ETV Bharat / bharat

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ದುರ್ಮರಣ

author img

By

Published : Sep 12, 2022, 8:24 AM IST

Updated : Sep 12, 2022, 9:48 AM IST

ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ದುರ್ಮರಣಕ್ಕೀಡಾಗಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ.

Chhattisgarh
Chhattisgarh

ಕೊರ್ಬಾ(ಛತ್ತೀಸ್​​ಗಢ): ಇಂದು ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸಕ್ಕೆ ಏಳು ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಛತ್ತೀಸ್​​ಗಢದ ಕೊರ್ಬಾ ಎಂಬಲ್ಲಿ ನಡೆದಿದೆ. ಇಲ್ಲಿನ ಪಾಂಡಿ ಉಪೋರ್ಡಾ ರಾಷ್ಟ್ರೀಯ ಹೆದ್ದಾರಿ 130ರಲ್ಲಿ ಅಪಘಾತ ಸಂಭವಿಸಿತು.

ಇದನ್ನೂ ಓದಿ: ನಿಯಂತ್ರಣ ತಪ್ಪಿ ಬೈಕ್​​ಗೆ ಡಿಕ್ಕಿ ಹೊಡೆದ ಕಾರು.. ಒಂದೇ ಕುಟುಂಬದ ನಾಲ್ವರು ಸಾವು

ವೇಗವಾಗಿ ಚಲಿಸುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಅನೇಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

ಖಾಸಗಿ ಟ್ರಾವೆಲ್ಸ್​​ಗೆ ಸೇರಿದ್ದ ಬಸ್​ ಛತ್ತೀಸ್​​​ಗಢ ರಾಜಧಾನಿ ರಾಯ್​ಪುರದಿಂಧ ಸರ್​​ಗುಜ್​​ಗೆ ತೆರಳುತ್ತಿತ್ತು. ಬೆಳಗ್ಗೆ 4 ಗಂಟೆ ವೇಳೆಗೆ ಬಂಗೋ ಪೊಲೀಸ್ ಠಾಣಾ ವ್ಯಾಪ್ತಿಯ ಮಡಾಯಿ ಘಾಟಿ ಬಳಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರಕ್​​​ಗೆ ಡಿಕ್ಕಿ ಹೊಡೆದಿದೆ. ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಈ ಅವಘಡ ಸಂಭವಿಸಿದೆ.

Last Updated : Sep 12, 2022, 9:48 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.