ETV Bharat / bharat

ಹುತಾತ್ಮರ ಗ್ಯಾಲರಿ ಉದ್ಘಾಟಿಸಿದ ಉದ್ಧವ್ ಠಾಕ್ರೆ

author img

By

Published : Nov 26, 2020, 5:23 PM IST

ಹುತಾತ್ಮರ ಗ್ಯಾಲರಿ ಉದ್ಘಾಟನೆ
ಹುತಾತ್ಮರ ಗ್ಯಾಲರಿ ಉದ್ಘಾಟನೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಇಂದು ಮುಂಬೈನ ಪೊಲೀಸ್ ಪ್ರಧಾನ ಕಚೇರಿಯಲ್ಲಿ 'ಹುತಾತ್ಮ ದಳನಾಂಚ್' (ಹುತಾತ್ಮರ ಗ್ಯಾಲರಿ) ಅನ್ನು ಉದ್ಘಾಟಿಸಿದರು.

ಮುಂಬೈ: 2008ರ ಜನವರಿ 26 ರಂದು ನಡೆದ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಹುತಾತ್ಮ ಯೋಧರ ಸವಿನೆನಪಿಗಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಇಂದು 'ಹುತಾತ್ಮ ದಳನಾಂಚ್​' (ಹುತಾತ್ಮರ ಗ್ಯಾಲರಿ) ಅನ್ನು ಉದ್ಘಾಟಿಸಿದರು.

ಮುಂಬೈನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹುತಾತ್ಮರ ಗ್ಯಾಲರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕೊರೊನಾ ನಿಯಂತ್ರಣ ಕುರಿತು ಮಹಾರಾಷ್ಟ್ರ ಪೊಲೀಸರ ಕಾರ್ಯವೈಖರಿಯ ಕುರಿತಾದ ಕಾಫಿ ಟೇಬಲ್ ಪುಸ್ತಕ ( ಅತುಲ್ಯ ಹಿಮ್ಮತ್) ಅನ್ನು ಬಿಡುಗಡೆ ಮಾಡಿದರು. ಈ ವೇಳೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಾರಿ ಸಹ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು.

2008 ರ ನವೆಂಬರ್ 26 ರಂದು ಮುಂಬೈನಲ್ಲಿ ನಾಲ್ಕು ದಿನಗಳ ಕಾಲ ಉಗ್ರರು ದಾಳಿ ನಡೆಸಿದ್ದರು. ಈ ವೇಳೆ 166 ಜನ ಸಾವನ್ನಪ್ಪಿದ್ದು, 300 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.