ETV Bharat / bharat

ಕೃಷಿ ಕಾನೂನುಗಳು ಹಾಗೂ ರೈತರ ಆಂದೋಲನ ಕುರಿತು ಇಂದು ಮನವಿಗಳನ್ನು ಆಲಿಸಲಿರುವ ಸುಪ್ರೀಂ

author img

By

Published : Jan 11, 2021, 8:41 AM IST

supreme
supreme

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸರ್ಕಾರ ಜಾರಿಗೆ ತಂದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ಕಳೆದ ನವೆಂಬರ್‌ನಿಂದ ದೆಹಲಿಯ ವಿವಿಧ ಗಡಿ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ಪ್ರಶ್ನಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಆಂದೋಲನಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಮನವಿಗಳ ವಿಚಾರಣೆ ನಡೆಸಲಿದೆ.

ಪ್ರತಿಭಟನಾ ನಿರತ ರೈತ ಸಂಘಗಳೊಂದಿಗಿನ ಸರ್ಕಾರದ ಮಾತುಕತೆಗಳು ವಿಫಲವಾಗುತ್ತಿರುವ ಬೆನ್ನಲ್ಲೇ ಈ ವಿಚಾರಣೆ ನಡೆಯುತ್ತಿದೆ.

ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಲಿದೆ. ಕೇಂದ್ರ ಮತ್ತು ರೈತ ಮುಖಂಡರು ತಮ್ಮ ಮುಂದಿನ ಸಭೆಯನ್ನು ಜನವರಿ 15ರಂದು ನಡೆಸಲು ನಿರ್ಧರಿಸಿರುವುದರಿಂದ ಇಂದಿನ ವಿಚಾರಣೆ ಮಹತ್ವದ್ದಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.