ಕಾಫಿ ಬೆಳೆಗಾರರ ಭೂಮಿ ರಕ್ಷಿಸಲು Coffee Act ಸರಳೀಕರಣ: ಸಚಿವ ಗೋಯಲ್

author img

By

Published : Sep 19, 2021, 9:17 AM IST

ಕಾಫಿ

ಕಾಫಿ ಕಾಯ್ದೆ(Coffee Act)ಯನ್ನು ಸರಳೀಕರಣಗೊಳಿಸುವ ಮೂಲಕ ಕಾಫಿ ಬೆಳೆಗಾರರ ಭೂಮಿಯನ್ನು ರಕ್ಷಿಸಲಾಗುವುದು ಎಂದು ಸಚಿವ ಪಿಯೂಷ್ ಗೋಯಲ್ ಹೇಳಿದರು.

ನವದೆಹಲಿ/ಬೆಂಗಳೂರು: ಕಾಫಿ ಬೆಳೆಗಾರರು ಸಾಲವನ್ನು ತೀರಿಸಲು ಸಾಧ್ಯವಾಗದಿದ್ದರೆ ತಮ್ಮ ಭೂಮಿಯನ್ನು ಕಳೆದುಕೊಳ್ಳದಂತೆ ಸರ್ಕಾರವು ಕಾಫಿ ಕಾಯ್ದೆಯನ್ನು ಸರಳಗೊಳಿಸುತ್ತದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದರು.

ಬೆಂಗಳೂರಿನ ಕಾಫಿ ಮಂಡಳಿ ಕೇಂದ್ರ ಕಚೇರಿಯಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯಲ್​, ಕಾಫಿ ಬೆಳೆಗಾರರು, ರೋಸ್ಟರ್‌ಗಳು, ರಫ್ತುದಾರರು ಮತ್ತು ಇತರ ಪಾಲುದಾರರೊಂದಿಗೆ ಸಂವಾದ ನಡೆಸಿದರು. ಈ ವೇಳೆ, ಹಣಕಾಸು ಆಸ್ತಿಗಳ ಭದ್ರತೆ ಮತ್ತು ಪುನರ್ ನಿರ್ಮಾಣ ಹಾಗೂ ಭದ್ರತಾ ಹಿತಾಸಕ್ತಿ (SARFAESI) ಕಾಯ್ದೆಯಡಿ ಬ್ಯಾಂಕ್​ಗಳು ನೀಡಿರುವ ನೋಟಿಸ್‌ಗಳಿಂದ ಕಾಫಿ ಬೆಳೆಗಾರರು ತಮ್ಮ ಭೂಮಿಯನ್ನು ಕಳೆದುಕೊಳ್ಳುವ ಆತಂಕ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಯಿಸಿದ ಸಚಿವರು, ಈ ಸಮಸ್ಯೆಗೆ ಸಂಬಂಧಿಸಿದಂತೆ ಇತರ ಸಚಿವಾಲಯಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.

ಪ್ರಸ್ತುತ ಇರುವ ಕಾಫಿ ಕಾಯ್ದೆಯನ್ನು 1942ರಲ್ಲಿ ಜಾರಿಗೆ ತರಲಾಗಿದೆ. ಈ ಕಾಯ್ದೆಯು ಕಾಫಿ ವ್ಯಾಪಾರಕ್ಕೆ ಅಡ್ಡಿಯಾಗಿರುವ ಅನೇಕ ನಿಬಂಧನೆಗಳನ್ನು ಹೊಂದಿದೆ. ಆದ್ದರಿಂದ, ಕಾನೂನಿನ ನಿಬಂಧನೆಗಳನ್ನು ಸಂಪೂರ್ಣವಾಗಿ ಮರುಪರಿಶೀಲಿಸಲು ಮತ್ತು ಕಾಫಿ ಕ್ಷೇತ್ರದ ಪ್ರಸ್ತುತ ಅಗತ್ಯಗಳಿಗೆ ಸೂಕ್ತವಾದ, ಸರಳವಾದ ಕಾಯ್ದೆಯನ್ನು ತರಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.

2004 ರಲ್ಲಿ, ಅಂದಿನ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರವು ಸರ್ಫಾಸಿ (SARFAESI) ಕಾಯ್ದೆಯನ್ನು ಅಂಗೀಕರಿಸಿತ್ತು. ಈ ಕಾಯ್ದೆಯು, ಪಡೆದ ಸಾಲ ಹಿಂದಿರುಗಿಸದಿದ್ದರೆ ವ್ಯಕ್ತಿಯ ಚರ ಮತ್ತು ಸ್ಥಿರ ಆಸ್ತಿಯನ್ನು ವಶಪಡಿಸಿಕೊಳ್ಳಲು ಬ್ಯಾಂಕುಗಳಿಗೆ ಅಧಿಕಾರ ನೀಡಿತ್ತು. ಹೆಚ್ಚುತ್ತಿರುವ ಸರಕು ಶುಲ್ಕದಿಂದಾಗಿ ಭಾರತವು ತನ್ನ ಸಾಂಪ್ರದಾಯಿಕ ಕಾಫಿ ರಫ್ತು ಮಾರುಕಟ್ಟೆಯನ್ನು ಕಳೆದುಕೊಳ್ಳಬಹುದು ಎಂದು ಹಲವಾರು ರಫ್ತುದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ, ಕಾಫಿಯನ್ನು ಹೆಚ್ಚಾಗಿ ದಕ್ಷಿಣ ರಾಜ್ಯಗಳಲ್ಲಿ, ವಿಶೇಷವಾಗಿ ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ಬೆಳೆಯಲಾಗುತ್ತದೆ. ಒಂದು ಅಂದಾಜಿನ ಪ್ರಕಾರ, ದೇಶದಲ್ಲಿ 2,50,000 ಕ್ಕಿಂತ ಹೆಚ್ಚು ಕಾಫಿ ಬೆಳೆಗಾರರಿದ್ದಾರೆ. ದೇಶದಲ್ಲಿ ಉತ್ಪಾದನೆಯಾಗುವ ಶೇಕಡಾ 80 ರಷ್ಟು ಕಾಫಿ ಯುರೋಪಿಯನ್ ದೇಶಗಳಾದ ಅಮೆರಿಕ, ರಷ್ಯಾ ಮತ್ತು ಜಪಾನ್‌ಗೆ ರಫ್ತಾಗುತ್ತದೆ. ಭಾರತೀಯ ಕಾಫಿ ಮಂಡಳಿಯಲ್ಲಿ ಲಭ್ಯವಿರುವ ಇತ್ತೀಚಿನ ಅಧಿಕೃತ ಮಾಹಿತಿಯ ಪ್ರಕಾರ, 2020-21 ರಲ್ಲಿ, ದೇಶವು ಸುಮಾರು 50 ದೇಶಗಳಿಗೆ 1,64,000 ಟನ್ ಕಾಫಿಯನ್ನು ರಫ್ತು ಮಾಡಿದೆ.

ಕಾಫಿ ಬೆಳೆಗಾರರು ಕೋವಿಡ್​ನಿಂದಾಗಿ ಸಂಕಷ್ಟ ಎದುರಿಸುತ್ತಿರುವ ಕಾರಣ ಸಾಲಗಳ ಪುನರ್​ರಚನೆ ಮತ್ತು ಸಾಲದ ಅವಧಿಯನ್ನು ವಿಸ್ತರಿಸುವ ಕೋರಿಕೆಯನ್ನು ಪರಿಗಣಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಭಾರತೀಯ ಕಾಫಿ ಮಂಡಳಿಯ ಮೇಲ್ವಿಚಾರಣೆಯನ್ನು ಕೃಷಿ ಸಚಿವಾಲಯಕ್ಕೆ ವರ್ಗಾಯಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಗೋಯಲ್ ಹೇಳಿದರು.

ಇದನ್ನೂ ಓದಿ: 2023ರಿಂದ ಬಳ್ಳಾರಿಯಲ್ಲಿ ಗಣಿಗಾರಿಕೆ ಆರಂಭ: ಕೆಐಒಸಿಎಲ್ ಎಂಡಿ ಟಿ. ಸಾಮಿನಾಥನ್

ಮಂಡಳಿಯು ಈಗ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.