ಹಾವು ಕಚ್ಚಿ ಮೃತಪಟ್ಟ ಅಣ್ಣ; ಅಂತ್ಯಕ್ರಿಯೆಗೆ ಬಂದ ತಮ್ಮನಿಗೂ ಹಾವು ಕಡಿದು ಸಾವು

author img

By

Published : Aug 4, 2022, 11:05 PM IST

Brothers died one after another by snakebite

ಉತ್ತರ ಪ್ರದೇಶದ ಭವಾನಿಪುರ ಗ್ರಾಮದಲ್ಲಿ ಅಣ್ಣನ ಅಂತ್ಯಸಂಸ್ಕಾರಕ್ಕಾಗಿ ಬಂದಿದ್ದ ತಮ್ಮನೂ ಹಾವು ಕಡಿತದಿಂದ ಸಾವನ್ನಪ್ಪಿದ್ದಾನೆ. ಮತ್ತೋರ್ವ ಸಂಬಂಧಿಯೂ ಹಾವು ಕಡಿತಕ್ಕೊಳಗಾಗಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.

ಬಲರಾಮ್​ಪುರ (ಉತ್ತರ ಪ್ರದೇಶ): ಹಾವಿನ ಕಡಿತದಿಂದ ಸಾವನ್ನಪ್ಪಿದ್ದ ಅಣ್ಣನ ಅಂತ್ಯಸಂಸ್ಕಾರ ಮಾಡಲೆಂದು ಹೋದ ತಮ್ಮನೂ ಹಾವು ಕಚ್ಚಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಬಲರಾಮ್​ಪುರದಲ್ಲಿ ನಡೆದಿದೆ.

ಇಲ್ಲಿನ ಭವಾನಿಪುರ ಗ್ರಾಮದಲ್ಲಿ ಮಂಗಳವಾರ ಅರವಿಂದ್ ಮಿಶ್ರಾ (38) ಹಾವು ಕಡಿತದಿಂದ ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲೆಂದು ಬುಧವಾರ ಸಹೋದರ ಗೋವಿಂದ್​ ಮಿಶ್ರಾ (22) ಹಾಗೂ ಸಂಬಂಧಿಯಾದ ಚಂದ್ರಶೇಖರ್​ ಪಾಂಡೆ ಲೂದಿಯಾನದಿಂದ ಭವಾನಿಪುರಕ್ಕೆ ಬಂದಿದ್ದಾರೆ.

ಆದರೆ, ಅಣ್ಣನ ಅಂತ್ಯಸಂಸ್ಕಾರ ಮುಗಿಸಿದ ನಂತರ ತಮ್ಮ ಗೋವಿಂದ್​ ಮಿಶ್ರಾ ಮತ್ತು ಚಂದ್ರಶೇಖರ್​ ಪಾಂಡೆ ಮನೆಯಲ್ಲಿ ಮಲಗಿದ್ದರು. ಈ ವೇಳೆ ಇಬ್ಬರಿಗೂ ಹಾವು ಕಚ್ಚಿದೆ. ಇದರಿಂದ ಗೋವಿಂದ್​ ಮಿಶ್ರಾ ಸಾವನ್ನಪ್ಪಿದ್ದಾರೆ. ಇತ್ತ, ಪಾಂಡೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಇವರ ಆರೋಗ್ಯ ಸ್ಥಿತಿಯೂ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ತಿಳಿದ ಆರೋಗ್ಯ ಹಾಗೂ ಇತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೇ, ಸ್ಥಳೀಯ ಶಾಸಕ ಕೈಲಾಸ್​ನಾಥ್​ ಶುಕ್ಲಾ ಕೂಡ ನೊಂದ ಕುಟುಂಬಸ್ಥರನ್ನು ಭೇಟಿ ಮಾಡಿ, ನೆರವು ಕಲ್ಪಿಸುವ ಭರವಸೆ ನೀಡಿದ್ದಾರೆ. ಜೊತೆಗೆ ಗ್ರಾಮದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳುಹಿಸದಂತೆ ಕ್ರಮ ವಹಿಸಲು ಅಧಿಕಾರಿಗಳು ಶಾಸಕ ಶುಕ್ಲಾ ಸೂಚಿಸಿದ್ದಾರೆ.

ಇದನ್ನೂ ಓದಿ: ಹೊಲದಲ್ಲಿ ಜೀವಂತ ಶಿಶು ಹೂತು ಹೋದ ಹೃದಯಹೀನರು: ರಕ್ಷಿಸಿ ಜೀವ ಉಳಿಸಿದ ರೈತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.