ETV Bharat / bharat

ಡಿಕೆಶಿ ವಿರುದ್ಧದ ತೆರಿಗೆ ವಂಚನೆ ಪ್ರಕರಣ: ಹೈಕೋರ್ಟ್​​ ಅವಲೋಕನಗಳಿಗೆ ಮಧ್ಯಂತರ ತಡೆ, ಸುಪ್ರೀಂನಿಂದ ನೋಟಿಸ್ ಜಾರಿ

author img

By

Published : Sep 19, 2022, 4:54 PM IST

ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಜಸ್ಟೀಸ್​​ ಸಂಜೀವ್​ ಖನ್ನಾ ಅವರ ನೇತೃತ್ವದ ಪೀಠ ಮಧ್ಯಂತರ ತಡೆ ನೀಡಿದೆ. ಅಷ್ಟೇ ಅಲ್ಲ ಈ ಪ್ರಕರಣದಲ್ಲಿ ಹೊಸದಾಗಿ ಪ್ರಾಸಿಕ್ಯೂಷನ್ ಸಲ್ಲಿಸಲು ಅರ್ಜಿದಾರರಿಗೆ ಸುಪ್ರೀಂಕೋರ್ಟ್​ ಸ್ವಾತಂತ್ರ್ಯ ನೀಡಿದೆ. ಆರು ವಾರಗಳಲ್ಲಿ ನೋಟಿಸ್​ಗೆ ಉತ್ತರ ನೀಡುವಂತೆಯೂ ಹಾಗೂ ನಾಲ್ಕು ವಾರಗಳಲ್ಲಿ ಕೌಂಟರ್ ಸಲ್ಲಿಸಲು ಸೂಚನೆ ನೀಡಿದೆ.

Interim stay on observations of HC as well
ಡಿಕೆಶಿ ವಿರುದ್ಧದ ತೆರಿಗೆ ವಂಚನೆ ಪ್ರಕರಣ

ನವದೆಹಲಿ: ತೆರಿಗೆ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ಡಿಕೆಶಿ ವಿರುದ್ಧದ ಅರ್ಜಿ ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್​ನ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​​​ ನೋಟಿಸ್​ ಜಾರಿ ಮಾಡಿದೆ.

ಇದೇ ವೇಳೆ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಜಸ್ಟೀಸ್​​ ಸಂಜೀವ್​ ಖನ್ನಾ ಅವರ ನೇತೃತ್ವದ ಪೀಠ ಮಧ್ಯಂತರ ತಡೆ ನೀಡಿದೆ. ಅಷ್ಟೇ ಅಲ್ಲ ಈ ಪ್ರಕರಣದಲ್ಲಿ ಹೊಸದಾಗಿ ಪ್ರಾಸಿಕ್ಯೂಷನ್ ಸಲ್ಲಿಸಲು ಅರ್ಜಿದಾರರಿಗೆ ಸುಪ್ರೀಂಕೋರ್ಟ್​ ಸ್ವಾತಂತ್ರ್ಯ ನೀಡಿದೆ. ಆರು ವಾರಗಳಲ್ಲಿ ನೋಟಿಸ್​ಗೆ ಉತ್ತರ ನೀಡುವಂತೆಯೂ ಹಾಗೂ ನಾಲ್ಕು ವಾರಗಳಲ್ಲಿ ಕೌಂಟರ್ ಸಲ್ಲಿಸಲು ಸೂಚನೆ ನೀಡಿದೆ. ಆ ಬಳಿಕ ಎರಡು ವಾರಗಳಲ್ಲಿ ಮರುಜೋಡಣೆ ಮಾಡಲು ನ್ಯಾಯಪೀಠ ಆದೇಶಿಸಿದೆ.

ಕಕ್ಷಿದಾರರ ಪರ ಹಿರಿಯ ವಕೀಲ ಮುಕುಲ್​ ರೋಹ್ಟಗಿ ವಾದ ಮಂಡನೆ ಮಾಡಿದರು.

ಇದನ್ನು ಓದಿ:ಅಧಿವೇಶನಕ್ಕೆ ಡಿಕೆಶಿ ಅಲಭ್ಯ: ಇಡಿ ವಿಚಾರಣೆ ಹಿನ್ನೆಲೆ ದಿಲ್ಲಿಗೆ ಪ್ರಯಾಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.