ETV Bharat / bharat

ಭೀಕರ ರಸ್ತೆ ಅಪಘಾತ... ಸ್ಥಳದಲ್ಲೇ ನಾಲ್ವರ ದುರ್ಮರಣ

author img

By

Published : Jan 5, 2021, 12:16 PM IST

Updated : Jan 5, 2021, 12:49 PM IST

four died
ನಾಲ್ವರ ದುರ್ಮರಣ

ಬೆಳ್ಳಂಬೆಳಗ್ಗೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್​​ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ಧಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಮುರ್ಷಿದಾಬಾದ್‌ (ಪಶ್ಚಿಮ ಬಂಗಾಳ): ಲಾರಿಗೆ ಪಿಕಪ್ ವ್ಯಾನ್ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ರೆಜಿ ನಗರದಲ್ಲಿ ನಡೆದಿದೆ.

ಕಲಿ ನಾರಾಯಣಪುರದಿಂದ ಮುರ್ಷಿದಾಬಾದ್​ ಕಡೆಗೆ ಹೊರಟಿದ್ದ 9 ಜನರಿದ್ದ ಕಾರು ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ನಾಲ್ವರು ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

ಮುರ್ಷಿದಾಬಾದ್​ನಲ್ಲಿ ಭೀಕರ ರಸ್ತೆ ಅಪಘಾತ, ನಾಲ್ವರು ಸಾವು

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇನ್ನೂ ಮೃತರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲವಾದ್ದರಿಂದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Last Updated :Jan 5, 2021, 12:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.