ಸಾಲ ವಸೂಲಾತಿ ವೇಳೆ ಗರ್ಭಿಣಿ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಂದ ಅಧಿಕಾರಿಗಳು

author img

By

Published : Sep 17, 2022, 9:13 AM IST

Pregnant Woman Crushed Under Tractor

ಫೈನಾನ್ಸ್ ಕಂಪನಿಯ ಅಧಿಕಾರಿಗಳು ಸಾಲ ವಸೂಲಾತಿ ವೇಳೆ ಗರ್ಭಿಣಿ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ.

ಹಜಾರಿಬಾಗ್​​(ಜಾರ್ಖಂಡ್​): ಫೈನಾನ್ಸ್​​​ಗಳಲ್ಲಿ ಸಾಲ ಪಡೆದುಕೊಳ್ಳುವುದು ಉತ್ತಮವಲ್ಲ ಎಂಬ ಮಾತುಗಳು ಈ ಹಿಂದಿನಿಂದಲೂ ಕೇಳಿ ಬರ್ತಿವೆ. ಸಾಲ ವಸೂಲಿ ಮಾಡುವ ವೇಳೆ ಇನ್ನಿಲ್ಲದ ರೀತಿಯಲ್ಲಿ ಕಿರುಕುಳ ನೀಡ್ತಾರೆ ಎಂಬ ಮಾತಿದೆ. ಅದಕ್ಕೆ ಪೂರಕ ಎಂಬ ರೀತಿಯಲ್ಲೇ ಜಾರ್ಖಂಡ್​​ನಲ್ಲೊಂದು ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಸಾಲ ವಸೂಲಾತಿ ವೇಳೆ ಫೈನಾನ್ಸ್​​​​ ಅಧಿಕಾರಿಗಳು ಗರ್ಭಿಣಿ ಮೇಲೆ ಟ್ರ್ಯಾಕ್ಟರ್​ ಹರಿಸಿ, ಕೊಂದಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಜಾರ್ಖಂಡ್​ನ ಹಜಾರಿಬಾಗ್​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಫೈನಾನ್ಸ್​​ನಲ್ಲಿ ಬಡ ಕುಟುಂಬವೊಂದು ಸಾಲ ಪಡೆದುಕೊಂಡಿತ್ತು. ಅದನ್ನು ಮರುಪಾವತಿಸದ ಕಾರಣ ಅಧಿಕಾರಿಗಳು ಸಂತ್ರಸ್ತೆಯ ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಪ್ರಕರಣ ನಡೆದಿದೆ. ಹಜಾರಿಬಾಗ್​​ನ ಇಚ್ಚಾಕ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಮೂರು ತಿಂಗಳ ಗರ್ಭಿಣಿ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಮಾಹಿತಿ ನೀಡಿದ್ದು, ಟ್ರ್ಯಾಕ್ಟರ್​​ ಮೇಲೆ ಕುಟುಂಬವೊಂದು ಸಾಲ ಪಡೆದುಕೊಂಡಿತ್ತು. ಅದನ್ನ ವಾಪಸ್ ಮಾಡದ ಕಾರಣ ಫೈನಾನ್ಸ್​ ಕಂಪನಿ ಅಧಿಕಾರಿಗಳು ರೈತನ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಅಧಿಕಾರಿಗಳು ಹಾಗೂ ರೈತನ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಅಧಿಕಾರಿಗಳು ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಹೋಗಲು ಮುಂದಾಗಿದ್ದು, ರೈತನ ಗರ್ಭಿಣಿ ಮಗಳು ಅದರ ಮುಂದೆ ಬಂದಿದ್ದಾಳೆ. ಈ ವೇಳೆ ಟ್ರ್ಯಾಕ್ಟರ್​ ಚಕ್ರದಡಿ ಸಿಲುಕಿದ್ದಾಳೆ. ತಕ್ಷಣವೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದುವೆ: ಗರ್ಭಿಣಿ ಪತ್ನಿಗೆ ಮದ್ಯ ಕುಡಿಸಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಫೈನಾನ್ಸ್ ಕಂಪನಿಯ ರಿಕವರಿ ಎಜೆಂಟ್​, ಮ್ಯಾನೇಜರ್ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಫೈನಾನ್ಸ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಅನೀಶ್ ಶಾ ಪ್ರಕರಣದ ಬಗ್ಗೆ ಎಲ್ಲ ವಿಭಾಗಗಳಿಂದಲೂ ತನಿಖೆ ನಡೆಸಲಾಗುವುದು. ಈ ಘಟನೆಯಿಂದ ನಾವು ತೀವ್ರ ಆಘಾತಕ್ಕೊಳಗಾಗಿದ್ದೇವೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.