ಉದ್ದವ್​ ಠಾಕ್ರೆ ಭೇಟಿ ಮಾಡಿದ ವಿಶ್ವದ 2ನೇ ಸಿರಿವಂತ ಗೌತಮ ಅದಾನಿ.. ಕುತೂಹಲ ಕೆರಳಿಸಿದ ಭೇಟಿ

author img

By

Published : Sep 21, 2022, 10:20 PM IST

GAUTAM ADANI MET UDDHAV THACKERAY REASON UNKNOWN

ಬಿಜೆಪಿ ಮತ್ತು ಶಿಂಧೆ ಗುಂಪು ಶಿವಸೇನೆ ವಿರುದ್ಧ ಕತ್ತಿ ಮಸೆಯುತ್ತಿದೆ. ದಿನದಿಂದ ದಿನಕ್ಕೆ ಶಿವಸೇನೆ ಮತ್ತು ಬಿಜೆಪಿ ನಡುವಣ ಕಂದಕ ಜಾಸ್ತಿಯಾಗುತ್ತಲೇ ಇದೆ. ಏತನ್ಮಧ್ಯೆ ಖ್ಯಾತ ಕೈಗಾರಿಕೋದ್ಯಮಿ ಗೌತಮ್ ಅದಾನಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮಾತೋಶ್ರೀ ನಿವಾಸದಲ್ಲಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮುಂಬೈ: ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದ ಖ್ಯಾತ ಕೈಗಾರಿಕೋದ್ಯಮಿ ಗೌತಮ್ ಅದಾನಿ ಇಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿ ಅಚ್ಚರಿ ಮೂಡಿಸಿದ್ದಾರೆ.

ಉದ್ದವ್​ ಠಾಕ್ರೆ ನಿವಾಸ ಮಾತೋಶ್ರೀಗೆ ಭೇಟಿ ನೀಡಿದ ಅದಾನಿ, ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಇಬ್ಬರ ನಡುವೆ ಯಾವ ಬಗ್ಗೆ ಚರ್ಚೆ ನಡೆದಿದೆ ಎಂಬುದನ್ನು ಮೂಲಗಳು ಬಹಿರಂಗಪಡಿಸಿಲ್ಲ. ಏಕನಾಥ್ ಶಿಂಧೆ ಬಂಡಾಯದ ನಂತರ ಮಹಾರಾಷ್ಟ್ರದ ರಾಜ್ಯ ರಾಜಕಾರಣ ಭಾರಿ ಸದ್ದು ಮಾಡುತ್ತಿದೆ.

ಬಿಜೆಪಿ ಮತ್ತು ಶಿಂಧೆ ಗುಂಪು ಶಿವಸೇನೆ ವಿರುದ್ಧ ಕತ್ತಿ ಮಸೆಯುತ್ತಿದೆ. ದಿನದಿಂದ ದಿನಕ್ಕೆ ಶಿವಸೇನೆ ಮತ್ತು ಬಿಜೆಪಿ ನಡುವಣ ಕಂದಕ ಜಾಸ್ತಿಯಾಗುತ್ತಲೇ ಇದೆ. ಏತನ್ಮಧ್ಯೆ ಖ್ಯಾತ ಕೈಗಾರಿಕೋದ್ಯಮಿ ಗೌತಮ್ ಅದಾನಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮಾತೋಶ್ರೀ ನಿವಾಸದಲ್ಲಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮಾತೋಶ್ರೀಯಲ್ಲಿ ಉದ್ದವ್​ ಠಾಕ್ರೆ ಅವರನ್ನು ಭೇಟಿ ಮಾಡಿದ ಬಳಿಕ ಅದಾನಿ ಅವರನ್ನು ಬಿಜೆಪಿಯ ಮುಂಬೈ ಅಧ್ಯಕ್ಷ ಆಶಿಶ್ ಶೆಲಾರ್​ ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳು ರಾಜ್ಯದಲ್ಲಿ ಮತ್ತೊಮ್ಮೆ ರಾಜಕೀಯ ಮೇಲಾಟದ ಹೊಸ ಸಮೀಕರಣಗಳು ಸೃಷ್ಟಿಸುತ್ತವಾ ಎಂಬ ಚರ್ಚೆ ನಡೆದಿದೆ

ಇದನ್ನು ಓದಿ:ಪಿಎಂ ಕೇರ್ಸ್​ ಫಂಡ್​ಗೆ ರತನ್​ ಟಾಟಾ ಟ್ರಸ್ಟಿ, ಸಲಹೆಗಾರರಾಗಿ ಸುಧಾಮೂರ್ತಿ ನೇಮಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.