ETV Bharat / bharat

ಏಕರೂಪ ನಾಗರಿಕ ಸಂಹಿತೆ ಜಾರಿ, ಔರಂಗಾಬಾದ್ ನಗರದ ಹೆಸರು ಬದಲಿಸಲು ರಾಜ್​ ಠಾಕ್ರೆ ಆಗ್ರಹ

author img

By

Published : May 22, 2022, 1:52 PM IST

ಮಹಾರಾಷ್ಟ್ರದ ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿನಗರ ಎಂದು ಬದಲಾಯಿಸಬೇಕೆಂದು ರಾಜ್​ ಠಾಕ್ರೆ ಆಗ್ರಹಿಸಿದ್ದಾರೆ..

MNS Chief Raj Thackeray
ಎಂಎನ್​ಎಸ್​ ಅಧ್ಯಕ್ಷ ರಾಜ್​ ಠಾಕ್ರೆ

ಪುಣೆ(ಮಹಾರಾಷ್ಟ್ರ): ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿ ಮಾಡಬೇಕು ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ಆದಷ್ಟು ಬೇಗ ಜಾರಿಗೊಳಸಬೇಕೆಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್​ಎಸ್​)ಯ ಅಧ್ಯಕ್ಷ ರಾಜ್​ ಠಾಕ್ರೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿನಗರ ಎಂದು ಬದಲಾಯಿಸಬೇಕೆಂದೂ ಆಗ್ರಹಿಸಿದ್ದಾರೆ. ಈ ವೇಳೆ ಧ್ವನಿವರ್ಧಕ ವಿಚಾರವಾಗಿಯೂ ಅವರು ವಾಗ್ದಾಳಿ ಮುಂದುವರೆಸಿದ್ದಾರೆ.

  • After I asked my workers to play Hanuman Chalisa on loudspeakers, the Rana couple (Ravi&Navneet Rana) said they will recite Hanuman Chalisa at Matoshree. Is Matoshree a mosque? Everyone knows what happened between Shiv Sainiks and the Rana couple later: MNS Chief Raj Thackeray pic.twitter.com/4sTj7XAL2A

    — ANI (@ANI) May 22, 2022 " class="align-text-top noRightClick twitterSection" data=" ">

ಮಸೀದಿಗಳ ಧ್ವನಿವರ್ಧಕಗಳಿಗೆ ಪ್ರತಿಯಾಗಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ನುಡಿಸಲು ನಾನು ನಮ್ಮ ಕಾರ್ಯಕರ್ತರಲ್ಲಿ ಕೇಳಿಕೊಂಡಿದ್ದೆ. ನಂತರ ಸಂಸದೆ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ ದಂಪತಿ 'ಮಾತೋಶ್ರೀ' (ಸಿಎಂ ಉದ್ಧವ್​ ಠಾಕ್ರೆ ನಿವಾಸ)ದ ಮುಂದೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಹೇಳಿದ್ದರು.

ಆದರೆ, ಅವರನ್ನು ಬಂಧಿಸಿದ್ದರು. ಅಲ್ಲದೇ, ಶಿವಸೇನೆ ಕಾರ್ಯುಕರ್ತರು ಮತ್ತು ರಾಣಾ ದಂಪತಿ ನಡುವೆ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾದರೆ, 'ಮಾತೋಶ್ರೀ' ಏನು ಮಸೀದಿಯೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಪೊಲೀಸ್​ ಠಾಣೆಗೆ ಬೆಂಕಿ ಹಚ್ಚಿದ್ದವರಿಗೆ ತಕ್ಕಶಾಸ್ತಿ: ಐವರ ಮನೆಗಳನ್ನು ನೆಲಸಮ ಮಾಡಿದ ಜಿಲ್ಲಾಡಳಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.