ETV Bharat / bharat

ಸರ್ಕಾರಿ ಶೌಚಾಲಯದ ಗೋಡೆ ಕುಸಿದು ಐದು ವರ್ಷದ ಬಾಲಕ ಸಾವು

author img

By

Published : Mar 13, 2023, 7:24 PM IST

ಸ್ನೇಹಿತರೊಂದಿಗೆ ಶೌಚಾಲಯದ ಬಳಿ ಆಟವಾಡುತ್ತಿರುವಾಗ ಶೌಚಾಲಯದ ಮೇಲ್ಛಾವಣಿ ಮತ್ತು ಗೋಡೆ ಕುಸಿದು ಪಂಕಜ್​ (5) ಎಂಬ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.

lakhimpur-kheri-government-toilet-collapses-child-dies-buried-under-debris
ಉತ್ತರ ಪ್ರದೇಶ: ಸರ್ಕಾರಿ ಶೌಚಾಲಯದ ಗೋಡೆ ಕುಸಿದು ಐದು ವರ್ಷದ ಬಾಲಕ ಸಾವು

ಲಖಿಂಪುರ (ಉತ್ತರ ಪ್ರದೇಶ): ಸರ್ಕಾರ ನಿರ್ಮಿಸಿದ ಶೌಚಾಲಯದ ಮೇಲ್ಛಾವಣಿ ಮತ್ತು ಗೋಡೆ ಕುಸಿದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದೆ. ಪಂಕಜ್​ (5) ಮೃತ ಬಾಲಕನ ಹೆಸರು. ಕಳೆದ ಶನಿವಾರ ತನ್ನ ಸ್ನೇಹಿತರೊಂದಿಗೆ ಶೌಚಾಲಯದ ಬಳಿ ಆಟವಾಡುತ್ತಿರುವಾಗ ಈ ಘಟನೆ ಜರುಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

2016ರಲ್ಲಿ ಲಾಲ್ತ ಎಂಬುವರ ಮನೆಯ ಹೊರಗೆ ಸರ್ಕಾರದಿಂದ ಶೌಚಾಲಯ ನಿರ್ಮಿಸಲಾಗಿತ್ತು. ಶನಿವಾರ ಲಲ್ತಾ ಅವರ ಪುತ್ರ ಪಂಕಜ್​ (5) ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಏಕಾಏಕಿ ಶೌಚಾಲಯದ ಮೇಲ್ಛಾವಣಿ ಮತ್ತು ಗೋಡೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಘಟನೆ ಬಳಿಕ ಮಗುವಿನ ತಂದೆ ಪೊಲೀಸರಿಗೆ ದೂರು ನೀಡಿದರು ಎಂದು ಸ್ಥಳೀಯ ಪೊಲೀಸ್​ ಠಾಣೆಯ ಇನ್ಸ್​​ಪೆಕ್ಟರ್​ ದೀಪಕ್​ ರೈ ತಿಳಿಸಿದರು.

ಕಳಪೆ ಕಾಮಗಾರಿ: ಆಗಿನ ಗ್ರಾಮ ಪಂಚಾಯಿತಿ ಸದಸ್ಯ ಗುತ್ತಿಗೆದಾರರೊಂದಿಗೆ ಕೈ ಜೋಡಿಸಿ ಕಳಪೆ ಕಾಮಗಾರಿ ಮತ್ತು ಗುಣಮಟ್ಟವಿಲ್ಲದ ಕಟ್ಟಡ ಸಾಮಗ್ರಿಗಳನ್ನು ಬಳಸಿ ಶೌಚಾಲಯವನ್ನು ನಿರ್ಮಿಸಿದ್ದಾರೆ ಎಂದು ಮೃತ ಮಗುವಿನ ಕುಟಂಬಸ್ಥರು ಆರೋಪಿಸಿದ್ದಾರೆ. ಆರೋಪವನ್ನು ತಳ್ಳಿಹಾಕಿರುವ ಗ್ರಾಮ ಪಂಚಾಯಿತಿ ಸದಸ್ಯ ಶ್ರವಣ ಯಾದವ್​, ಶೌಚಾಲಯದ ಬಳಿ ಎರಡು ಪ್ರಾಣಿಗಳು ಜಗಳವಾಡುತ್ತಿದ್ದಾಗ ಡಿಕ್ಕಿ ಹೊಡೆದ ಪರಿಣಾಮ ಶೌಚಾಲಯ ಕುಸಿದು ಬಿದ್ದು ಈ ಘಟನೆ ನಡೆದಿದೆ. ಕಳೆಪೆ ಕಾಮಗಾರಿಯಿಂದ ಅಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಟೋರಿಕ್ಷಾ ಮತ್ತು ಟ್ರಕ್ ಡಿಕ್ಕಿ: ಗಂಗಾನದಿಗೆ ಪವಿತ್ರ ಸ್ನಾನ ಮಾಡಲು ಹೊರಟ ಐವರ ದಾರುಣ ಸಾವು

ಅಪ್ರಾಪ್ತರಿಂದ ಬಾಲಕಿಯ ಮೇಲೆ ಅತ್ಯಾಚಾರ: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಮಾರ್ಚ್ 11 ರಂದು ಬಾಲಕಿಯ ಮೇಲೆ ಇಬ್ಬರು ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಮಾರ್ಚ್ 9 ರಂದು ಜಿಲ್ಲೆಯ ಜುನ್ವಾಯ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈಗಾಗಲೇ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜುನ್ವಾಯಿ ಪೊಲೀಸ್ ಠಾಣೆಯ ಉಸ್ತುವಾರಿ ಪುಷ್ಕರ್ ಸಿಂಗ್ ಮೆಹ್ರಾ, ಮಾರ್ಚ್ 9 ರಂದು 6 ನೇ ತರಗತಿ ಓದುತ್ತಿದ್ದ ಎಂಟು ವರ್ಷದ ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಳು. ಈ ಸಮಯದಲ್ಲಿ ಸುಮಾರು 12 ವರ್ಷ ವಯಸ್ಸಿನ ಇಬ್ಬರು ಹದಿಹರೆಯದವರು ಅವಳ ಬಳಿಗೆ ಬಂದು ಆಟವಾಡುವ ನೆಪದಲ್ಲಿ ಮಾತನಾಡಲು ಪ್ರಾರಂಭಿಸಿದ್ದಾರೆ. ನಂತರ ಇಬ್ಬರು ಆರೋಪಿಗಳು ಹುಡುಗಿಯನ್ನು ತಮ್ಮೊಂದಿಗೆ ಬರುವಂತೆ ಮನವೊಲಿಸಿದ್ದಾರೆ. ಅನಂತರ ಅವಳನ್ನು ಕೃಷಿ ಭೂಮಿಗೆ ಕರೆದೊಯ್ದಿದ್ದಾರೆ. ಅಲ್ಲಿಗೆ ತಲುಪಿದ ನಂತರ ಇಬ್ಬರು ಆರೋಪಿಗಳು ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಮೆಹ್ರಾ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಪಕ್ಷದ ನೇತೃತ್ವ ವಹಿಸಿರುವವರೇ ರೌಡಿ ಶೀಟರ್: ಶೋಭಾ ಕರಂದ್ಲಾಜೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.