ಮುಳುಗು (ತೆಲಂಗಾಣ): ಕೇವಲ ಅಡುಗೆ ಮಾಡೋ ವಿಚಾರಕ್ಕೆ ಜಗಳವಾಗಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಬ್ ಇನ್ಸ್ಪೆಕ್ಟರ್ ಅನ್ನು ಸಿಆರ್ಪಿಎಫ್ ಕಾನ್ಸ್ಟೇಬಲ್ ಗುಂಡಿಕ್ಕಿ ಕೊಂದಿರುವ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯ ವೆಂಕಟಾಪುರಂ ವಲಯದಲ್ಲಿ ನಡೆದಿದೆ.
ಸಿಆರ್ಪಿಎಫ್ನ 39ನೇ ಬೆಟಾಲಿಯನ್ನ ಎಸ್ಐ ಉಮೇಶ್ ಚಂದ್ರ ಹಾಗೂ ಕಾನ್ಸ್ಟೇಬಲ್ ಸ್ಟೀಫನ್ ನಡುವೆ ಇಂದು ಬೆಳಗ್ಗೆ ಆಹಾರ ತಯಾರಿಸುವ ವಿಚಾರದಲ್ಲಿ ವಾಗ್ವಾದ ನಡೆದಿದೆ. ಜಗಳ ತಾರಕಕ್ಕೇರಿದ್ದು, ಸ್ಟೀಫನ್ ತನ್ನ ಗನ್ನಿಂದ ಉಮೇಶ್ ಮೇಲೆ ಗುಂಡು ಹಾರಿಸಿದ್ದಾರೆ. ಎಸ್ಐ ಉಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಸ್ಟೀಫನ್ ಕೂಡ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿದ್ದಾನೆ.
ಇದನ್ನೂ ಓದಿ: ಅನಂತ್ನಾಗ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಐಎಸ್ಜೆಕೆ ಉಗ್ರನ ಸದೆಬಡಿದ ಸೇನೆ
ಗಂಭೀರವಾಗಿ ಗಾಯಗೊಂಡಿರುವ ಕಾನ್ಸ್ಟೇಬಲ್ ಸ್ಟೀಫನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಮೇಶ್ ಬಿಹಾರ ನಿವಾಸಿಯಾಗಿದ್ದು, ಸ್ಟೀಫನ್ ತಮಿಳುನಾಡು ಮೂಲದವರಾಗಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿರುವುದಾಗಿ ಮುಳುಗು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.