ETV Bharat / bharat

ಮಹಾರಾಷ್ಟ್ರದಲ್ಲಿ ಎನ್​ಸಿಪಿ-ಬಿಜೆಪಿ ಸರ್ಕಾರ ರಚಿಸಬೇಕು: ರಾಮದಾಸ್​ ಅಠಾವಳೆ

author img

By

Published : Jul 18, 2021, 2:20 PM IST

Ramdas Athawale
ಕೇಂದ್ರ ಸಚಿವ ರಾಮದಾಸ್ ಅಥಾವಾಲೆ

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಕೈಜೋಡಿಸಬೇಕು ಎಂದು ಎನ್​ಸಿಪಿ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಒತ್ತಾಯಿಸಿದ್ದಾರೆ.

ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಭೆ ನಡೆಸಿದ ನಂತರ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಶನಿವಾರ ಎನ್‌ಸಿಪಿ ಎನ್‌ಡಿಎಗೆ ಸೇರಬೇಕು ಎಂದು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಳ್ಳಬೇಕು. ಬದಲಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಕೈಜೋಡಿಸಬೇಕು ಎಂದು ಪವಾರ್ ಅವರನ್ನು ಒತ್ತಾಯಿಸಿದರು. "ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್‌ಸಿಪಿ ಸರ್ಕಾರ ರಚನೆಯಾಗಬೇಕು ಎಂದು ನಾನು ಭಾವಿಸುತ್ತೇನೆ" ಎಂದು ಈ ವೇಳೆ ಅಠಾವಳೆ ತಿಳಿಸಿದರು.

ಸೈದ್ಧಾಂತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳಿಂದಾಗಿ ಎರಡು ಪಕ್ಷಗಳು ಒಗ್ಗೂಡುವುದಿಲ್ಲ ಎಂದು ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸ್ಪಷ್ಟಪಡಿಸಿದ ನಂತರ, ಅಠಾವಳೆ ಈ ಹೇಳಿಕೆಯನ್ನು ನೀಡಿದ್ದಾರೆ. "ಬಿಜೆಪಿ ಮತ್ತು ಎನ್‌ಸಿಪಿ ಒಟ್ಟಿಗೆ ಸೇರುತ್ತವೆಯೇ! ಬಾಬಾಸಾಹೇಬ್​ (ಅಂಬೇಡ್ಕರ್) ರಚಿಸಿದ ಸಂವಿಧಾನವು ವಿಭಿನ್ನ ಬದಿಗಳನ್ನು ಒಂದುಗೂಡಿಸಲು ಪ್ರಯತ್ನಿಸುತ್ತದೆ" ಎಂದರು.

"ಶರದ್ ಪವಾರ್ ಅವರು ತಮ್ಮ ನಿರ್ಧಾರವನ್ನು ಬದಲಾಯಿಸಬೇಕೆಂದು ನಾನು ವಿನಂತಿಸುತ್ತೇನೆ. ಅವರು ಶಿವಸೇನೆಗೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಳ್ಳಬೇಕು. ಕಾಂಗ್ರೆಸ್ ಪಕ್ಷವು ನಿಮಗೆ ಪದೇ ಪದೇ ಎಚ್ಚರಿಕೆ ನೀಡುತ್ತಿದೆ. ಕಾಂಗ್ರೆಸ್​ನ ನಾನಾ ಜನರು ಪವಾರ್ ವಿರುದ್ಧ ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದಕ್ಕಾಗಿಯೇ ಶರದ್ ಪವಾರ್ ಎನ್‌ಡಿಎ ಜೊತೆ ಬರಬೇಕು” ಎಂದು ಹೇಳಿದರು.

ರೈತರ ವಿಷಯದಲ್ಲಿ ಪವಾರ್ ಪ್ರಧಾನಿ ಮೋದಿಯವರನ್ನು ಭೇಟಿಯಾದರು ಎಂಬ ಶಿವಸೇನೆ ಸಂಸದ ಅರವಿಂದ ಸಾವಂತ್ ಅವರ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು. "ಅವರು ರೈತರ ಸಮಸ್ಯೆಯ ಬಗ್ಗೆ ಮಾತನಾಡಿದರೆ ಅದು ಒಳ್ಳೆಯದು. ಆಂದೋಲನ ಕೊನೆಗೊಳ್ಳಬೇಕು. ರೈತರಿಗೆ ನ್ಯಾಯ ಸಿಗಬೇಕು. ಶರದ್ ಪವಾರ್ ಈ ಹಿಂದೆ ಕಾನೂನನ್ನು ರದ್ದುಪಡಿಸುವ ಅಗತ್ಯವಿಲ್ಲ, ಆದರೆ ರೈತರ ಸಮಸ್ಯೆಗಳನ್ನು ಪರಿಹರಿಸಲು ತಿದ್ದುಪಡಿ ಮಾಡಬೇಕು ಎಂದು ಹೇಳಿದ್ದರು. ಸಂಭಾಷಣೆ ಏನೇ ಇರಲಿ, ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಸ್ನೇಹ ಉತ್ತಮವಾಗಿರಬೇಕು" ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.