ETV Bharat / bharat

ಲಖೀಂಪುರ ಖೇರಿ ಹಿಂಸಾಚಾರ.. ನ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​..

author img

By

Published : Nov 12, 2021, 4:39 PM IST

sc adjourns hearing
ಸುಪ್ರೀಂಕೋರ್ಟ್​

ಲಖೀಂಪುರ ಖೇರಿಯಲ್ಲಿ(Lakhimpur Kheri violence) ರೈತರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟ ಪ್ರಕರಣದ ವಿಚಾರಣೆಯನ್ನು ಯುಪಿ ಸರ್ಕಾರದ (Uttar Pradesh government) ಕೋರಿಕೆಯ ಮೇರೆಗೆ ಸುಪ್ರೀಂಕೋರ್ಟ್​(Supreme Court) ನವೆಂಬರ್​ 15ಕ್ಕೆ ಮುಂದೂಡಿದೆ..

ನವದೆಹಲಿ : ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ(Lakhimpur Kheri violence) ರೈತರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟ ಪ್ರಕರಣದ ವಿಚಾರಣೆಯನ್ನು ಯುಪಿ ಸರ್ಕಾರದ (Uttar Pradesh government) ಕೋರಿಕೆಯ ಮೇರೆಗೆ ಸುಪ್ರೀಂಕೋರ್ಟ್​​(Supreme Court) ನವೆಂಬರ್​ 15ಕ್ಕೆ ಮುಂದೂಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಮೇಲುಸ್ತುವಾರಿ ವಹಿಸಲು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿಯನ್ನು ನೇಮಿಸಲು ಆದೇಶಿಸಿತ್ತು. ಬಳಿಕ ಉತ್ತರ ಪ್ರದೇಶ ಸರ್ಕಾರ ಅಲಹಾಬಾದ್​ ಹೈಕೋರ್ಟ್​​ ನಿವೃತ್ತ ನ್ಯಾಯಮೂರ್ತಿ ಪ್ರದೀಪ್​ ಕುಮಾರ್​ ಶ್ರೀವಾಸ್ತವ್​ ಅವರನ್ನು ಏಕಸದಸ್ಯ ತನಿಖಾ ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಿತ್ತು. ಅಲ್ಲದೇ, 2 ತಿಂಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸಲು ಗಡುವು ನೀಡಿತ್ತು.

ಹೀಗಾಗಿ, ಪ್ರಕರಣದ ತನಿಖೆಯು ಪ್ರಗತಿಯಲ್ಲಿರುವುದರಿಂದ ಕೋರ್ಟ್​ ವಿಚಾರಣೆಯನ್ನು ಮುಂದೂಡುವಂತೆ ಸರ್ಕಾರ ಮಾಡಿದ ಮನವಿ ಆಧಾರದ ಮೇಲೆ ಸುಪ್ರೀಂಕೋರ್ಟ್​ ನ.15ಕ್ಕೆ ವಿಚಾರಣೆ ಮುಂದೂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.