ಸೂರತ್(ಗುಜರಾತ್): ಭಿಕ್ಷೆ ಬೇಡುತ್ತಿದ್ದ ಮಹಿಳೆಯೊಬ್ಬಳ ಮೇಲೆ ಕೆಲವರು ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿರುವ ಘಟನೆ ಗುಜರಾತ್ನ ಸೂರತ್ನಲ್ಲಿ ನಡೆದಿದ್ದು, ಅದರ ವಿಡಿಯೋ ಇದೀಗ ವೈರಲ್ ಆಗಿದೆ.
ಗುಜರಾತ್ನ ಕಬಿಲ್ಪುರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭಿಕ್ಷೆ ಬೇಡುತ್ತಿದ್ದ ಮಹಿಳೆ ಮಕ್ಕಳ ಕಳ್ಳಿ ಎಂದು ಭಾವಿಸಿ, ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ. ಕೆಲ ಯುವಕರು ಘಟನೆಯ ವಿಡಿಯೋ ಮಾಡಿದ್ದು, ತದನಂತರ ಅದು ವೈರಲ್ ಆಗಿದೆ. ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ, ಆಕೆಯ ರಕ್ಷಣೆ ಮಾಡಿದ್ದು, ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಹಿಳೆ ತನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪಾರ್ಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮೂಲತಃ ನವಸರಿಯ ಕಬಿಲ್ಪುರ್ ಪ್ರದೇಶದ ಮಹಿಳೆ, ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದು, ಭೀಕ್ಷೆ ಬೇಡಲು ಹೋಗಿದ್ದಾಗ ಮಕ್ಕಳ ಕಳ್ಳಿ ಎಂದು ಭಾವಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿರಿ: ₹1.5 ಕೋಟಿಗೆ ಒಲಿಪಿಂಕ್ ಚಿನ್ನ ವಿಜೇತ ನೀರಜ್ ಚೋಪ್ರಾ ಜಾವಲಿನ್ ಹರಾಜು
ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದು, ಕೆಲವರನ್ನ ವಿಚಾರಣೆಗೊಳಪಡಿಸಿದೆ ಎಂದು ವರದಿಯಾಗಿದೆ.