ETV Bharat / bharat

ಹಥ್ರಾಸ್​ ಸಂತ್ರಸ್ತೆ ಮೇಲೆ ಅತ್ಯಾಚಾರವೇ ನಡೆದಿಲ್ಲ: ಯುಪಿ ಎಡಿಜಿ ಪ್ರಶಾಂತ್​ ಕುಮಾರ್​!

author img

By

Published : Oct 1, 2020, 7:46 PM IST

UP ADG Prashant Kumar
UP ADG Prashant Kumar

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್​​​ ಮಹಾನಿರ್ದೇಶಕ ಮಾತನಾಡಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ಹಥ್ರಾಸ್​​ನಲ್ಲಿ 22 ವರ್ಷದ ಯುವತಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಎರಡು ದಿನಗಳ ಹಿಂದೆ ಸಾವನ್ನಪ್ಪಿದ್ದಾಳೆ. ಈ ಪ್ರಕರಣ ಇದೀಗ ಹೊತ್ತಿ ಉರಿಯುತ್ತಿದ್ದು, ಯೋಗಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ವಾಕ್ಸಮರ ನಡೆಸುತ್ತಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಉತ್ತರ ಪ್ರದೇಶ ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಪ್ರಶಾಂತ್​ ಕುಮಾರ್​ ಸಂತ್ರಸ್ತೆ ಮೇಲೆ ಅತ್ಯಾಚಾರವೇ ನಡೆದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಯುಪಿ ಎಡಿಜಿ ಪ್ರಶಾಂತ್​ ಕುಮಾರ್ ಮಾತು

ವಿಧಿ ವಿಜ್ಞಾನ ಪ್ರಯೋಗಾಲಯ ನೀಡಿರುವ ವರದಿ ಮಾಹಿತಿ ನೀಡಿರುವ ಎಡಿಜಿ ಪ್ರಶಾಂತ್​ ಕುಮಾರ್​​​(ಕಾನೂನು ಮತ್ತು ಸುವ್ಯವಸ್ಥೆ) ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ತಿಳಿಸಿದ್ದು, ಆಕೆಯ ಕುತ್ತಿಗೆಗೆ ಆದ ಗಾಯದಿಂದ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.

ರಾಹುಲ್​, ಪ್ರಿಯಾಂಕಾ ಬಂಧನ, ಬಿಡುಗಡೆ: ದೆಹಲಿಯತ್ತ ಮುಖಮಾಡಿದ ನಾಯಕರು!

ಎಫ್​ಎಸ್​ಎಲ್​ನ ವರದಿಯಲ್ಲಿ ವೀರ್ಯ ಇರಲಿಲ್ಲ ಎಂದು ತಿಳಿದು ಬಂದಿದ್ದು, ಇದು ಅತ್ಯಾಚಾರ ಅಥವಾ ಗ್ಯಾಂಗ್​ರೇಪ್​ ನಡೆದಿಲ್ಲ ಎಂಬುದನ್ನ ಸ್ಪಷ್ಟಪಡಿಸಿದೆ ಎಂದಿದ್ದಾರೆ. ಮಹಿಳೆ ಪೊಲೀಸರ ಮುಂದೆ ನೀಡಿರುವ ಹೇಳಿಕೆಯಲ್ಲೂ ಅತ್ಯಾಚಾರದ ಬಗ್ಗೆ ಉಲ್ಲೇಖ ಮಾಡಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.