ETV Bharat / bharat

ಹಳೇ ದ್ವೇಷದ ಹಿನ್ನೆಲೆ: ಕೊಡಲಿಯಿಂದ ಕೊಚ್ಚಿ ಸಹೋದರರ ಹತ್ಯೆ- ನಾಲ್ವರು ವಶಕ್ಕೆ

author img

By

Published : Jun 11, 2020, 10:00 AM IST

brothers killed
ಸಹೋದರರ ಹತ್ಯೆ

ಹಳೇ ದ್ವೇಷದ ಹಿನ್ನೆಲೆಯಲ್ಲಿ ಸಹೋದರರನ್ನು ದುಷ್ಕರ್ಮಿಗಳು ಕೊಂದ ಘಟನೆ ಜಬಲ್ಪುರ ಜಿಲ್ಲೆಯ ದುರ್ಗಾನಗರ ಪ್ರದೇಶದಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.

ಜಬಲ್ಪುರ (ಮಧ್ಯಪ್ರದೇಶ): ಹಳೇ ದ್ವೇಷದ ಹಿನ್ನೆಲೆಯಲ್ಲಿ ದುರ್ಷರ್ಮಿಗಳು ಇಬ್ಬರು ಸಹೋದರರನ್ನು ಕೊಡಲಿ ಹಾಗೂ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ದುರ್ಗಾನಗರ ಜಿಲ್ಲೆಯಲ್ಲಿ ನಡೆದಿದೆ.

ರೋಷನ್​ ಠಾಕೂರ್​ (35) ಹಾಗೂ ಆತನ ಸಹೋದರ ಬುರಾ(32) ಕೊಲೆಯಾದವರಾಗಿದ್ದು, ಮಂಗಳವಾರ ಮಧ್ಯರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ತಕ್ಷಣಕ್ಕೆ ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಹೋದರರು ಮೃತಪಟ್ಟಿದ್ದಾರೆ ಎಂದು ನಗರ ಪೊಲೀಸ್​ ಆಯುಕ್ತ ಅಖಿಲ್ ವರ್ಮಾ ತಿಳಿಸಿದ್ದಾರೆ.

ಈ ಸಂಬಂಧ ಈಗಾಗಲೇ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.