ETV Bharat / bharat

11 ತಿಂಗಳ ನಂತರ ಗಾಜಿಪುರ ಗಡಿಯಲ್ಲಿ ಬ್ಯಾರಿಕೇಡ್ ತೆರವುಗೊಳಿಸಿದ ದೆಹಲಿ ಪೊಲೀಸರು

author img

By

Published : Oct 29, 2021, 12:42 PM IST

ಗುರುವಾರ ರಾತ್ರಿ ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ದೆಹಲಿ ಪೊಲೀಸರು ಬ್ಯಾರಿಕೇಡ್​ಗಳನ್ನು ತೆರವುಗೊಳಿಸಲು ದೆಹಲಿ ಪೊಲೀಸರು ಮುಂದಾಗಿದ್ದು, ತೆರವು ಕಾರ್ಯಾಚರಣೆ ಮುಂದುವರೆದಿದೆ.

Cops removing barricades at Ghazipur farmers' protest site
11 ತಿಂಗಳ ನಂತರ ಗಾಜಿಪುರ ಗಡಿಯಲ್ಲಿ ಬ್ಯಾರಿಕೇಡ್ ತೆರವುಗೊಳಿಸಿದ ದೆಹಲಿ ಪೊಲೀಸರು

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಉತ್ತರ ಪ್ರದೇಶ- ದೆಹಲಿ ಗಡಿಯಾದ ಗಾಜಿಪುರದಲ್ಲಿ ಬ್ಯಾರಿಕೇಡ್​ಗಳನ್ನು ಇಂದು ತೆರವುಗೊಳಿಸಲಾಗುತ್ತಿದೆ ಎಂದು ದೆಹಲಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಇದಕ್ಕೂ ಮೊದಲು ಗುರುವಾರ ರಾತ್ರಿ ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ದೆಹಲಿ ಪೊಲೀಸರು ಬ್ಯಾರಿಕೇಡ್​ಗಳನ್ನು ತೆರವುಗೊಳಿಸಲು ಮುಂದಾಗಿದ್ದರು. ಈಗ ಗಾಜಿಪುರದಲ್ಲಿ ತೆರವು ಕಾರ್ಯ ಮುಂದುವರೆದಿದೆ.

ದೆಹಲಿ ಪೊಲೀಸ್ ಮೂಲಗಳು ಈ ಕುರಿತು ಎಎನ್‌ಐಗೆ ಪ್ರತಿಕ್ರಿಯೆ ನೀಡಿದ್ದು, ಟಿಕ್ರಿ ಗಡಿ ಮತ್ತು ಗಾಜಿಪುರ ಗಡಿಯಲ್ಲಿ ಶೀಘ್ರದಲ್ಲೇ ತುರ್ತು ವಾಹನಗಳ ಓಡಾಟಕ್ಕೆ ಅನುವು ಮಾಡಿ ಕೊಡಲಾಗುತ್ತದೆ. ಈ ಕುರಿತು ಈಗಾಗಲೇ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಬ್ಯಾರಿಕೇಡ್​ಗಳ ತೆರವುಗೊಳಿಸಲಾಗುತ್ತಿದೆ ಎಂದಿದ್ದಾರೆ.

ಬ್ಯಾರಿಕೇಡ್ ತೆರವು ಕಾರ್ಯಾಚರಣೆ

ಗಡಿಯಲ್ಲಿ ಬ್ಯಾರಿಕೇಡ್​ಗಳನ್ನು ಅಳವಡಿಸುವ ಮೂಲಕ ಈ ಪ್ರದೇಶದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು ಎಂದು ಸುಪ್ರೀಂಕೋರ್ಟ್ ಹೇಳಿದ ನಂತರ ಬ್ಯಾರಿಕೇಡ್ ತೆರವುಗೊಳಿಸುವ ಕಾರ್ಯಕ್ಕೆ ದೆಹಲಿ ಪೊಲೀಸರು ಮುಂದಾಗಿದ್ದಾರೆ. ಸ್ಥಳದಲ್ಲಿ ಸರ್ಕಾರ ಹಾಕಿದ್ದ ಬ್ಯಾರಿಕೇಡ್ ಮಾತ್ರವಲ್ಲದೇ ಕಾಂಕ್ರಿಟ್ ಬ್ಲಾಕ್​ಗಳನ್ನು ತೆರವು ಮಾಡಲು ಕಾರ್ಮಿಕರು ಮತ್ತು ಜೆಸಿಬಿಗಳನ್ನು ಬಳಸಿಕೊಳ್ಳಲಾಗುತ್ತಿದೆ.

ರೈತರು ಪ್ರತಿಭಟನೆ ಆರಂಭಿಸಿದ ನಂತರ ದೆಹಲಿಯ ವಿವಿಧ ಗಡಿಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ನವೆಂಬರ್ 2020ರಿಂದ ಈ ಮಾರ್ಗಗಳಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ 11 ತಿಂಗಳ ನಂತರ ಬ್ಯಾರಿಕೇಡ್​ಗಳನ್ನು ತೆರವುಗೊಳಿಸಲಾಗುತ್ತಿದೆ.

ಇದನ್ನೂ ಓದಿ: ಮೊದಲ ಮಹಡಿಯಿಂದ 2ನೇ ತರಗತಿ ಬಾಲಕನ ತಲೆಕೆಳಗಾಗಿ ನೇತು ಹಾಕಿದ ಪ್ರಾಂಶುಪಾಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.