ETV Bharat / bharat

ಯಾಸ್ ಸೈಕ್ಲೋನ್.. ಜನರ ಸುರಕ್ಷತೆಗೆ ಸಹಕರಿಸಲು ಕೈ ಕಾರ್ಯಕರ್ತರಿಗೆ ರಾಹುಲ್​ ಗಾಂಧಿ ಕರೆ

author img

By

Published : May 25, 2021, 11:32 AM IST

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರೂಪುಗೊಂಡಿರುವ ಯಾಸ್ ಚಂಡಮಾರುತವು ತೀವ್ರ ಸ್ವರೂಪ ಮೇ 26 ರಂದು ಒಡಿಶಾ ಹಾಗೂ ಪಶ್ಚಿಮ ಬಂಗಾಳ ಕರಾವಳಿಯನ್ನು ಹಾದು ಹೋಗಲಿದೆ..

Rahul Gandhi
ರಾಹುಲ್​ ಗಾಂಧಿ

ನವದೆಹಲಿ : ಯಾಸ್ ಚಂಡಮಾರುತದ ಪರಿಣಾಮ ಎದುರಿಸುವ ಜನರ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ನೆರವು ನೀಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

"ಯಾಸ್ ಚಂಡಮಾರುತವು ಬಂಗಾಳಕೊಲ್ಲಿಯಿಂದ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕಡೆಗೆ ಸಾಗುತ್ತಿದೆ. ಸೈಕ್ಲೋನ್ ಬಾಧಿತ ಪ್ರದೇಶಗಳ ಜನರ ಸುರಕ್ಷತೆಗಾಗಿ ಎಲ್ಲಾ ರೀತಿಯ ಸಹಾಯವನ್ನು ಒದಗಿಸುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ" ಎಂದು ಟ್ವೀಟ್​ ಮಾಡಿರುವ ರಾಹುಲ್ ಗಾಂಧಿ, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕೆಂದು ಜನರಲ್ಲಿ ಮನವಿ ಮಾಡಿದ್ದಾರೆ.

  • #CycloneYaas is moving towards Bengal and Odisha from the Bay of Bengal.

    I appeal to Congress workers to provide all assistance ensuring safety of those affected.

    Please follow all precautionary measures. pic.twitter.com/UaGi9PkcT2

    — Rahul Gandhi (@RahulGandhi) May 25, 2021 " class="align-text-top noRightClick twitterSection" data=" ">

ಇದನ್ನೂ ಓದಿ: ಯಾಸ್ ಚಂಡಮಾರುತ: ಸಿದ್ಧತೆಗಳ ಕುರಿತು ಸಿಎಂಗಳ ಜೊತೆ ಚರ್ಚಿಸಿದ ಅಮಿತ್ ಶಾ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರೂಪುಗೊಂಡಿರುವ ಯಾಸ್ ಚಂಡಮಾರುತವು ತೀವ್ರ ಸ್ವರೂಪ ಮೇ 26 ರಂದು ಒಡಿಶಾ ಹಾಗೂ ಪಶ್ಚಿಮ ಬಂಗಾಳ ಕರಾವಳಿಯನ್ನು ಹಾದು ಹೋಗಲಿದೆ.

ನಾಳೆ ಮಧ್ಯಾಹ್ನದ ವೇಳಗೆ ಒಡಿಶಾದ ಬಾಲಸೋರ್ ಬಳಿ 155 ಕಿ.ಮೀ ನಿಂದ 165 ಕಿ.ಮೀ ವೇಗದಲ್ಲಿ ಭೂಸ್ಪರ್ಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.