ETV Bharat / bharat

ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಬ್ಯಾರಿಕೇಡ್ ಜಿಗಿಯಲೆತ್ನಿಸಿದ ಪ್ರಿಯಾಂಕಾ ಗಾಂಧಿ

author img

By

Published : Aug 5, 2022, 1:46 PM IST

Updated : Aug 5, 2022, 2:38 PM IST

ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಪ್ರತಿಭಟನೆ
ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಪ್ರತಿಭಟನೆ

  • #WATCH Congress leader Priyanka Gandhi Vadra jumps over a police barricade placed near AICC during party protest against price rise & unemployment in Delhi

    She was later detained by police during the Congress protest pic.twitter.com/s7lqYqsnEh

    — ANI (@ANI) August 5, 2022 " class="align-text-top noRightClick twitterSection" data=" ">

13:56 August 05

ರಾಹುಲ್​ ಗಾಂಧಿ ವಶಕ್ಕೆ ಪಡೆದ ಪೊಲೀಸರು

ಕೇಂದ್ರ ಸರ್ಕಾರದ ವೈಫಲ್ಯದ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ ಜೋರಾಗಿದೆ. ಕಾಂಗ್ರೆಸ್​​​ ಕಾರ್ಯಕರ್ತರು ರಾಹುಲ್​ ಗಾಂಧಿ ಅವರ ನೇತೃತ್ವದಲ್ಲಿ ಹೋರಾಡುತ್ತಿದ್ದಾರೆ. ಈ ನಡುವೆ ಪೊಲೀಸರು ರಾಹುಲ್​ ಗಾಂಧಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

13:36 August 05

ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಬ್ಯಾರಿಕೇಡ್ ಜಿಗಿಯಲೆತ್ನಿಸಿದ ಪ್ರಿಯಾಂಕಾ ಗಾಂಧಿ

ನವದೆಹಲಿ: ನಿರುದ್ಯೋಗ ಹಾಗೂ ಹಣದುಬ್ಬರಗಳನ್ನು ವಿರೋಧಿಸಿ ಕಾಂಗ್ರೆಸ್​ ಪಕ್ಷ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಪ್ರತಿಭಟನೆಯ ಸಮಯದಲ್ಲಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಎಐಸಿಸಿ ಕಚೇರಿ ಬಳಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್​ಗಳ ಮೇಲಿಂದ ಜಿಗಿಯಲು ಯತ್ನಿಸಿದ ಘಟನೆ ಜರುಗಿತು. ನಂತರ ಅವರನ್ನು ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಮತ್ತೊಂದೆಡೆ ಕಾಂಗ್ರೆಸ್ ಸಂಸದರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಂಜೀತ್ ರಂಜನ್ ಅವರನ್ನು ಕೂಡ ಪೊಲೀಸ್ ಲೈನ್ಸ್​ ಕಿಂಗ್ಸ್​ ವೇ ಕ್ಯಾಂಪ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹಣದುಬ್ಬರ ಮತ್ತು ಬೆಲೆ ಏರಿಕೆಯ ವಿಷಯವನ್ನು ಪ್ರಸ್ತಾಪಿಸಲು ಎಲ್ಲ ಕಾಂಗ್ರೆಸ್ ಸಂಸದರು ರಾಷ್ಟ್ರಪತಿ ಭವನದ ಕಡೆಗೆ ಮೆರವಣಿಗೆ ನಡೆಸುತ್ತಿದ್ದರು ಆದರೆ ಅವರು ನಮ್ಮನ್ನು ಇಲ್ಲಿಂದ ಮುಂದೆ ಹೋಗಲು ಬಿಡುತ್ತಿಲ್ಲ. ಜನರ ಸಮಸ್ಯೆಗಳನ್ನು ಎತ್ತುವುದು ನಮ್ಮ ಕೆಲಸ... ಕೆಲವು ಸಂಸದರನ್ನು ವಶಕ್ಕೆ ಪಡೆದಿದ್ದಾರೆ, ಥಳಿಸಿದ್ದಾರೆ ಅಂತ ಕಾಂಗ್ರೆಸ್ ಸಂಸದರು ಆರೋಪಿಸಿದ್ರು.

ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ ಆರಂಭವಾಗಿರುವ ಸರ್ವಾಧಿಕಾರ ಕಲ್ಪನೆಯ ವಿರುದ್ಧ ಧ್ವನಿ ಎತ್ತಿದವರಿಗೆ ಶಿಕ್ಷೆ ನೀಡಲಾಗುತ್ತಿದೆ. ಪ್ರಜಾಪ್ರಭುತ್ವದ ಸಾವಿಗೆ ನಾವು ಸಾಕ್ಷಿಯಾಗುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಸುಮಾರು ಒಂದು ಶತಮಾನದಿಂದ ಇಕ್ಕಟ್ಟಿನ ವಾತಾವರಣವಿದೆ. ಬಡವರು, ಮಧ್ಯಮ ವರ್ಗದವರು ಅನೇಕ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ಯಾರಾದರೂ ಸರ್ವಾಧಿಕಾರದ ವಿರುದ್ಧ ಮಾತನಾಡಿದರೆ ಅವರ ವಿರುದ್ಧ ಆಕ್ರಮಣ ಮಾಡಲಾಗುತ್ತದೆ. ಸತ್ಯದ ಪರ ಧ್ವನಿ ಎತ್ತಿದವರನ್ನ ಥಳಿಸಿ, ಬಂಧಿಸಿ, ಜೈಲಿಗೆ ಹಾಕಲಾಗುತ್ತದೆ ಎಂದು ಆರೋಪಿಸಿದರು

ಇದನ್ನು ಓದಿ:ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತಿದವರನ್ನ ಥಳಿಸಿ, ಜೈಲಿಗೆ ಹಾಕಲಾಗುತ್ತಿದೆ: ರಾಹುಲ್ ಗಾಂಧಿ ವಾಗ್ದಾಳಿ

Last Updated :Aug 5, 2022, 2:38 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.