ETV Bharat / bharat

Video: ಪಕ್ಷದ ಕಾರ್ಯಕರ್ತರ ಮಧ್ಯೆ ಹೊಡೆದಾಟ..ಕಾಂಗ್ರೆಸ್​ ಸಂಸದನ ನೇತೃತ್ವದಲ್ಲಿ ನಡೆದ ಸಭೆಯಲ್ಲೇ ಹೈಡ್ರಾಮಾ!

author img

By

Published : Sep 25, 2021, 6:59 PM IST

Tamil Nadu congress
Tamil Nadu congress

ಸ್ಥಳೀಯ ಚುನಾವಣೆಗೋಸ್ಕರ ನಡೆಯುತ್ತಿದ್ದು ಸಭೆವೊಂದರಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದ್ದು, ಅದರ ವಿಡಿಯೋ ಸದ್ಯ ವೈರಲ್​ ಆಗಿದೆ.

ಚೆನ್ನೈ(ತಮಿಳುನಾಡು): ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಸ್ಥಳೀಯ ಚುನಾವಣೆ ನಡೆಯುತ್ತಿದ್ದು, ಅದರ ತಯಾರಿಗಾಗಿ ನಡೆಯುತ್ತಿದ್ದ ಕಾಂಗ್ರೆಸ್​​​ ಕಾರ್ಯಕರ್ತರ ಸಭೆಯೊಂದರಲ್ಲಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.

ಕಾಂಗ್ರೆಸ್​ ಸಂಸದನ ನೇತೃತ್ವದಲ್ಲಿ ನಡೆದ ಸಭೆಯಲ್ಲೇ ಹೈಡ್ರಾಮಾ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಸ್ಥಳೀಯ ಚುನಾವಣೆ ತಯಾರಿಗಾಗಿ ಕಾಂಗ್ರೆಸ್​ ಕಾರ್ಯಕರ್ತರ ಸಭೆ ಆಯೋಜನೆ ಮಾಡಿತ್ತು. ಇದರಲ್ಲಿ ಕಾಂಗ್ರೆಸ್​ ಸಂಸದ, ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಸಹ ಭಾಗಿಯಾಗಿದ್ದರು. ಸಭೆ ನಡೆಯುತ್ತಿದ್ದ ವೇಳೆ ಎರಡು ಗುಂಪುಗಳ ಮಧ್ಯೆ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಡಿಕೊಂಡಿದ್ದು, ಕಚೇರಿಯಲ್ಲಿನ ಕುರ್ಚಿ ಎತ್ತಿ ಹೊರಗಡೆ ಒಗೆದಿದ್ದಾರೆ.

ಇದನ್ನೂ ಓದಿರಿ: ಮನಸೊಂದಿದ್ದರೆ ಮಾರ್ಗ.. ಮಾತನಾಡಲು, ಕೇಳಲು ಸಾಧ್ಯವಿಲ್ಲದ ಅಭ್ಯರ್ಥಿ UPSC ಪರೀಕ್ಷೆ ಪಾಸ್​

ಈ ವೇಳೆ, ಘಟನಾ ಸ್ಥಳಕ್ಕಾಗಮಿಸಿರುವ ಪೊಲೀಸರು ಕಾರ್ಯಕರ್ತರನ್ನ ಹೊರಗೆ ಕಳುಹಿಸಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಕಾಂಗ್ರೆಸ್​ ಪಕ್ಷದ ಎರಡು ಗುಂಪಿನ ಕಾರ್ಯಕರ್ತರು ಹೊಡೆದಾಡಿಕೊಂಡಿರುವ ವಿಡಿಯೋ ಮಾತ್ರ ಸಿಕ್ಕಾಪಟ್ಟೆ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ಒಬ್ಬರನ್ನೊಬ್ಬರು ಬೆನ್ನಟ್ಟಿ ಹೋಗಿ ಹೊಡೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.