ಮೀನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ಪಲ್ಟಿ: ಸ್ಥಳದಲ್ಲೇ ನಾಲ್ವರ ಸಾವು, ಹತ್ತು ಮಂದಿ ಸ್ಥಿತಿ ಗಂಭೀರ

author img

By

Published : Jan 14, 2022, 10:00 AM IST

ರಸ್ತೆ ಅಪಘಾತ

ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೆಂನಲ್ಲಿ ಮೀನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ರವಿಕುಮಾರ್ ವೀರಾ ತಿಳಿಸಿದ್ದಾರೆ.

ಆಂಧ್ರಪ್ರದೇಶ: ಸಂಕ್ರಾಂತಿ ಸಂಭ್ರಮದಂದೇ ಆಂಧ್ರಪ್ರದೇಶದಲ್ಲಿ ದುರಂತವೊಂದು ಸಂಭವಿಸಿದೆ. ತಡೆಪಲ್ಲಿಗುಡೆಂನಲ್ಲಿ ಮೀನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮುಂಜಾನೆ ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೆಂನಲ್ಲಿ ಮೀನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತದ ಸಮಯದಲ್ಲಿ ಚಾಲಕ ನಿದ್ದೆ ಮಾಡಿದ್ದರಿಂದ ದುರಂತ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಓದಿ: ದಾವಣಗೆರೆಯಲ್ಲಿ ಸಂಕ್ರಾಂತಿಯಂದೇ ಭೀಕರ ರಸ್ತೆ ಅಪಘಾತ.. ಮದ್ಯ ಸೇವಿಸಿ ನಿದ್ರೆಗೆ ಜಾರಿದ ಚಾಲಕ, ಏಳು ಜನರ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.