ETV Bharat / bharat

ಗೋರಖ್‌ಪುರದಲ್ಲಿ ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲಿರುವ ಸಾಮಾಜಿಕ ಕಾರ್ಯಕರ್ತ

author img

By

Published : Jan 17, 2022, 2:22 PM IST

Bihar social activist Tamanna Hashmi to contest in Gorakhpur against Yogi Adityanath
ಗೋರಖ್‌ಪುರದಲ್ಲಿ ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲಿರುವ ಸಾಮಾಜಿಕ ಕಾರ್ಯಕರ್ತ

ಈ ಬಾರಿ ಸಿಎಂ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದಿಂದ ಸ್ಪರ್ಧಿಸುತ್ತಿದ್ದಾರೆ. ಹಾಗಾಗಿ, ನಾನು ಆ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಎಲ್ಲಾ ಶಕ್ತಿಯೊಂದಿಗೆ ಚುನಾವಣೆಯಲ್ಲಿ ಹೋರಾಡಿ ಗೆಲ್ಲುತ್ತೇನೆ. ನನಗೆ ಗೋರಖ್‌ಪುರದ ಜನರ ಮೇಲೆ ಸಂಪೂರ್ಣ ನಂಬಿಕೆಯಿದೆ..

ಮುಜಾಫರ್‌ಪುರ (ಉತ್ತರ ಪ್ರದೇಶ) : ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಬಿಹಾರದ ಸಾಮಾಜಿಕ ಕಾರ್ಯಕರ್ತರೊಬ್ಬರು ಘೋಷಿಸಿದ್ದಾರೆ.

ಬಿಹಾರದ ಮುಜಾಫರ್‌ಪುರದ ಸಾಮಾಜಿಕ ಕಾರ್ಯಕರ್ತ ತಮನ್ನಾ ಹಶ್ಮಿ ಅವರು ಸಿಎಂ ಯೋಗಿ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಒಂದು ವರ್ಗವನ್ನು ಗುರಿಯಾಗಿಸಿಕೊಂಡು ಯುಪಿ ಸಿಎಂ ಬೆದರಿಸಲು ಪ್ರಯತ್ನಿಸುತ್ತಾ ಬಂದಿದ್ದಾರೆ. ಹೀಗಾಗಿ, ಯೋಗಿ ಎಲ್ಲಿಂದ ಸ್ಪರ್ಧಿಸಿದರೂ ಸೋಲುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: 'ಯೋಗಿ ಗೋರಖ್​ಪುರ್​​ದಲ್ಲೇ ಇರಬೇಕು' ಅಲ್ಲೇ ಇರಿ ಎಂದು ಸಿಎಂ ಆದಿತ್ಯನಾಥ್​ ಕಾಲೆಳೆದ ಅಖಿಲೇಶ್​

ಈ ಬಾರಿ ಸಿಎಂ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದಿಂದ ಸ್ಪರ್ಧಿಸುತ್ತಿದ್ದಾರೆ. ಹಾಗಾಗಿ, ನಾನು ಆ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಎಲ್ಲಾ ಶಕ್ತಿಯೊಂದಿಗೆ ಚುನಾವಣೆಯಲ್ಲಿ ಹೋರಾಡಿ ಗೆಲ್ಲುತ್ತೇನೆ. ನನಗೆ ಗೋರಖ್‌ಪುರದ ಜನರ ಮೇಲೆ ಸಂಪೂರ್ಣ ನಂಬಿಕೆಯಿದೆ.

ನಾನು ಧರ್ಮದ ರಾಜಕಾರಣ ಮಾಡಲು ಹೋಗುವುದಿಲ್ಲ. ಬದಲಾಗಿ ದಬ್ಬಾಳಿಕೆ ನಡೆಸುವವರ ​​ವಿರುದ್ಧ ಧ್ವನಿ ಎತ್ತಲು ಹೊರಟಿದ್ದೇನೆ. ಅವರನ್ನು ಬೇರುಸಹಿತ ಕಿತ್ತು ಹಾಕುವುದು ನನ್ನ ಗುರಿ ಎಂದು ತಮನ್ನಾ ಹಶ್ಮಿ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.