ಕೋವಿಡ್ ನಿಯಮ ಉಲ್ಲಂಘನೆ ಆರೋಪ: ಸಿಎಂ ಉದ್ದವ್​ ಠಾಕ್ರೆ ವಿರುದ್ಧ ದೂರು ದಾಖಲಿಸಿದ ತಜೀಂದರ್ ಪಾಲ್ ಸಿಂಗ್

author img

By

Published : Jun 23, 2022, 7:17 AM IST

BJYM leader files complaint against Uddhav Thackeray for vlolating Covid protocols

ಮಹಾರಾಷ್ಟ್ರ ಸಿಎಂ ಠಾಕ್ರೆ ಅವರಿಗೆ ಕೋವಿಡ್ -19ದೃಢಪಟ್ಟಿದ್ದರೂ, ಉದ್ದವ್​ ತಮ್ಮ ಬೆಂಬಲಿಗರನ್ನು ಭೇಟಿ ಮಾಡುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ರಾಷ್ಟ್ರೀಯ ಕಾರ್ಯದರ್ಶಿ ತಜೀಂದರ್ ಪಾಲ್ ಸಿಂಗ್ ಬಗ್ಗಾ ಆರೋಪಿಸಿದ್ದಾರೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆ ನಡುವೆ, ಕೋವಿಡ್ -19ರ ಪ್ರೋಟೋಕಾಲ್‌ಗಳ ಉಲ್ಲಂಘನೆಯಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ಬಿಜೆವೈಎಂ ಮುಖಂಡರೊಬ್ಬರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.

ಮಹಾರಾಷ್ಟ್ರ ಸಿಎಂ ಠಾಕ್ರೆ ಅವರಿಗೆ ಕೋವಿಡ್ -19 ದೃಢಪಟ್ಟಿದ್ದರೂ, ಉದ್ದವ್​ ತಮ್ಮ ಬೆಂಬಲಿಗರನ್ನು ಭೇಟಿ ಮಾಡುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ರಾಷ್ಟ್ರೀಯ ಕಾರ್ಯದರ್ಶಿ ತಜೀಂದರ್ ಪಾಲ್ ಸಿಂಗ್ ಬಗ್ಗಾ ಆರೋಪಿಸಿದ್ದಾರೆ.

ಈ ನಡುವೆ ಮುಂಬೈನ ಮಲಬಾರ್ ಹಿಲ್ ಪೊಲೀಸ್ ಠಾಣೆಗೆ ಬಗ್ಗಾ ಭೇಟಿ ನೀಡಿ ದೂರು ನೀಡಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಉದ್ಧವ್ ಠಾಕ್ರೆ ಅವರಿಗೆ ಕೋವಿಡ್​ ಇರುವುದಾಗಿ ಸ್ವತಃ ಅವರೇ ಫೇಸ್​​​ಬುಕ್​ ಲೈವ್​ನಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲ ವಿವಿಧ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ. ಅಷ್ಟೇ ಏಕೆ ಸಿಎಂ ಉದ್ದವ್​ ಠಾಕ್ರೆ ಅವರಿಗೆ ಕೋವಿಡ್ ಪಾಸಿಟಿವ್​ ದೃಢಪಟ್ಟಿದೆ ಎಂದು ಖಚಿತ ಪಡಿಸಿದ್ದಾರೆ.

ಹೀಗಾಗಿ ಕೋವಿಡ್ ನಿಯಮ ಉಲ್ಲಂಘಿಸಿರುವ ಮಹಾರಾಷ್ಟ್ರ ಸಿಎಂ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬಗ್ಗಾ ಮುಂಬೈ ಪೊಲೀಸರಿಗೆ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇದನ್ನು ಓದಿ:ಲಗೇಜುಗಳ ಸಮೇತ ಮುಖ್ಯಮಂತ್ರಿಗಳ ಅಧಿಕೃತ ಬಂಗಲೆ ತೊರೆದ ಉದ್ಧವ್ ಠಾಕ್ರೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.