ETV Bharat / bharat

ವಿವಾದಾತ್ಮಕ ಹೇಳಿಕೆ ನೀಡಿದ ಕರ್ಣಿ ಸೇನೆ ರಾಷ್ಟ್ರೀಯ ಅಧ್ಯಕ್ಷ ಸೂರಜ್ ಪಾಲ್ ಅಮ್ಮು

author img

By

Published : Jul 4, 2022, 8:03 PM IST

ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಮತ್ತು ಮಹಾರಾಷ್ಟ್ರದ ಅಮರಾವತಿಯಲ್ಲಿ ಉಮೇಶ್ ಕೊಲ್ಹೆ ಹತ್ಯೆ ಬಗ್ಗೆ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸೂರಜ್ ಪಾಲ್ ಅಮ್ಮು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ವಿವಾದಾತ್ಮಕ ಹೇಳಿಕೆ ನೀಡಿದ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸೂರಜ್ ಪಾಲ್ ಅಮ್ಮು
ವಿವಾದಾತ್ಮಕ ಹೇಳಿಕೆ ನೀಡಿದ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸೂರಜ್ ಪಾಲ್ ಅಮ್ಮು

ಸೋನಿಪತ್ (ಹರಿಯಾಣ) : ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಹಾಗೂ ಮಹಾರಾಷ್ಟ್ರದ ಅಮರಾವತಿಯಲ್ಲಿ ಉಮೇಶ್ ಹತ್ಯೆಯ ನಂತರ ಪ್ರಚೋದನಕಾರಿ ಮಾತುಗಳ ಪರ್ವ ಆರಂಭವಾಗಿದೆ. ಈ ನಡುವೆ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸೂರಜ್ ಪಾಲ್ ಅಮ್ಮು ಈ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹರಿಯಾಣದ ಸೋನಿಪತ್ ಜಿಲ್ಲೆಯ ದಹಿಸ್ರಾ ಗ್ರಾಮದಲ್ಲಿ ಪೃಥ್ವಿರಾಜ್ ಚೌಹಾಣ್ ಅವರ ಜನ್ಮದಿನದಂದು ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಸೂರಜ್ ಪಾಲ್ ಅಮ್ಮು ಕೂಡ ಭಾಗವಹಿಸಿದ್ದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸೂರಜ್ ಪಾಲ್ ಅಮ್ಮು, ನೂಪುರ್ ಶರ್ಮಾ ಅವರ ಹೇಳಿಕೆಯನ್ನು ಬೆಂಬಲಿಸಿದರು ಮತ್ತು ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಾರೆ. ನೂಪುರ್ ಶರ್ಮಾ ಹೇಳಿಕೆಯ ನಂತರ ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಮತ್ತು ಅಮರಾವತಿಯಲ್ಲಿ ಉಮೇಶ್ ಕೊಹ್ಲೆ ಅವರ ಕುತ್ತಿಗೆಯನ್ನು ಕತ್ತರಿಸಲಾಯಿತು. ಈ ಎರಡೂ ಪ್ರಕರಣಗಳನ್ನು ಉಲ್ಲೇಖಿಸಿ ಅಮ್ಮು ವೇದಿಕೆಯಲ್ಲೇ ಹಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ನೂಪುರ್ ಶರ್ಮಾ ಅವರನ್ನು ಕ್ಷಮೆ ಕೇಳುವಂತೆ ಹೇಳಲಾಗಿದೆ. ಇದರ ವಿರುದ್ಧ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಬಗ್ಗೆ ರಾಷ್ಟ್ರಪತಿಗಳಿಗೆ ದೂರು ನೀಡುತ್ತೇವೆ. ನಮ್ಮನ್ನು ಬೆದರಿಸಿದರೂ ನಾವು ಹೆದರುವುದಿಲ್ಲ ಎಂದು ಇದೇ ವೇಳೆ ಅಮ್ಮು ಹೇಳಿದರು.

ವಿವಾದಾತ್ಮಕ ಹೇಳಿಕೆ ನೀಡಿದ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸೂರಜ್ ಪಾಲ್ ಅಮ್ಮು

ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ತೋರಿಸುವ ಮಹಾತ್ಮಾ ಗಾಂಧಿ ನಾವಲ್ಲ. ಅನ್ಯಾಯವನ್ನು ಸಹಿಸುವುದಿಲ್ಲ. ಕೆಲವರು ನಮ್ಮನ್ನು ಅವಮಾನಿಸಲು ಬಯಸುತ್ತಿದ್ದಾರೆ. ಹಿಂದೂಗಳನ್ನು ಜಾತಿಗಳಾಗಿ ವಿಂಗಡಿಸಲಾಗಿದೆ. 1947ರಲ್ಲಿ ದೇಶ ಸ್ವತಂತ್ರವಾದಾಗ ಧರ್ಮದ ಹೆಸರಿನಲ್ಲಿ ಒಡಕು ಉಂಟಾಗಿತ್ತು, ಈಗ ವಿಭಜನೆಯ ನಂತರವೂ ನಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಉದಯಪುರ ಘಟನೆಯ ಕುರಿತು ಪ್ರತಿಕ್ರಿಯಿಸಿ, ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ನಡೆಸುವ ಮೂಲಕ ಆರೋಪಿಗಳನ್ನು ಶೀಘ್ರವಾಗಿ ಗಲ್ಲಿಗೇರಿಸಬೇಕೆಂದು ನಾವು ನಮ್ಮ ನ್ಯಾಯಾಲಯವನ್ನು ಕೈ ಮುಗಿದು ವಿನಂತಿಸುತ್ತೇವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕರ್ಣಿ ಸೇನೆ ಬಯಸಿದೆ. ಆದರೆ, ದೆಹಲಿ ಪೊಲೀಸರು ಸೆಕ್ಷನ್ 144 ಅನ್ನು ಜಾರಿ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ರಾಜಧಾನಿಯಲ್ಲಿ ವಿದ್ಯಾರ್ಥಿಗೆ ಟೀಚರ್ ಟಾರ್ಚರ್?: ಕಾರಣ ಕೇಳಿದ ಪೋಷಕರಿಗೆ ಇಂತಹ ಉತ್ತರ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.