ETV Bharat / bharat

ಹತ್ರಾಸ್​ ಗ್ಯಾಂಗ್​ರೇಪ್​: ಸಂತ್ರಸ್ತೆ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ, ಸರ್ಕಾರಿ ನೌಕರಿ: ಸಿಎಂ ಯೋಗಿ ಘೋಷಣೆ

author img

By

Published : Sep 30, 2020, 6:55 PM IST

ಹತ್ರಾಸ್​​ ಗ್ಯಾಂಗ್​ರೇಪ್​ ಸಂತ್ರಸ್ತೆ ಕುಟುಂಬದೊಂದಿಗೆ ಯೋಗಿ ಆದಿತ್ಯನಾಥ್​​​ ಮಾತುಕತೆ ನಡೆಸಿ, ಅವರಿಗೆ ಸಮಾಧಾನ ಹೇಳಿದ್ದಾರೆ.

Hathras gang-rape victim Family
Hathras gang-rape victim Family

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್​​​ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸರ್ಕಾರದ ವಿರುದ್ಧ ಸಹ ಪ್ರತಿಭಟನೆ ನಡೆಯುತ್ತಿದೆ. ಇದೀಗ ಸಂತ್ರಸ್ತೆ ಕುಟುಂಬಸ್ಥರೊಂದಿಗೆ ಯೋಗಿ ಆದಿತ್ಯನಾಥ್​ ವಿಡಿಯೋ ಕಾನ್ಫರೆನ್ಸ್​​ ಮೂಲಕ ಮಾತುಕತೆ ನಡೆಸಿದ್ದಾರೆ.

ಸಂತ್ರಸ್ತೆ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ ಯೋಗಿ

ಈ ವೇಳೆ ಸಂತ್ರಸ್ತೆ ಕುಟುಂಬಕ್ಕೆ 25 ಲಕ್ಷ ರೂ ಘೋಷಣೆ ಮಾಡಿರುವ ಯೋಗಿ ಆದಿತ್ಯನಾಥ್​, ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಹೇಳಿದ್ದಾರೆ.

  • Kin of #Hathras gang-rape victim to be given Rs 25 lakh as ex-gratia and a house along with a governmnet job to one family member. Fastrack court to hear the matter; three-member SIT formed to probe the case: State govt

    — ANI UP (@ANINewsUP) September 30, 2020 " class="align-text-top noRightClick twitterSection" data=" ">

ಸೆಪ್ಟೆಂಬರ್​ 14ರಂದು ಪಶ್ಚಿಮ ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ 20 ವರ್ಷದ ಯುವತಿ ತನ್ನ ಸಹೋದರ ಹಾಗೂ ತಾಯಿ ಜತೆ ಹೊಲಕ್ಕೆ ಹೋಗಿದ್ದಳು. ಮೇವು ತೆಗೆದುಕೊಂಡು ವಾಪಸ್​ ಬರುತ್ತಿದ್ದ ವೇಳೆ ಆಕೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿದ್ದರು. ಇದಾದ ಬಳಿಕ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದ ಕಾಮುಕರು ನಾಲಿಗೆ ಕತ್ತರಿಸಿ ಪರಾರಿಯಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಾವನ್ನಪ್ಪಿದ್ದಳು.

ಹತ್ರಾಸ್​ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನ ಈಗಾಗಲೇ ಯೋಗಿ ಸರ್ಕಾರ ಎಸ್​​​​ಐಟಿ ತನಿಖೆಗೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಸಿಎಂ ಜತೆ ಮಾತುಕತೆ ನಡೆಸಿದ್ದಾಗಿ ತಿಳಿದು ಬಂದಿದೆ. ಇದೇ ಪ್ರಕರಣವನ್ನಿಟ್ಟುಕೊಂಡು ದೆಹಲಿ ಸಿಎಂ ಕೇಜ್ರಿವಾಲ್​, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಪ್ರಮುಖರು ಯೋಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.