ETV Bharat / bharat

ಶಿಕ್ಷಕರ ನೇಮಕಾತಿ ಹಗರಣ ; ಟಿಎಂಸಿ ಶಾಸಕ ಜಿಬಾನ್ ಕೃಷ್ಣ ಬಂಧನ

author img

By

Published : Apr 17, 2023, 12:25 PM IST

ಟಿಎಂಸಿ ಶಾಸಕ ಜಿಬಾನ್ ಕೃಷ್ಣ ಸಹಾ ಬಂಧನ
ಟಿಎಂಸಿ ಶಾಸಕ ಜಿಬಾನ್ ಕೃಷ್ಣ ಸಹಾ ಬಂಧನ

ಶಿಕ್ಷಕರ ನೇಮಕಾತಿ ಹಗರಣ ಪ್ರಕರಣದಲ್ಲಿ ಶಾಸಕ ಜಿಬಾನ್​ ಕೃಷ್ಣ ಸಹಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಮುರ್ಷಿದಾಬಾದ್ (ಪಶ್ಚಿಮ ಬಂಗಾಳ): ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಟಿಎಂಸಿ ಶಾಸಕ ಜಿಬಾನ್ ಕೃಷ್ಣ ಸಹಾ ಅವರನ್ನು ಬಂಧಿಸಿದೆ. ಸಹಾ ಅವರು ಪಶ್ಚಿಮ ಬಂಗಾಳದ ಬುರ್ವಾನ್ ಕ್ಷೇತ್ರದ ಶಾಸಕರಾಗಿದ್ದಾರೆ. ಮುರ್ಷಿದಾಬಾದ್ ಜಿಲ್ಲೆಯ ಬುರ್ವಾನ್‌ನಲ್ಲಿರುವ ಅವರ ನಿವಾಸದಿಂದ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಮೂಲಗಳು ಖಚಿತಪಡಿಸಿವೆ. ಕಲ್ಕತ್ತಾ ಹೈಕೋರ್ಟ್‌ನ ಆದೇಶದ ಮೇರೆಗೆ ಶಾಸಕ ಸಹಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪಶ್ಚಿಮ ಬಂಗಾಳದ ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿ ಪ್ರಕ್ರಿಯೆ ನಡೆದಿರುವ ಕುರಿತು ಸಿಬಿಐ ಅಧಿಕಾರಿಗಳ ವಿಶೇಷ ತಂಡ ಏಪ್ರಿಲ್ 14 ರಿಂದ ಶಾಸಕ ಸಹಾ ಅವರ ನಿವಾಸ ಸೇರಿದಂತೆ ಆರು ಸ್ಥಳಗಳಲ್ಲಿ ಶೋಧ ನಡೆಸಿತ್ತು. ಬಿರ್ಭೂಮ್, ಮುರ್ಷಿದಾಬಾದ್ ಮತ್ತು ಕೋಲ್ಕತ್ತಾದಲ್ಲಿ ಸಹಾ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಸಿಬಿಐ ತಂಡಗಳು ಶೋಧ ನಡೆಸಿವೆ. ಭಾನುವಾರ ಸಂಜೆ ಅವರ ಮನೆಯ ಎದುರಿನ ನೀರಿನ ಹೊಂಡದಲ್ಲಿ ಮೊಬೈಲ್​ ಫೋನ್​ ಪತ್ತೆಯಾಗಿದ್ದು, ಹೊಂಡದಿಂದ ಫೋನ್ ಅನ್ನು ಹೊರ ತೆಗೆದು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳ ರಾಜ್ಯ ಮಟ್ಟದ 9 ಮತ್ತು 10ನೇ ತರಗತಿಯ ಮೊದಲ ಆಯ್ಕೆ ಪರೀಕ್ಷೆ (ಎಸ್‌ಎಲ್‌ಎಸ್‌ಟಿ) 2016ರ ನೇಮಕಾತಿ ಪ್ರಕ್ರಿಯೆಯಲ್ಲಿ ಆರೋಪಿತರು ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಾಗಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದರು ಎಂದು ದೂರು ದಾಖಲಾಗಿತ್ತು. ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಇಲಾಖೆಯ ಶಿಕ್ಷಕರ ನೇಮಕಾತಿ ಮತ್ತು ಅಭ್ಯರ್ಥಿಗಳ ಪಟ್ಟಿ ಮತ್ತು ಅವರ ವಿರುದ್ಧ ನಮೂದಿಸಲಾದ ಮೊತ್ತವನ್ನು ಒಳಗೊಂಡಿರುವ ದಾಖಲೆಗಳು ಸೇರಿದಂತೆ ಹಲವಾರು ದೋಷಾರೋಪಣೆಯ ವಸ್ತುಗಳನ್ನು ಸಿಬಿಐ ವಶಪಡಿಸಿಕೊಂಡಿದೆ.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಮುಖಂಡನ ಮುಖಕ್ಕೆ ಗುಂಡು ಹಾರಿಸಿದ ದುಷ್ಕರ್ಮಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.