ್ಥನೆ ಸಲ್ಲಿಸಿದ್ರು ಮತ್ತು ನೆಗೆಟಿವ್ ರಿಪೋರ್ಟ್ ಇಲ್ಲದ ಕಾರಣ ಸ್ವಯಂಪ್ರೇರಣೆಯಿಂದ ದೇವಾಲಯದೊಳಗೆ ಪ್ರವೇಶಿಸದೇ ಹಿಂದೆ ಸರಿದರು ಎಂದು ತಿಳಿಸಿದ್ರು.
ಇದನ್ನೂ ಓದಿ:‘ಪುತ್ರಿ’ಗೆ ಹೆಮ್ಮೆಯಿಂದ ಸೆಲ್ಯೂಟ್ ಹೊಡೆದ ಪೊಲೀಸ್ ‘ತಂದೆ’