ETV Bharat / bharat

ಕುಡಿದ ನಶೆಯಲ್ಲಿ ಹೆತ್ತವರ ಮೇಲೆ ಹಲ್ಲೆ, ಕೊಲೆ.. ಆರೋಪಿ ಅರೆಸ್ಟ್​

author img

By

Published : Sep 8, 2021, 3:48 PM IST

Alcohol  man
Alcohol manAlcohol man

ಕುಡಿದ ನಶೆಯಲ್ಲಿ ಪಾಪಿ ಮಗನೋರ್ವ ಪೋಷಕರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಕೇರಳದ ತ್ರಿಶೂರ್​ದಲ್ಲಿ ನಡೆದಿದೆ.

ತ್ರಿಶೂರ್​(ಕೇರಳ): ಕಂಠಪೂರ್ತಿ ಕುಡಿದ ನಶೆಯಲ್ಲಿ ವ್ಯಕ್ತಿಯೋರ್ವ ತನ್ನ ವೃದ್ಧ ಪೋಷಕರ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಕೇರಳದ ತ್ರಿಶೂರ್​ದಲ್ಲಿನ ಅವಿನಿಸೇರಿ ಎಂಬಲ್ಲಿ ನಡೆದಿದೆ. ಮಂಗಳವಾರ ರಾತ್ರಿ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರದೀಪ್​ ಎಂಬ ವ್ಯಕ್ತಿ ಮದ್ಯಪಾನ ಮಾಡಿ ಮನೆಗೆ ಆಗಮಿಸಿದ್ದು, ಈ ವೇಳೆ ಕೊಡಲಿಯಿಂದ ತಂದೆ-ತಾಯಿ ಮೇಲೆ ಹಲ್ಲೆ ಮಾಡಿದ್ದ. ಹೀಗಾಗಿ ಗಂಭೀರವಾಗಿ ಗಾಯಗೊಳಿಸಿದ್ದ ವೃದ್ಧ ದಂಪತಿಯನ್ನು ತಕ್ಷಣವೇ ತ್ರಿಶೂರ್​​ದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ತ್ರಿಶೂರ್ ಮೆಡಿಕಲ್ ಕಾಲೇಜ್​ಗೆ ಕರೆದೊಯ್ಯುವಂತೆ ಅಲ್ಲಿನ ವೈದ್ಯರು ಸೂಚನೆ ನೀಡಿದ್ದಾರೆ. ಅಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ ಮಂಗಳವಾರ ರಾತ್ರಿ ತಂದೆಕರುತೇದತ್​ ರಾಮಕೃಷ್ಣನ್ (75), ಹಾಗೂ ಇಂದು ಬೆಳಗ್ಗೆ ತಾಯಿ ತಂಕಮಣಿ (70) ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿರಿ: ಪಿಹೆಚ್​​ಡಿ, ಸ್ನಾತಕೋತ್ತರ ಪದವಿಗಳಿಗೆ ಯಾವುದೇ ಬೆಲೆ ಇಲ್ಲ : ತಾಲಿಬಾನ್​ ಶಿಕ್ಷಣ ಸಚಿವ

ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗೋಸ್ಕರ ವಶಕ್ಕೆ ಪಡೆದುಕೊಂಡಿದ್ದಾರೆ.

ಕಳೆದ ಅನೇಕ ವರ್ಷಗಳಿಂದ ಮದ್ಯಪಾನ ಮಾಡುತ್ತಿದ್ದ ಪ್ರದೀಪ್​, ಮನೆಯಲ್ಲಿ ಮೇಲಿಂದ ಮೇಲೆ ಜಗಳವಾಡುತ್ತಿದ್ದನು. ಅದೇ ಕಾರಣಕ್ಕಾಗಿ ಕಟ್ಟಿಕೊಂಡ ಹೆಂಡತಿ ಕೂಡ ತನ್ನ ಮಗಳೊಂದಿಗೆ ತವರು ಮನೆಯಲ್ಲಿ ವಾಸವಾಗಿದ್ದಾಳೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.