ಶೋಪಿಯಾನದಲ್ಲಿ​ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾಪಡೆ

author img

By

Published : Sep 23, 2021, 7:10 AM IST

ಭದ್ರತಾಪಡೆ

ಜಮ್ಮುಕಾಶ್ಮೀರದ ದಕ್ಷಿಣ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.

ಶ್ರೀನಗರ( ಜಮ್ಮುಕಾಶ್ಮೀರ) : ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ಮಿತಿಮೀರಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಕಾಶು ಚಿತ್ರಗಂನಲ್ಲಿ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಯೋಧರು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಕಾಶು ಚಿತ್ರಗಂ ಪ್ರದೇಶದಲ್ಲಿ ಉಗ್ರರು ಇರುವುದನ್ನು ಖಚಿತಪಡಿಸಿಕೊಂಡ ಸೇನೆ, ಆ ಪ್ರದೇಶವನ್ನು ಸುತ್ತುವರಿದಿದೆ. ಈ ವೇಳೆ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಸೇನೆಯು ಓರ್ವ ಉಗ್ರನನ್ನು ಎನ್​ಕೌಂಟರ್ ಮಾಡಿದೆ.

ಕಳೆದ ಹಲವು ದಿನಗಳಿಂದ ಜಮ್ಮು- ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ನಿರಂತರ ಗುಂಡಿನ ಚಕಮಕಿ ನಡೆಯುತ್ತಿದೆ. ಉಗ್ರರ ಬೇಟೆ ಆರಂಭಿಸಿರುವ ಸೇನೆ ನಿರಂತರ ಕಾರ್ಯಾಚರಣೆ ಮುಂದುವರೆಸಿದೆ.

ಇದನ್ನೂ ಓದಿ: ಉಗ್ರರೊಂದಿಗೆ ಸಂಪರ್ಕ: ಜಮ್ಮು-ಕಾಶ್ಮೀರದಲ್ಲಿ ಆರು ಸರ್ಕಾರಿ ನೌಕರರು ಸೇವೆಯಿಂದ ವಜಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.