'ಭಾರತಿ ಡ್ರೈವಿಂಗ್​ ಸ್ವರಾಜ್'.. ಮದುವೆ ಮಂಟಪಕ್ಕೆ ಟ್ರ್ಯಾಕ್ಟರ್​ನಲ್ಲಿ ಬಂದ ಯುವತಿ ನಡೆಗೆ ಆನಂದ್ ಮಹೀಂದ್ರಾ ಫಿದಾ!

author img

By

Published : Jun 1, 2022, 11:30 AM IST

Betul unique marriage

ವಧು ಒಬ್ಬರು ಕಲ್ಯಾಣ ಮಂಟಪಕ್ಕೆ ಟ್ರ್ಯಾಕ್ಟರ್ ಏರಿ ಬಂದಿದ್ದು, ಅವರ ನಡೆಗೆ ಉದ್ಯಮಿ ಆನಂದ ಮಹೀಂದ್ರಾ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆತುಲ್​(ಮಧ್ಯಪ್ರದೇಶ): ಮದುವೆ ಮಾಡಿಕೊಳ್ಳುವ ಸಂದರ್ಭದಲ್ಲಿ ವರ ಕುದುರೆ, ಬೈಕ್​, ಕಾರು, ಒಂಟೆ, ಆನೆ ಅಥವಾ ಹೆಲಿಕಾಪ್ಟರ್ ಏರಿ ಬರುವುದು ಸರ್ವೆ ಸಾಮಾನ್ಯ. ಆದರೆ, ಇಲ್ಲೊಬ್ಬ ವಧು ಟ್ರ್ಯಾಕ್ಟರ್ ಓಡಿಸಿಕೊಂಡು ಕಲ್ಯಾಣ ಮಂಟಪಕ್ಕೆ ಬಂದು ಗಮನ ಸೆಳೆದಿದ್ದಾರೆ. ಮೇ. 25ರಂದು ಈ ಘಟನೆ ನಡೆದಿದ್ದು, ಇದಕ್ಕೆ ಉದ್ಯಮಿ ಆನಂದ್ ಮಹೀಂದ್ರಾ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮದುವೆ ಮಂಟಪಕ್ಕೆ ಟ್ರ್ಯಾಕ್ಟರ್​ನಲ್ಲಿ ಬಂದ ಯುವತಿ ನಡೆಗೆ ಆನಂದ್ ಮಹೀಂದ್ರಾ ಫಿಧಾ!

ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಜವ್ರಾ ಗ್ರಾಮದ ನಿವಾಸಿ ಭಾರತಿ ತಾಗ್ಡೆ ಮೇ 25ರಂದು ಸಪ್ತಪದಿ ತುಳಿದಿದ್ದಾರೆ. ಈ ವೇಳೆ ಟ್ರ್ಯಾಕ್ಟರ್ ಓಡಿಸಿಕೊಂಡು ಬರುವ ಮೂಲಕ ಗಮನ ಸೆಳೆದಿದ್ದು, ಪ್ರದೇಶದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಟ್ವೀಟ್ ಮಾಡಿರುವ ಆನಂದ ಮಹೀಂದ್ರಾ, 'ವಧು ಭಾರತಿ ಡ್ರೈವಿಂಗ್ ಸ್ವರಾಜ್​​' ಎಂದು ಟ್ವೀಟ್ ಮಾಡಿದ್ದು, Brand Makes Sense... ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕುದುರೆ ಏರಿ ಬಂದ ವಧು.. ಕ್ಲೀನ್​ ಬೌಲ್ಡ್​ ಆದ ವರ!.. ವಿಡಿಯೋ!

ವಧು ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಮದುವೆ ಮಂಟಪಕ್ಕೆ ಬರುತ್ತಿದ್ದಂತೆ ಅನೇಕರು ಫಿದಾ ಆಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಜೊತೆಗೆ ವಧುವಿನ ಶೈಲಿಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಧು ಡ್ರೈವ್​ ಮಾಡಿದ ಟ್ರ್ಯಾಕ್ಟರ್ ಆನಂದ್ ಮಹೀಂದ್ರಾ ಕಂಪನಿಗೆ ಸೇರಿದ್ದಾಗಿದ್ದು, ಇದೀಗ ಈ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಟ್ರ್ಯಾಕ್ಟರ್​ಗಳು ಲಭ್ಯವಿರುತ್ತವೆ. ಮದುವೆ ಸಮಾರಂಭಗಳಲ್ಲಿ ಇವುಗಳ ಬಳಕೆ ಮಾಡುವುದು ಸರ್ವೆ ಸಾಮಾನ್ಯ. ಆದರೆ, ವಧು ಖುದ್ದಾಗಿ ಓಡಿಸಿಕೊಂಡು ಬರುವುದು ತುಂಬಾ ವಿರಳವಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಯುವತಿಯೊಬ್ಬಳು ಕಲ್ಯಾಣ ಮಂಟಪಕ್ಕೆ ಕುದುರೆ ಏರಿ ಬಂದು ಎಲ್ಲರ ಗಮನ ಸೆಳೆದಿದ್ದಳು. ಈ ಘಟನೆ ಕೂಡ ಮಧ್ಯಪ್ರದೇಶದ ಬೆತುಲ್​ದಲ್ಲಿ ನಡೆದಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.